'ಮುಸ್ಲಿಂ ವರ್ತಕರಿಂದ ತರಕಾರಿ ಖರೀದಿ ಬೇಡ' ಕಾರಣ ಕೊಟ್ಟ ಬಿಜೆಪಿ ಶಾಸಕ!

Published : Apr 28, 2020, 05:02 PM ISTUpdated : Apr 28, 2020, 05:32 PM IST
'ಮುಸ್ಲಿಂ ವರ್ತಕರಿಂದ ತರಕಾರಿ ಖರೀದಿ ಬೇಡ' ಕಾರಣ ಕೊಟ್ಟ ಬಿಜೆಪಿ ಶಾಸಕ!

ಸಾರಾಂಶ

ಮುಸಲ್ಮಾನರಿಂದ ಜತರಕಾರಿ ಖರೀದಿ ಮಾಡಬೇಡಿ ಎಂದ ಬಿಜೆಪಿ ಶಾಸಕ/ ಉತ್ತರ ಪ್ರದೇಶದ ಶಾಸಕನ ಹೇಳಿಕೆಗೆ ಟೀಕೆ/ ಹೇಳಿಕೆ ಹಿಂದಿನ ಕಾರಣವನ್ನು ಕೊಟ್ಟ ಸುರೇಶ್ ತಿವಾರಿ

ಲಕ್ನೋ(ಏ.28) 'ಮುಸ್ಲಿಮರಿಂದ ಯಾವ ಕಾರಣಕ್ಕೂ ತರಕಾರಿ ಖರೀದಿ ಮಾಡಬೇಡಿ' ಉತ್ತರ ಪ್ರದೇಶದ ಬಿಜೆಪಿ ನಾಯಕರೊಬ್ಬರು ನೀಡಿರುವ ಈ ಹೇಳಿಕೆ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.  ದೇವರಿಯಾ ಜಿಲ್ಲೆಯ ಬರಹಜ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸುರೇಶ್ ತಿವಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕ್ಷೇತ್ರದ ನಗರ ಪಾಲಿಕೆಗೆ ಭೇಟಿ ನೀಡಿದ್ದ ವೇಳೆ ಅಲ್ಲಿಯ ಸದಸ್ಯರಿಗೆ ಕೊರೊನಾಗೆ ಸಂಬಂಧಿಸಿದ ಸಲಹೆಗಳನ್ನು ನೀಡುತ್ತಿದ್ದರು. ನೀವೆಲ್ಲರೂ ಒಂದು ಮಾತನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಯಾರು ಮುಸ್ಲಿಮರ ಬಳಿ ತರಕಾರಿ ಖರೀದಿಸಬೇಡಿ ಎಂದು ಈ ಸಂದರ್ಭದಲ್ಲಿ ಹೇಳಿದ್ದರು.

ವಿಡಿಯೋ ವೈರಲ್ ಆಗ್ತಿದ್ದಂತೆ ಶಾಸಕರು ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.   ಸಭೆಯಲ್ಲಿದ್ದವರ ಪ್ರಶ್ನೆಗಳಿಗೆ ಉತ್ತರ ನೀಡುತ್ತಿದ್ದೆ. ಕೆಲ ಮುಸ್ಲಿಮರು ತರಕಾರಿ ಮೇಲೆ ಉಗುಳಿ ಮಾರುತ್ತಿದ್ದಾರೆ ಏನ್ ಮಾಡೋದು ಎಂಬ ಪ್ರಶ್ನೆ ಎದುರಾದಾಗ ' ನಿಮಗೆ ಅವರ ಮೇಲೆ ನಂಬಿಕೆ ಮತ್ತು ವಿಶ್ವಾಸ ಇಲ್ಲದಿದ್ರೆ ಅಂತಹವರ ಬಳಿ ತರಕಾರಿ ಖರೀದಿ ಮಾಡಬೇಡಿ' ಎಂದಿದ್ದೆ ಎನ್ನುತ್ತ ಹೇಳಿಕೆಗೆ ಕಾರಣ ನೀಡಿದ್ದಾರೆ.

ತಬ್ಲಿಘಿ ಜಮಾತ್ ಪ್ರಶ್ನೆ ಮಾಡಿದರೆ ಮುಸ್ಲಿಂ ಸಮುದಾಯ ಟಾರ್ಗೆಟ್ ಮಾಡಿದಂತೆಯಾ?

ತಬ್ಲಿಘಿ ಜಮಾತ್ ಸಂಘಟನೆಗೆ ಸೇರಿದವರು ದೇಶಾದ್ಯಂತ ಸೃಷ್ಟಿಸಿದ ಆತಂಕದ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ ಎಂದು ಇದೇ  ವೇಳೆ ಹೇಳಿದ್ದರು.  ಶಾಸಕರ ಈ ಹೇಳಿಕೆಗೆ ಉತ್ತರ ಪ್ರದೇಶ ಬಿಜೆಪಿ ಜವಾಬ್ದಾರನಲ್ಲ. ಅದು ಅವರ ವೈಯಕ್ತಿಕ ವಿಚಾರ ಎಂದು ಉತ್ತರ ಪ್ರದೇಶ ಬಿಜೆಪಿ ವಕ್ತಾರ ರಾಕೇಶ್ ತ್ರಿಪಾಠಿ ಹೇಳಿದ್ದಾರೆ.

ಏಪ್ರಿಲ್ 14 ರಂದು ಉತ್ತರ ಪ್ರದೇಶದಲ್ಲಿ ದುಷ್ಕರ್ಮಿಗಳ ಗುಂಪೊಂದು ಮುಸ್ಲಿಂ ವರ್ತಕರೊಂದಿಗೆ ಕೆಟ್ಟದಾಗಿ ನಡೆದುಕೊಂಡಿತ್ತು. ಮುಸ್ಲಿಂ ವರ್ತಕರು ತಬ್ಲಿಘಿ ಜಮಾತ್ ಗೆ ಸೇರಿದವರಾಗಿದ್ದಾರೆ ಎಂದು ಆರೋಪ ಮಾಡಿತ್ತು.

ಎಐಎಂಐ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಬಹಿರಂಗವಾಗಿಯೇ ಹಿಂದೂಗಳನ್ನು ಟೀಕಿಸುತ್ತಾರೆ. ಆದ್ರೆ ಯಾರು ಈ ಬಗ್ಗೆ ಮಾತನಾಡಲ್ಲ. ಕ್ಷೇತ್ರದ ಜನತೆಗೆ ಸಲಹೆ ನೀಡೋದು ತಪ್ಪಾ ಎಂದು ಸುರೇಶ್ ತಿವಾರಿ ಮರುಪ್ರಶ್ನೆ ಮಾಡಿದ್ದರು.  ತರಕಾರಿ ಮತ್ತು ಹಣ್ಣುಗಳ ಮೇಲೆ ಉಗುಳುವುದು, ಭಾರತದ ನೋಟ್ ಗಳಿಗೆ ಎಂಜಲು ಹಚ್ಚುವುದು  ಸೇರಿದಂತೆ ಕೆಲ ವಿಕೃತ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು .

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿದ್ದೇಶ್ವರ್‌ ಎಕ್ಸ್‌ಪ್ರೆಸ್‌ನಲ್ಲಿ ನಿದ್ದೆಗೆ ಜಾರಿದ ಚಿನ್ನದ ವ್ಯಾಪಾರಿಗೆ ಆಘಾತ: 5.53 ಕೋಟಿ ಮೊತ್ತದ ಚಿನ್ನ ಮಾಯ
ಭೂರೂಪ ಬದಲಾಯಿಸಿದ ಪ್ರವಾಹ.. ವಿಶ್ವದ ಅತಿದೊಡ್ಡ ನದಿ ಮಜುಲಿ ದ್ವೀಪ ಬಗ್ಗೆ ನಿಮಗೆ ಗೊತ್ತೇ?