
ಲಖೀಂಪುರ: ಹುಲಿ ಸೆರೆಗೆ ಇರಿಸಲಾಗಿದ್ದ ಬೋನಿನೊಳಗೆ ಅರಣ್ಯ ಸಿಬ್ಬಂದಿಯೆ ಸಿಕ್ಕಿಬಿದ್ದ ವಿಚಿತ್ರ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಹಲವು ಗಂಟೆಗಳ ಸಾಹಸದ ಬಳಿಕ ಅರಣ್ಯ ಸಿಬ್ಬಂದಿಯನ್ನು ಬೋನಿನಿಂದ ಹೊರತಂದು ರಕ್ಷಿಸಲಾಗಿದೆ. ಲಖೀಂಪುರ ಖೇರಿಯ ಇಲ್ಲಿನ ಮಹೇಶ್ಪುರ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಹುಲಿ ಹಿಡಿಯಲು ಇಲ್ಲಿ ಬೋನನ್ನು ಸಿದ್ಧಪಡಿಸಲಾಗಿತ್ತು. ಈ ವೇಳೆ ಸಿಬ್ಬಂದಿಯೊಬ್ಬ ಬೋನಿನ ಪರಿಶೀಲನೆಗೆ ಒಳಗೆ ಹೋಗಿದ್ದ ವೇಳೆ ಆಕಸ್ಮಿಕವಾಗಿ ಹೊರಗಿನಿಂದ ಲಾಕ್ ಆಗಿದೆ. ಲಾಕ್ನಲ್ಲಿ ದೋಷ ಕಂಡುಬಂದ ಕಾರಣ ಏನು ಮಾಡಿದರೂ ಅದನ್ನು ತೆಗೆಯಲು ಬಂದಿಲ್ಲ. ಹೀಗಾಗಿ ಒಳಗಡೆ ಸಿಕ್ಕಿಬಿದ್ದ ಸಿಬ್ಬಂದಿ ಗಂಟೆಗಳ ಕಾಲ ಗೋಳಾಡಿದ್ದಾನೆ. ಈತನ ಗೋಳಾಟ ಇಡೀ ಅರಣ್ಯಕ್ಕೆ ಕೇಳಿದೆ ಎಂದು ವರದಿಯಾಗಿದ್ದ, ಬಳಿಕ ಸತತ ಪ್ರಯತ್ನಗಳ ಬಳಿಕ ಕೆಲ ಸಲಕರಣೆಗಳನ್ನು ಬಳಸಿ ಗೇಟ್ ಬಾಗಿಲನ್ನು ತೆರಯುವಲ್ಲಿ ಸಿಬ್ಬಂದಿಗಳು ಯಶಸ್ವಿಯಾದರು.
ಗಂಡನೊಂದಿಗೆ ಜಗಳ ಮಾಡುತ್ತಿದ್ದ ಹೆಂಡತಿಯನ್ನ ಎಳೆದೊಯ್ದು ತಿಂದು ತೇಗಿದ ಹುಲಿ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ