
ನವದೆಹಲಿ: ಯುಪಿಎ ಅವಧಿಯಲ್ಲಿ ನಡೆದಿದ್ದ ಕಲ್ಲಿದ್ದಲು ಹಗರಣದಲ್ಲಿ ಮಾಜಿ ಸಂಸದ ವಿಜಯ್ ದರ್ದಾ ಅವರಿಗೆ ಸ್ಥಳೀಯ ನ್ಯಾಯಾಲಯ 4 ವರ್ಷ ಜೈಲು ಶಿಕ್ಷೆ ವಿಧಿಸಿ ಬುಧವಾರ ಆದೇಶ ಹೊರಡಿಸಿದೆ. ಉಳಿದಂತೆ ದರ್ದಾ ಅವರ ಪುತ್ರ ದೇವೇಂದ್ರ ದರ್ದಾ, ಜೆಎಲ್ಡಿ ಯವತ್ಮಾಲ್ ಎನರ್ಜಿ ಲಿ.ನ ನಿರ್ದೇಶಕ ಮನೋಜ್ ಕುಮಾರ್ಗೆ ತಲಾ 4 ವರ್ಷ, ಕಲ್ಲಿದ್ದಲು ಸಚಿವಾಲಯದ ಮಾರ್ಜಿ ಕಾರ್ಯದರ್ಶಿ ಎಚ್.ಸಿ.ಗುಪ್ತಾ, ಮತ್ತು ಇತರೆ ಇಬ್ಬರು ಅಧಿಕಾರಿಗಳಾದ ಕೆ.ಎಸ್.ಕ್ರೋಪಾ, ಕೆ.ಸಿ.ಸಮರಿಯಾ ಅವರಿಗೆ ತಲಾ 3 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಪ್ರಕರಣದಲ್ಲಿ ಮೇಲ್ಕಂಡ 6 ಜನರು ದೋಷಿಗಳು ಎಂದು ನ್ಯಾಯಾಲಯ ಜು.14ರಂದು ತೀರ್ಪು ನೀಡಿತ್ತು. ಶಿಕ್ಷೆಯ ಪ್ರಮಾಣವನ್ನು ಬುಧವಾರ ಪ್ರಕಟಿಸಲಾಗಿದೆ.
ಕಲ್ಲಿದ್ದಲು ಹಗರಣ: ಟಿಎಂಸಿ ಮುಖಂಡನ ಪತ್ನಿಗೆ ಏರ್ಪೋರ್ಟ್ನಲ್ಲಿ ತಡೆ
ಕಲ್ಲಿದ್ದಲು ಹಗರಣ: ಮಾಜಿ ಕಾರ್ಯದರ್ಶಿ ಎಚ್.ಸಿ. ಗುಪ್ತಾಗೆ 3 ವರ್ಷ ಜೈಲು ಶಿಕ್ಷೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ