ಪಹಲ್ಗಾಂ ಘಟನೆ ತಪ್ಪು; ಉಗ್ರ ಪಾಕಿಸ್ತಾನಕ್ಕೆ ಅಮೆರಿಕ ನೇರ ಎಚ್ಚರಿಕೆ!

Published : May 09, 2025, 01:32 AM IST
ಪಹಲ್ಗಾಂ ಘಟನೆ ತಪ್ಪು; ಉಗ್ರ ಪಾಕಿಸ್ತಾನಕ್ಕೆ ಅಮೆರಿಕ ನೇರ ಎಚ್ಚರಿಕೆ!

ಸಾರಾಂಶ

ಪಾಕಿಸ್ತಾನದ ಕ್ಷಿಪಣಿ ದಾಳಿಯ ವಿಫಲ ಪ್ರಯತ್ನಗಳ ನಂತರ, ಭಾರತವು ಪಾಕಿಸ್ತಾನದ ವಿರುದ್ಧ ಕಠಿಣ ಪ್ರತೀಕಾರದ ಕ್ರಮವನ್ನು ಆರಂಭಿಸಿದೆ. ಈ ಮಧ್ಯೆ, ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಪಾಕಿಸ್ತಾನಕ್ಕೆ ತೀವ್ರ ಛೀಮಾರಿ ಹಾಕಿದ್ದಾರೆ. 

ನವದೆಹಲಿ (ಮೇ.9): ಪಾಕಿಸ್ತಾನದ ಕ್ಷಿಪಣಿ ದಾಳಿಯ ವಿಫಲ ಪ್ರಯತ್ನಗಳ ನಂತರ, ಭಾರತವು ಪಾಕಿಸ್ತಾನದ ವಿರುದ್ಧ ಕಠಿಣ ಪ್ರತೀಕಾರದ ಕ್ರಮವನ್ನು ಆರಂಭಿಸಿದೆ. ಈ ಮಧ್ಯೆ, ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಪಾಕಿಸ್ತಾನಕ್ಕೆ ತೀವ್ರ ಛೀಮಾರಿ ಹಾಕಿದ್ದಾರೆ. 

'ಪಾಕಿಸ್ತಾನ ಭಯೋತ್ಪಾದನೆಗೆ ಬೆಂಬಲ ನೀಡುವುದನ್ನು ಮೊದಲು ನಿಲ್ಲಿಸಬೇಕು. ಇಲ್ಲದಿದ್ರೆ ಅದರ ಪರಿಣಾಮ ಇನ್ನಷ್ಟು ಭೀಕರವಾಗಿರುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಗುರುವಾರ (ಮೇ 8, 2025) ಪಾಕಿಸ್ತಾನವು ಜಮ್ಮು, ಪಠಾಣ್‌ಕೋಟ್, ಮತ್ತು ಉಧಂಪುರದ ಭಾರತೀಯ ಸೇನಾ ನೆಲೆಗಳ ಮೇಲೆ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು ಪ್ರಯತ್ನಿಸಿತು, ಆದರೆ ಭಾರತದ ಅತ್ಯಾಧುನಿಕ ವಾಯು ರಕ್ಷಣಾ ವ್ಯವಸ್ಥೆಯು ಎಲ್ಲಾ ದಾಳಿಗಳನ್ನು ಯಶಸ್ವಿಯಾಗಿ ತಡೆಗಟ್ಟಿತು. ಪಾಕಿಸ್ತಾನದ ಕ್ಷಿಪಣಿ ದಾಳಿಯಿಂದ ಯಾವುದೇ ಸಾವು ನೋವು ಸಂಭವಿಸಿಲ್ಲ. ಆದರೆ ಈ ಘಟನೆಗೆ ಪ್ರತೀಕಾರವಾಗಿ ಭಾರತವು ಪಾಕಿಸ್ತಾನದ ವಿರುದ್ಧ ತಕ್ಷಣದ ಕಾರ್ಯಾಚರಣೆಯನ್ನು ಆರಂಭಿಸಿದೆ.

ಇದನ್ನೂ ಓದಿ: ಭಾರತ ಮತ್ತು ಬಲೂಚಿಸ್ತಾನದ ನಡುವೆ ಸಿಲುಕಿದ ಪಾಕ್; ಕ್ವೆಟ್ಟಾ, ಕರಾಚಿಯಲ್ಲಿ ಬಲೂಚ್ ಅರ್ಮಿ ದಾಳಿ!

ಪಾಕಿಸ್ತಾನವು ಭಯೋತ್ಪಾದಕ ದಾಳಿಗಳ ಕುರಿತು ಸ್ವತಂತ್ರ ತನಿಖೆ ನಡೆಸಬೇಕು. ಅಪರಾಧಿಗಳನ್ನು ಜವಾಬ್ದಾರರನ್ನಾಗಿಸುವ ಯಾವುದೇ ಪ್ರಯತ್ನವನ್ನು ನಾವು ಬೆಂಬಲಿಸುತ್ತೇವೆ. ಭಾರತ ಮತ್ತು ಪಾಕಿಸ್ತಾನ ಈ ಸಂಘರ್ಷ, ಪರಿಹಾರಕ್ಕಾಗಿ ಒಟ್ಟಾಗಿ ಕೆಲಸ ಮಾಡಬೇಕು ಅಮೆರಿಕದ ವಿದೇಶಾಂಗ ಇಲಾಖೆಯ ವಕ್ತಾರೆ ಟ್ಯಾಮಿ ಬ್ರೂಸ್  ಒತ್ತಾಯಿಸಿದ್ದಾರೆ. ಪ್ರಸ್ತುತ, ಎರಡೂ ದೇಶಗಳ ಸರ್ಕಾರಗಳೊಂದಿಗೆ ವಿವಿಧ ಹಂತಗಳಲ್ಲಿ ಮಾತುಕತೆಗಳು ನಡೆಯುತ್ತಿವೆ.

ಇದನ್ನೂ ಓದಿ: ಉಗ್ರ ಹಫೀಸ್ ಸಯೀದ್ ಮನೆ ಟಾರ್ಗೆಟ್; ಲಾಹೋರ್ ಮೇಲೆ ಭಾರತೀಯ ಸೇನೆ ಡ್ರೋನ್ ಅಟ್ಯಾಕ್!

ಅಮೆರಿಕದ ಈ ಎಚ್ಚರಿಕೆಯು ಪಾಕಿಸ್ತಾನದ ಮೇಲೆ ಅಂತಾರಾಷ್ಟ್ರೀಯ ಒತ್ತಡವನ್ನು ಗಣನೀಯವಾಗಿ ಹೆಚ್ಚಿಸಿದೆ. ಭಾರತವು ತನ್ನ ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಈ ಒತ್ತಡವು ಪಾಕಿಸ್ತಾನದ ಮುಂದಿನ ಕ್ರಮಗಳ ಮೇಲೆ ಗಮನಾರ್ಹ ಪರಿಣಾಮ ಬೀರಬಹುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..