ಸಂಭಲ್‌ ದಂಗೆಕೋರರಿಂದಲೇ ಆಸ್ತಿ ಹಾನಿಯ ಮೊತ್ತ ವಸೂಲಿ!

Published : Nov 28, 2024, 09:33 AM IST
ಸಂಭಲ್‌ ದಂಗೆಕೋರರಿಂದಲೇ ಆಸ್ತಿ ಹಾನಿಯ ಮೊತ್ತ ವಸೂಲಿ!

ಸಾರಾಂಶ

ಉತ್ತರ ಪ್ರದೇಶದ ಸಂಭಲ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದವರಿಂದಲೇ ಪರಿಹಾರ ವಸೂಲಿ ಮಾಡುವುದಾಗಿ ಉತ್ತರ ಪ್ರದೇಶ ಸರ್ಕಾರ ತಿಳಿಸಿದೆ  

ಸಂಭಲ್‌ (ನ.28) : ಉತ್ತರ ಪ್ರದೇಶದ ಸಂಭಲ್‌ನಲ್ಲಿ ಹಿಂಸಾಚಾರ ಎಸಗಿದ ಪ್ರತಿಭಟನಾಕಾರರಿಂದಲೇ ಸಾರ್ವಜನಿಕ ಆಸ್ತಿ ಹಾನಿಗೆ ಪರಿಹಾರವನ್ನು ಉತ್ತರ ಪ್ರದೇಶ ಸರ್ಕಾರ ವಸೂಲಿ ಮಾಡಲಿದೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಕಲ್ಲು ತೂರಾಟಗಾರರ ಪೋಸ್ಟರ್‌ ಪ್ರದರ್ಶಿಸಲಿದೆ. ಮಸೀದಿ ಸಮೀಕ್ಷೆ ವಿರೋಧಿಸಿ ಸಾವಿರಾರು ಜನರು ಸಮೀಕ್ಷೆಗಾರರ ಮೇಲೆ ಹಾಗೂ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಪೊಲೀಸ್‌ ವಾಹನ ಸೇರಿ 6 ವಾಹನಗಳಿಗೆ ಬೆಂಕಿ ಹಚ್ಚಿದ್ದರು. ತಮ್ಮ ಗಲಾಟೆ ರೆಕಾರ್ಡ್‌ ಆಗಬಾರದು ಎಂದು ಸಿಸಿ ಕ್ಯಾಮರಾ ಒಡೆದಿದ್ದರು. ಮಸೀದಿ ಸುತ್ತ ಮುತ್ತ ಅಪಾರ ಆಸ್ತಿಪಾಸ್ತಿ ಹಾನಿ ಮಾಡಿದ್ದರು.

ಈ ಬಗ್ಗೆ ಬುಧವಾರ ಮಾತನಾಡಿದ ಅಧಿಕಾರಿಯೊಬ್ಬರು, ‘ದಂಗೆಕೋರರ ವಿರುದ್ಧ ಯೋಗಿ ಸರ್ಕಾರವು ದೃಢ ನಿಲುವು ತೆಗೆದುಕೊಳ್ಳುತ್ತಿದೆ. ಕಲ್ಲು ತೂರಾಟಗಾರರು ಮತ್ತು ದುಷ್ಕರ್ಮಿಗಳ ಪೋಸ್ಟರ್‌ಗಳನ್ನು ಸಾರ್ವಜನಿಕವಾಗಿ ಪ್ರದರ್ಶಿಸಲಾಗವುದು ಮತ್ತು ಅವರ ಬಂಧನಕ್ಕೆ ಕಾರಣವಾಗುವ ಮಾಹಿತಿ ನೀಡಿದರೆ ಬಹುಮಾನ ನೀಡಲಾಗುವುದು. ಬಂಧಿತರಿಂದ ಹಾನಿಯ ಪರಿಹಾರ ಮೊತ್ತ ವಸೂಲಿ ಮಾಡಲಾಗುವುದು’ ಎಂದರು.

ಇದೇ ರೀತಿಯ ಉಪಕ್ರಮದಲ್ಲಿ, ಸರ್ಕಾರವು ಈ ಹಿಂದೆ 2020 ರಲ್ಲಿ ಸಿಎಎ ವಿರೋಧಿ ಪ್ರತಿಭಟನೆ ವೇಳೆ ವಿಧ್ವಂಸಕ ಕೃತ್ಯ ಎಸಗಿದವರ ಪೋಸ್ಟರ್‌ ಹಾಕಿತ್ತು. ಆದರೆ ನಂತರ ಕೋರ್ಟ್‌ ಆದೇಶದ ನಂತರ ತೆಗೆದುಹಾಕಿತ್ತು. ಇಲ್ಲಿಯವರೆಗೆ, ಪೊಲೀಸರು 25 ವ್ಯಕ್ತಿಗಳನ್ನು ಬಂಧಿಸಿದ್ದಾರೆ. 2,750ಕ್ಕೂ ಹೆಚ್ಚು ಅಪರಿಚಿತ ಶಂಕಿತರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ರಾಜ್ಯ ಸರ್ಕಾರದ ಅಧಿಕೃತ ವಕ್ತಾರರು ಈ ಬಗ್ಗೆ ಮಾತನಾಡಿದ್ದು “ಸಂಭಾಲ್ ಹಿಂಸಾಚಾರದಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ವಿರುದ್ಧ ಯುಪಿ ಸರ್ಕಾರವು ದೃಢವಾದ ನಿಲುವು ತೆಗೆದುಕೊಳ್ಳುತ್ತಿದೆ. ಕಲ್ಲು ತೂರಾಟಗಾರರು ಮತ್ತು ಕಿಡಿಗೇಡಿಗಳ ಪೋಸ್ಟರ್‌ಗಳನ್ನು ಸಾರ್ವಜನಿಕವಾಗಿ ಪ್ರದರ್ಶಿಸಲಾಗುತ್ತದೆ ಮತ್ತು ಹಾನಿಯ ಮೊತ್ತವನ್ನು ವಸೂಲಿ ಮಾಡಲು ಪ್ರಯತ್ನಿಸಲಾಗುವುದು. ಅವರ ಬಂಧನಕ್ಕೆ ಕಾರಣವಾಗುವ ಮಾಹಿತಿಗಾಗಿ ಬಹುಮಾನವನ್ನೂ ಘೋಷಿಸಬಹುದು' ಎಂದು ಹೇಳಿದ್ದಾರೆ.

ಚಳಿಗಾಲದ ಅಧಿವೇಶನದಲ್ಲಿ ವಕ್ಫ್‌ ಮಸೂದೆ ಮಂಡನೆ ಅನುಮಾನ?

ಸಮೀಕ್ಷಾ ತಂಡವು ತನ್ನ ಕೆಲಸವನ್ನು ಪುನರಾರಂಭಿಸುತ್ತಿದ್ದಂತೆ ದೊಡ್ಡ ಜನಸಮೂಹವು ಮಸೀದಿಯ ಬಳಿ ಜಮಾಯಿಸಿ ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದಾಗ ಸಂಭಾಲ್ ಭಾನುವಾರ ತೀವ್ರ ಹಿಂಸಾಚಾರಕ್ಕೆ ಸಾಕ್ಷಿಯಾಯಿತು. ಭಾನುವಾರದ ಹಿಂಸಾಚಾರದ ನಂತರ ಪ್ರತಿಪಕ್ಷಗಳು ಕೇಂದ್ರ ಮತ್ತು ಉತ್ತರ ಪ್ರದೇಶ ಎರಡರಲ್ಲೂ ಆಡಳಿತಾರೂಢ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿವೆ. ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, ರಾಜ್ಯ ಸರ್ಕಾರವು "ಗಲಭೆ" ನಡೆಸುತ್ತಿದೆ ಎಂದು ಆರೋಪಿಸಿದರೆ, ಹಿರಿಯ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಆಡಳಿತ ಪಕ್ಷವು ಹಿಂದೂಗಳು ಮತ್ತು ಮುಸ್ಲಿಮರ ನಡುವೆ ವಿಭಜನೆಯನ್ನು ಉತ್ತೇಜಿಸುತ್ತಿದೆ ಎಂದು ಹೇಳಿದ್ದಾರೆ.

Chitradurga: 20 ವರ್ಷದ ಯುವತಿಗೆ 40ರ ಅಂಕಲ್‌ ಜೊತೆ ಲವ್‌-ಮದುವೆ; ಅಳಿಯನ ಜೀವ ತೆಗೆದ ಪೋಷಕರು!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮೋದಿ ಅವರೇ ನನ್ನ ಗಂಡ ವಿಕ್ರಂನನ್ನು ಪಾಕಿಸ್ತಾನಕ್ಕೆ ಕಳುಹಿಸಿ: ಪಾಕ್ ಮಹಿಳೆಯ ಮನವಿ
ಕಾರವಾರ ಜೈಲಲ್ಲಿ ಡ್ರಗ್ಸ್‌ಗಾಗಿ ಜೈಲ‌ರ್ ಮೇಲೆ ಕೈದಿಗಳಿಂದ ಹಲ್ಲೆ: ಬೆಂಗಳೂರು ಜೈಲೊಳಗೆ ಸಿಗರೇಟ್ ಸಾಗಿಸಲೆತ್ನಿಸಿ ಸಿಕ್ಕಿಬಿದ್ದ ವಾರ್ಡನ್