ವಿಕಾಸ್‌ ದುಬೆ ಎನ್ಕೌಂಟರ್‌ ನಂತರ ಬದಲಾದ ಉ.ಪ್ರ ರಾಜಕೀಯ; ಬ್ರಾಹ್ಮಣರ ಓಲೈಕೆಯಲ್ಲಿ ಪ್ರಿಯಾಂಕ ಗಾಂಧಿ

Suvarna News   | Asianet News
Published : Jul 24, 2020, 09:53 AM ISTUpdated : Jul 24, 2020, 10:20 AM IST
ವಿಕಾಸ್‌ ದುಬೆ ಎನ್ಕೌಂಟರ್‌ ನಂತರ ಬದಲಾದ ಉ.ಪ್ರ ರಾಜಕೀಯ; ಬ್ರಾಹ್ಮಣರ ಓಲೈಕೆಯಲ್ಲಿ ಪ್ರಿಯಾಂಕ ಗಾಂಧಿ

ಸಾರಾಂಶ

ಉತ್ತರ ಪ್ರದೇಶದಲ್ಲಿ ತಥಾಕಥಿತ ಮೇಲ್ಜಾತಿಗಳಾದ ಬ್ರಾಹ್ಮಣರು ಮತ್ತು ಠಾಕೂರರ ನಡುವೆ ರಾಜಕೀಯ ಕಾದಾಟ ಹೊಸದೇನಲ್ಲ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಪೂರ್ವಾಂಚಲದ ಹಿಂದೂ ನಾಯಕ ಅನ್ನಿಸಿಕೊಂಡರೂ ಕೂಡ ಅಲ್ಲಿನ ಸ್ಥಳೀಯ ಬ್ರಾಹ್ಮಣ ನಾಯಕರ ಜೊತೆ ಸಂಬಂಧ ಅಷ್ಟಕಷ್ಟೆ. 

ನವದೆಹಲಿ (ಜು. 24): ಉತ್ತರ ಪ್ರದೇಶದಲ್ಲಿ ತಥಾಕಥಿತ ಮೇಲ್ಜಾತಿಗಳಾದ ಬ್ರಾಹ್ಮಣರು ಮತ್ತು ಠಾಕೂರರ ನಡುವೆ ರಾಜಕೀಯ ಕಾದಾಟ ಹೊಸದೇನಲ್ಲ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಪೂರ್ವಾಂಚಲದ ಹಿಂದೂ ನಾಯಕ ಅನ್ನಿಸಿಕೊಂಡರೂ ಕೂಡ ಅಲ್ಲಿನ ಸ್ಥಳೀಯ ಬ್ರಾಹ್ಮಣ ನಾಯಕರ ಜೊತೆ ಸಂಬಂಧ ಅಷ್ಟಕಷ್ಟೆ.

ಪೂರ್ವಾಂಚಲದ ಬಹುತೇಕ ಬ್ರಾಹ್ಮಣ ಶಾಸಕರಾದ ಹರಶಂಕರ್‌ ತಿವಾರಿ, ಅಮರ್‌ ಮಣಿ ತ್ರಿಪಾಠಿ, ಶುಕ್ಲಾಗಳು ಸ್ಥಳೀಯ ದಿಗ್ಗಜರು. ಈಗ ಗ್ಯಾಂಗ್‌ಸ್ಟರ್‌ ವಿಕಾಸ್‌ ದುಬೆ ಎನ್‌ಕೌಂಟರ್‌ ನಂತರ ಉತ್ತರ ಪ್ರದೇಶದ ರಾಜಕೀಯದಲ್ಲಿ ಕ್ಷಿಪ್ರ ಚಟುವಟಿಕೆಗಳು ನಡೆಯುತ್ತಿವೆ. ಕಾಂಗ್ರೆಸ್‌ ಮತ್ತು ಬಿಎಸ್‌ಪಿ ನಾಯಕರು ಬಿಜೆಪಿ ತೆಕ್ಕೆಯಲ್ಲಿರುವ ಬ್ರಾಹ್ಮಣರನ್ನು ಸೆಳೆಯಲು ಪ್ರಯತ್ನ ಮಾಡುತ್ತಿವೆ. ಕುತೂಹಲಕರ ಸಂಗತಿಯೆಂದರೆ, ಕಾಂಗ್ರೆಸ್‌ ಪಕ್ಷದ ಉತ್ತರ ಪ್ರದೇಶದ ರಾಜಕೀಯ ಉಸ್ತುವಾರಿ ಪ್ರಿಯಾಂಕಾ ಗಾಂಧಿ ಈ ಕಾರ್ಯಾಚರಣೆಯ ಮುಂಚೂಣಿಯಲ್ಲಿದ್ದಾರಂತೆ.

ಆ ಒಂದು ಅಂಶ ಬಯಲಾಗುವವರೆಗೆ ಚೀನಾ ಬೆದರಿತು ಎನ್ನುವುದು ತಪ್ಪಾದೀತು!

ಅವರ ಜೊತೆಗೆ ಕಾಂಗ್ರೆಸ್‌ನ ಇನ್ನೊಬ್ಬ ನಾಯಕ ಜಿತಿನ್‌ ಪ್ರಸಾದ್‌ ಕೂಡ ಕೈಜೋಡಿಸಿದ್ದಾರೆ. ಇವರಿಬ್ಬರೂ ಸೇರಿ ಬ್ರಾಹ್ಮಣ ಭಾಯಿಚಾರಾ ಸಮಾವೇಶಗಳನ್ನು ಕೂಡ ನಡೆಸಲಿದ್ದಾರಂತೆ. ಇನ್ನು ಮಾಯಾವತಿ ಅಧಿಕಾರಕ್ಕೆ ಬರಬೇಕಾದರೆ ದಲಿತರ ಜೊತೆಗೆ ಬ್ರಾಹ್ಮಣರು ಬೇಕು. ಹಿಂದೆ ವಿ.ಪಿ.ಸಿಂಗ್‌ ಮತ್ತು ರಾಜನಾಥ ಸಿಂಗ್‌ ಮುಖ್ಯಮಂತ್ರಿಯಾಗಿ ಠಾಕೂರ ಮತ್ತು ಬ್ರಾಹ್ಮಣರ ನಡುವಿನ ಕಾದಾಟದ ರಾಜಕೀಯ ನಷ್ಟವನ್ನು ಸಾಕಷ್ಟುಅನುಭವಿಸಿದ್ದರು. ನಂತರ ಬ್ರಾಹ್ಮಣರ ಬೆಂಬಲ ಗಿಟ್ಟಿಸಿ ಅಧಿಕಾರಕ್ಕೆ ಬಂದಿದ್ದರು. ಈಗ ಪ್ರಿಯಾಂಕಾ ಆ ಸೂತ್ರ ಪಾಲಿಸುತ್ತಿದ್ದಾರಾ?

- ಪ್ರಶಾಂತ್ ನಾತು, ಸುವರ್ಣ ನ್ಯೂಸ್ ದೆಹಲಿ ಪ್ರತಿನಿಧಿ 

ಇಂಡಿಯಾ ಗೇಟ್, ದೆಹಲಿಯಿಂದ ಕಮಡ ರಾಜಕಾರಣ 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

India Latest News Live: ಭಾರತದಲ್ಲಿ ಭರ್ಜರಿ ಹೂಡಿಕೆಯ ಘೋಷಣೆ ಮಾಡಿದ ದೈತ್ಯ ಕಂಪನಿಗಳು
ಗುಜರಾತ್‌ನಲ್ಲೊಂದು ನಿರ್ಭಯಾ ಪ್ರಕರಣ