ಗಡಿಯಲ್ಲಿ 60 ಸಾವಿರ ಸೈನಿಕರ ನಿಯೋಜಿಸಿದ ಚೀನಾ ನಡೆಯನ್ನು ಖಂಡಿಸಿದ ಅಮೆರಿಕ ಕಾರ್ಯದರ್ಶಿ!

Published : Oct 10, 2020, 05:49 PM IST
ಗಡಿಯಲ್ಲಿ 60 ಸಾವಿರ ಸೈನಿಕರ ನಿಯೋಜಿಸಿದ ಚೀನಾ ನಡೆಯನ್ನು ಖಂಡಿಸಿದ ಅಮೆರಿಕ ಕಾರ್ಯದರ್ಶಿ!

ಸಾರಾಂಶ

ಭಾರತದ ಗಡಿ ಸಂಘರ್ಷಕ್ಕೆ ಕಾರಣವಾಗಿರುವ ಚೀನಾ ನಡೆಯನ್ನು ಅಮೆರಿಕ ಕಾರ್ಯದರ್ಶಿ ಖಂಡಿಸಿದ್ದಾರೆ. ಚೀನಾ ನಿಯಮ ಉಲ್ಲಂಘನೆ ಹಾಗೂ ಗಡಿಯಲ್ಲಿ ಹೆಚ್ಚುವರಿ ಸೈನಿಕರ ನಿಯೋಜನೆ ಉದ್ದೇಶ ಪೂರ್ವಕವಾಗಿ ಶಾಂತಿ ಕದಡುವ ಯತ್ನ ಎಂದಿದ್ದಾರೆ.   

ವಾಶಿಂಗ್ಟನ್(ಅ.10):  ಭಾರತ ಹಾಗೂ ಚೀನಾ ನಡುವಿನ ಗಡಿ ಸಂಘರ್ಷ ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲೂ ಸದ್ದು ಮಾಡುತ್ತಿದೆ. ಚೀನಾದ ಕುತಂತ್ರ ಬುದ್ದಿಗೆ ಭಾರಿ ವಿರೋಧ ವ್ಯಕ್ತವಾಗುತ್ತಿದೆ. ಇದೀಗ ಅಮೆರಿಕ ಕಾರ್ಯದರ್ಶಿ ಮೈಕ್ ಪೊಂಪಿಯೊ, ಚೀನಾ ನಡೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ವಾಸ್ತವಿಕ ಗಡಿ ನಿಯಂತ್ರಣ ರೇಖೆ ಬಳಿಕ ಚೀನಾ ಬರೋಬ್ಬರಿ 60,000 ಸೈನಿಕರನ್ನು ನಿಯೋಜಿಸಿದೆ. ಇದು ಕ್ವಾಡ್(QUAD) ರಾಷ್ಟ್ರಗಳಿಗೆ  ಚೀನಾ ಹಾಕಿದ ಬೆದರಿಕೆಯಾಗಿದೆ ಎಂದು ಮೈಕ್ ಪೊಂಪೆ ಹೇಳಿದ್ದಾರೆ.

ಚೀನಾಗೆ ಸಿಗಲ್ಲ ದೀಪಾವಳಿ 'ಸಿಹಿ': ಸರ್ಕಾರದ ದಿಟ್ಟ ಕ್ರಮಕ್ಕೆ ಡ್ರ್ಯಾಗನ್ ತತ್ತರ!.

ಟೊಕಿಯೋದಲ್ಲಿ ನಡೆದ ಕ್ವಾಡ್ ರಾಷ್ಟ್ರಗಳ(ಅಮೆರಿಕ, ಜಪಾನ್, ಭಾರತ ಹಾಗೂ ಆಸ್ಟ್ರೇಲಿಯಾ) ಮಹತ್ವದ ಸಭ ಬಳಿಕ ಮೈಕ್ ಪೊಂಪಿಯೊ ಈ ವಿಚಾರ ಹೇಳಿದ್ದಾರೆ. ಇಂಡೋ-ಪೆಸಿಫಿಕ್ ರಾಷ್ಟ್ರಗಳ ವಿದೇಶಾಂಗ ಮಂತ್ರಿಗಳು ಟೊಕಿಯೋದಲ್ಲಿ ಭೇಟಿಯಾಗಿದ್ದರು. ಕೊರೋನಾ ವಕ್ಕರಿಸಿದ ಬಳಿಕ ನಡೆಯುತ್ತಿರುವ ಮೊದಲ ಮಾತುಕತೆ ಇದಾಗಿದೆ.

ಭಾರತ, ಅಮೆರಿಕ, ಜಪಾನ್ ಹಾಗೂ ಆಸ್ಟ್ರೇಲಿಯಾ ಅತೀ ದೊಡ್ಡ ಪ್ರಜಾಪ್ರಭುತ್ವ ಹಾಗೂ  ಅತ್ಯಂತ ಬಲಿಷ್ಠ ಆರ್ಥಿಕತೆ ಹೊಂದಿ ರಾಷ್ಟ್ರಗಳು. ಚೀನಾದ ಕಮ್ಯೂನಿಸ್ಟ್ ಪಕ್ಷ ಕ್ವಾಡ್ ರಾಷ್ಟ್ರಗಳಿಗೆ ಬೆದರಿಕೆ ಹಾಕುವ ಪ್ರಯತ್ನ ಮಾಡುತ್ತಿದೆ. ಇದೀಗ ಭಾರತದ ಗಡಿಯಲ್ಲಿ ವಾಸ್ತವ ರೇಖೆ ಬದಲಿಸವು ಪ್ರಯತ್ನ, ಒಳನುಸುಳುವ ಯತ್ನ ಸೇರಿದಂತೆ ಹಲವು ರೀತಿಯಲ್ಲಿ ಗಡಿ ನಿಯಮ ಉಲ್ಲಂಘಿಸುತ್ತಿದೆ ಎಂದು ಮೈಕ್ ಪೊಂಪಿಯೊ ಹೇಳಿದ್ದಾರೆ.

ಯುಎಸ್ ವಿದೇಶಾಂಗ ಕಾರ್ಯದರ್ಶಿ ಮೈಕ್ ಪೊಂಪಿಯೊ ಟೋಕಿಯೊದಲ್ಲಿ ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನು ಭೇಟಿಯಾಗಿದ್ದಾರೆ.  ಜಗತ್ತಿನಾದ್ಯಂತ ಪ್ರಗತಿ, ಶಾಂತಿ, ಸಮೃದ್ಧಿ ಮತ್ತು ಸುರಕ್ಷತೆಗಾಗಿ ಒಟ್ಟಾಗಿ ಕೆಲಸ ಮಾಡುವ ಅಗತ್ಯವನ್ನು ಅವರು ಒತ್ತಿಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇಂಡಿಗೋ ವಿಮಾನ ರದ್ದಾಗಿ ಪರದಾಡುತ್ತಿರುವ ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ
ಅಫೀಸ್‌ ಸಮಯ ಬಳಿಕ ಕರೆ-ಇಮೇಲ್ ಮಾಡಂಗಿಲ್ಲ, ಡಿಸ್‌ಕನೆಕ್ಟ್ ಬಿಲ್ ಲೋಕಸಭೆಯಲ್ಲಿ ಮಂಡನೆ