
ಅಯೋಧ್ಯೆ(ಜ.07): ಗುರುವಾರ ರಾತ್ರಿ 12 ಗಂಟೆ ಸುಮಾರಿಗೆ ಸಂಭವಿಸಿದ ಭೂಕಂಪದಿಂದ ರಾಮನಗರಿ ಅಯೋಧ್ಯೆಯ ಭೂಮಿ ಕಂಪಿಸಿದೆ. ಭೂಕಂಪನದ ರಾಷ್ಟ್ರೀಯ ಕೇಂದ್ರದ (National Centre for Seismology)ಪ್ರಕಾರ, ಭೂಕಂಪದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 4.3 ರಷ್ಟಿತ್ತು ಮತ್ತು ಅದರ ಕೇಂದ್ರಬಿಂದುವು ನೆಲದಿಂದ 15 ಕಿಮೀ ಕೆಳಗೆ ನೇಪಾಳದಲ್ಲಿದೆ. ಆದರೆ, ಭೂಕಂಪದಿಂದ ಯಾವುದೇ ರೀತಿಯ ಪ್ರಾಣ ಅಥವಾ ಆಸ್ತಿ ಪಾಸ್ತಿ ಹಾನಿ ಬಗ್ಗೆ ಮಾಹಿತಿ ಬಂದಿಲ್ಲ. ಕಂಪನದಿಂದ ಭಯಭೀತರಾದ ಜನರು ಮನೆಯಿಂದ ಹೊರಗೆ ಓಡಿ ಹೋಗಿದ್ದಾರೆ.
ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭೂಕಂಪವು ರಾತ್ರಿ 11:59 ಕ್ಕೆ ಸಂಭವಿಸಿದೆ ಹಾಗೂ 22 ಸೆಕೆಂಡುಗಳವರೆಗೆ ಭೂಮಿ ಕಂಪಿನಿಸಿದ ಅನುಭವವಾಗಿದೆ. ಇದರ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 4.3 ಎಂದು ಅಳೆಯಲಾಗಿದೆ. ಕೇಂದ್ರದ ಪ್ರಕಾರ, ಅದರ ಕೇಂದ್ರವು ಭೂಮಿಯಿಂದ 15 ಕಿ.ಮೀ. ಾಳದಲ್ಲಿತ್ತು. ಇದೇ ವೇಳೆ ಕೆಲವರಿಗೆ ತಡರಾತ್ರಿ ಭೂಕಂಪನದ ಅನುಭವವಾಗಿದ್ದು, ಜನರು ಮನೆಗಳಿಂದ ಹೊರಬಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ