ರಸಗುಲ್ಲಾಕ್ಕಾಗಿ ಬಿತ್ತು ಹೆಣ: ಮದುವೆ ಮನೆಯಾಯ್ತು ಮಸಣ

Published : Oct 28, 2022, 06:06 PM IST
ರಸಗುಲ್ಲಾಕ್ಕಾಗಿ ಬಿತ್ತು ಹೆಣ: ಮದುವೆ ಮನೆಯಾಯ್ತು ಮಸಣ

ಸಾರಾಂಶ

ಇಲ್ಲೊಂದು ಕಡೆ ರಸಗುಲ್ಲಾ ಖಾಲಿಯಾಯ್ತು ಎಂಬ ಕಾರಣಕ್ಕೆ ಮದುವೆ ಮನೆಯಲ್ಲಿ ಹೆಣ ಬಿದ್ದಿದ್ದು, ಸಂಭ್ರಮಿಸಬೇಕಾದ ಸ್ಥಳ ಮಸಣವಾಗಿದೆ. ಉತ್ತರಪ್ರದೇಶದಲ್ಲಿ ಈ ಅನಾಹುತಕಾರಿ ಘಟನೆ ನಡೆದಿದೆ.

ಅಗ್ರಾ: ಭಾರತೀಯ ವಿವಾಹಗಳು ಯಾವುದೇ ಗಲಾಟೆ ಗದ್ದಲಗಳಿಲ್ಲದೇ ನಡೆಯುವುದೇ ಅಪರೂಪ. ಒಂದಲ್ಲಾ ಒಂದು ಕಾರಣಕ್ಕೆ ಸಣ್ಣಪುಟ್ಟ ಕಿರಿಕಿರಿಗಳು ಮದುವೆ ಮನೆಯವರನ್ನು ನೆಂಟರಿಷ್ಟರನ್ನು ಸಂಕಷ್ಟಕ್ಕೆ ಸಿಲುಕಿಸುತ್ತವೆ. ಸಣ್ಣಪುಟ್ಟ ಕ್ಷುಲ್ಲಕ ಕಾರಣಗಳೇ ದೊಡ್ಡದಾಗಿ ಮದುವೆ ಮನೆಯವರು ಪರದಾಡುವಂತೆ ಮಾಡುತ್ತದೆ. ನಾವು ಹೇಳಿದ ಸಿಹಿ ಪದಾರ್ಥ ಮಾಡಿಲ್ಲ. ಸಂಪ್ರದಾಯ ಸರಿಯಾಗಿ ಪಾಲಿಸಿಲ್ಲ. ಮದುವೆ ಮನೆಗೆ ವಿಳಂಬವಾಗಿ ಬಂದರು ಹೀಗೆ ಸಣ್ಣಪುಟ್ಟ ಕಾರಣಕ್ಕೆ ದೊಡ್ಡ ಗಲಾಟೆಯೇ ನಡೆದು ಮದುವೆ ಮನೆ ರಣರಂಗವಾದ ನಿದರ್ಶನಗಳಿವೆ. ಅದೇ ರೀತಿ ಇಲ್ಲೊಂದು ಕಡೆ ರಸಗುಲ್ಲಾ ಖಾಲಿಯಾಯ್ತು ಎಂಬ ಕಾರಣಕ್ಕೆ ಮದುವೆ ಮನೆಯಲ್ಲಿ ಹೆಣ ಬಿದ್ದಿದ್ದು, ಸಂಭ್ರಮಿಸಬೇಕಾದ ಸ್ಥಳ ಮಸಣವಾಗಿದೆ.

ಉತ್ತರಪ್ರದೇಶದಲ್ಲಿ ಈ ಅನಾಹುತಕಾರಿ ಘಟನೆ ನಡೆದಿದೆ. ಅಗ್ರಾದ ಎತ್ಮಾದಪುರದಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇಲ್ಲಿನ ವಿನಾಯಕ ಭವನದಲ್ಲಿ ನಡೆದ ವಿವಾಹದಲ್ಲಿ ರಸಗುಲ್ಲಾದ (Rasagulla) ಕಾರಣಕ್ಕೆ ಆರಂಭವಾದ ಜಗಳ ಅತಿಥಿಗಳು ಪರಸ್ಪರ ತಟ್ಟೆ ಗ್ಲಾಸುಗಳಲ್ಲಿ ಹೊಡೆದಾಡಿಕೊಳ್ಳುವಷ್ಟರ ಮಟ್ಟಿಗೆ ಮುಂದುವರೆದಿದೆ. ಘಟನೆ ಬಗ್ಗೆ ಎತ್ಮಾದಪುರದ ಪೊಲೀಸ್‌ ಠಾಣೆಯ ಮುಖ್ಯಸ್ಥ ಸರ್ವೇಶ್‌ ಕುಮಾರ್ (Sarvesh Kumar) ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಇಸ್ಮಾನ್ ಅಹ್ಮದ್ ಎಂಬುವವರ ಇಬ್ಬರು ಹೆಣ್ಣು ಮಕ್ಕಳಿಗೆ ವಾಕರ್ ಅಹ್ಮದ್ ಎಂಬುವವರ ಇಬ್ಬರು ಗಂಡು ಮಕ್ಕಳೊಂದಿಗೆ ವಿವಾಹ ನಿಶ್ಚಯವಾಗಿತ್ತು. ಈ ಮದುವೆಯಲ್ಲಿ ಎರಡು ಕುಟುಂಬದ ನೆಂಟರಿಷ್ಟರ ಮಧ್ಯೆ ರಸಗುಲ್ಲಾ ನೀಡಿಲ್ಲ ಎಂಬ ವಿಚಾರಕ್ಕೆ ಗಲಾಟೆ ನಡೆದಿದೆ. ಆದರೆ ಮದುವೆ ಮನೆಯಲ್ಲಿದ್ದ ಎರಡು ಕಡೆಯ ತರುಣರು ಈ ಸಣ್ಣ ಜಗಳವನ್ನು ವಿಕೋಪಕ್ಕೆ ತಿರುಗಿಸಿದ್ದಾರೆ. ಎರಡು ಕಡೆಯವರು ಪರಸ್ಪರ ಚೇರುಗಳು, ಪ್ಲೇಟುಗಳನ್ನು ಒಬ್ಬರ ಮೇಲೊಬ್ಬರು ಎಸೆದುಕೊಂಡಿದ್ದಾರೆ. 

40 ಗಂಟೆಗಳ ಕಾಲ ನೂರಾರು ರೈಲುಗಳು ರದ್ದು: ಇದಕ್ಕೆಲ್ಲಾ ಕಾರಣ ರಸಗುಲ್ಲಾ!

ಪರಿಣಾಮ ಎಲ್ಲರೂ ಕಿತ್ತಾಟ ಕೈ ಕೈ ಮಿಲಾಯಿಸಿ ಹೊಡೆದಾಡಿಕೊಳ್ಳುವ ಹಂತ ತಲುಪಿದ್ದು, ಎರಡೂ ಕಡೆಯವರು ಸೌಟು ಹಾಗೂ ಚಾಕುಗಳಿಂದ ಹೊಡೆದಾಡಿಕೊಂಡಿದ್ದಾರೆ. ಪರಿಣಾಮ ಮದುವೆ ಮನೆಯಲ್ಲಿ ಚಾಕು ಇರಿತಕೊಳಗಾಗಿ ಓರ್ವ ಸಾವನ್ನಪ್ಪಿದ್ದಾನೆ. ಸುದ್ದಿ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಅಲ್ಲದೇ ಎರಡೂ ಕಡೆಯವರನ್ನು ಸಮಾಧಾನಪಡಿಸಲು ಮುಂದಾಗಿದ್ದಾರೆ. ವಿಧಿ ವಿಜ್ಞಾನ (forensic team) ತಂಡವನ್ನು ಸ್ಥಳಕ್ಕೆ ಕರೆಯಿಸಿ ಸ್ಥಳದಲ್ಲಿದ್ದ ಸಾಕ್ಷಿ ಹಾಗೂ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಎತ್ಮಾದಪುರ (Etmadpur) ಸರ್ಕಲ್ ಇನ್ಸ್‌ಪೆಕ್ಟರ್ ರವಿ ಕುಮಾರ್ ಗುಪ್ತಾ (Ravi Kumar Gupta) ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಮದುವೆಯಲ್ಲಿ ಮಾಡಿಸಿದ್ದ ಸಿಹಿ ಮುಗಿದಿದ್ದೆ ಘಟನೆಗೆ ಕಾರಣ ಎಂದು ಹೇಳಿದ್ದಾರೆ.  ರಸಗುಲ್ಲಾ ಮುಗಿದಿದ್ದರಿಂದ ಕುಪಿತಗೊಂಡ ಜನ ಚಾಕುವಿಂದ (knife) ಮದುವೆಗೆ ಬಂದವರ ಮೇಲೆ ಹಲ್ಲೆ ಮಾಡಿದ್ದಾರೆ. ಈ ಅವಘಡದಲ್ಲಿ ಗಂಭೀರ ಗಾಯಗೊಂಡ 22 ವರ್ಷ ಪ್ರಾಯದ ಸನ್ನಿ ಎಂಬಾತ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಆತನನ್ನು ಮೊದಲಿಗೆ ಸಮುದಾಯ ಆಸ್ಪತ್ರೆಗೆ ಹಾಗೂ ನಂತರ ಅಲ್ಲಿಂದ ಸರೋಜಿನಿ ನಾಯ್ಡು ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಆತ ಸಾವನ್ನಪ್ಪಿದ್ದಾನೆ. ಆತನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ (post-mortem) ಕಳುಹಿಸಲಾಗಿದೆ ಎಂದು ಗುಪ್ತಾ ಹೇಳಿದರು. 

ಇದು ಚೇಸಿಂಗ್ ದೃಶ್ಯವಲ್ಲ: ನವ ಜೋಡಿಯ ಮದುವೆ ಫೋಟೋಶೂಟ್ ವೈರಲ್

ಈ ಜಗಳದಲ್ಲಿ ಒಟ್ಟು ಐವರು ಗಾಯಗೊಂಡಿದ್ದಾರೆ. ಅವರನ್ನು ಎತ್ಮಾದಪುರದ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ದುರಂತದಲ್ಲಿ ಮೃತನಾದ ಸನ್ನಿಯ ಕುಟುಂಬಸ್ಥರು ಕೂಡ ಈ ಬಗ್ಗೆ ದೂರು ದಾಖಲಿಸಿದ್ದಾರೆ. ಆದರೆ ಘಟನೆಗೆ ಸಂಬಂಧಿಸಿದಂತೆ ಯಾರನ್ನು ಕೂಡ ಬಂಧಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!