ನಾನ್‌ವೆಜ್ ಊಟ ಕೇಳಿದ್ದೆ ತಪ್ಪಾಯ್ತು: ಇಟ್ಟಿಗೆಯಿಂದ ಗಂಡನ ತಲೆ ಒಡೆದು ಮೆದುಳು ಬಗೆದ ಪತ್ನಿ

By Anusha KbFirst Published Aug 9, 2024, 2:49 PM IST
Highlights

ಮಾಂಸದಡುಗೆ ಊಟ ಹಾಕು ಎಂದ ಪತಿಯ ತಲೆಗೆ ಇಟ್ಟಿಗೆಯಿಂದ ಹೊಡೆದ ಪತ್ನಿ ಬಳಿಕ ಆತನ ಮೆದುಳಿನ ಮಾಂಸವನ್ನೇ ಬಗೆದು ಹೊರತೆದಿರುವಂತಹ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಶಹಾಜಹಾನ್‌ಪುರದಲ್ಲಿ ನಡೆದಿದೆ. 

ಉತ್ತರ ಪ್ರದೇಶ: ಮಾಂಸದಡುಗೆ ಊಟ ಹಾಕು ಎಂದ ಪತಿಯ ತಲೆಗೆ ಇಟ್ಟಿಗೆಯಿಂದ ಹೊಡೆದ ಪತ್ನಿ ಬಳಿಕ ಆತನ ಮೆದುಳಿನ ಮಾಂಸವನ್ನೇ ಬಗೆದು ಹೊರತೆದಿರುವಂತಹ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಶಹಾಜಹಾನ್‌ಪುರದಲ್ಲಿ ನಡೆದಿದೆ. ಈ ಘಟನೆ ಸಿಸಿ ಕ್ಯಾಮರಾದಲ್ಲಿ ವೈರಲ್ ಆಗಿದ್ದು, ಭೀಭತ್ಸವಾಗಿದೆ. ಇಟ್ಟಿಗೆಯಿಂದ  ತಲೆಗೆ ಹೊಡೆದು ಹೊಡೆದು ಮಹಿಳೆ ತನ್ನ ಗಂಡನನ್ನು ಕೊಂದೇ ಬಿಟ್ಟಿದ್ದಾಳೆ. ಗಂಡನ ತಲೆಯಿಂದ ಮಿದುಳು ಹೊರಗೆ ಬರುವವರೆಗೂ ಮಹಿಳೆ ಇಟ್ಟಿಗೆಯಿಂದ ಹೊಡೆದಿದ್ದಾಳೆ. ಬಳಿಕ ಗಂಡನ ದೇಹದ ಮೇಲೆ ಕುಳಿತು ಆತನ ತಲೆಯಿಂದ ಮಿದುಳು ಮಾಂಸವನ್ನು ಬಗೆದು ಹೊರಗೆ ತೆಗೆದಿದ್ದಾಳೆ. ನಾನು ಇವತ್ತು ನಿನ್ನ ತಲೆ ಹುಡಿ ಮಾಡುತ್ತೇನೆ ಎಂದು ಮಧ್ಯೆ ಮಧ್ಯೆ ಬೊಬ್ಬೆ ಹೊಡೆದು ಕಿರುಚುತ್ತಾ ಆಕೆ ಗಂಡನ ತಲೆ ಒಡೆದಿದ್ದಾಳೆ. ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಮಹಿಳೆ ಮಾತ್ರ ಸುಮ್ಮನಿರದೇ ಪೊಲೀಸರ ಮುಂದೆಯೇ ಗಂಡನ ಮಿದುಳು ಬಗೆಯುವ ಕೃತ್ಯ ಮುಂದುವರೆಸಿದ್ದಾಳೆ. 

ಶಹಾಜಹಾನ್‌ಪುರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಗ್ರಾಮದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ.  ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ. ಹಿಂದಿ ಮಾಧ್ಯಮ ದೈನಿಕ ಭಾಸ್ಕರ್ ವರದಿ ಮಾಡಿರುವಂತೆ ಗಂಡ ಹೆಂಡತಿ ಬಳಿ  ಮಾಂಸದಡುಗೆ ಮಾಡುವಂತೆ ಕೇಳಿದ್ದೇ ಈ ಘಟನೆಗೆ ಕಾರಣ ಎಂದು ತಿಳಿದು ಬಂದಿದೆ. ಹೀಗೆ ಹೆಂಡತಿಯಿಂದ ಭೀಕರವಾಗಿ ಕೊಲೆಯಾದ ವ್ಯಕ್ತಿಯನ್ನು 40 ವರ್ಷದ ಸತ್ಯಪಾಲ್‌ ಎಂದು ಗುರುತಿಸಲಾಗಿದೆ. ಹಾಗೆಯೇ ಕೊಲೆ ಮಾಡಿದ ಮಹಿಳೆಯನ್ನು  39 ವರ್ಷದ ಗಾಯತ್ರಿ ದೇವಿ ಎಂದು ಗುರುತಿಸಲಾಗಿದೆ. ಈ ದಂಪತಿ  ತಮ್ಮಿಬ್ಬರು ಮಕ್ಕಳೊಂದಿಗೆ ಹಥುಡ ಗ್ರಾಮದಲ್ಲಿ ವಾಸ ಮಾಡುತ್ತಿದ್ದರು. 

Latest Videos

ಸತ್ಯಪಾಲ್ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ, 20 ವರ್ಷ ಹಿಂದೆ ಇವರಿಬ್ಬರ ಮದುವೆ ನಡೆದಿತ್ತು. ಮಗಳು ಬಿಎ ಓದುತ್ತಿದ್ದರೆ ಮಗ 12ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಗಾಯತ್ರಿ ಸಸ್ಯಹಾರಿಯಾಗಿದ್ದರೆ, ಸತ್ಯಪಾಲ್‌ಗೆ ಮಾಂಸದಡುಗೆ ಎಂದರೆ ಪಂಚಪ್ರಾಣ, ಹೀಗಾಗಿ ಆತ ಆಗಾಗ ಮನೆಯಲ್ಲಿ ಮಾಂಸದಡುಗೆ ಮಾಡುವಂತೆ ಪತ್ನಿಯನ್ನು ಕೇಳುತ್ತಿದ್ದ. ಈ ಆಹಾರದಲ್ಲಿನ ವೈವಿಧ್ಯತೆಯ ಗಂಡ ಹೆಂಡತಿ ಮಧ್ಯೆ ಸದಾ ಜಗಳಕ್ಕೆ ಕಾರಣವಾಗಿತ್ತು. ಅಲ್ಲದೇ ಕೆಲವೊಮ್ಮೆ ಸತ್ಯಪಾಲ್ ಇದೇ ವಿಚಾರವಾಗಿ ಗಾಯತ್ರಿಯನ್ನು ಹೊಡೆಯುತ್ತಿದ್ದ. ಅದೇ ರೀತಿ ಘಟನೆ ನಡೆದ ದಿನವೂ ಕೂಡ ಸತ್ಯಪಾಲ್ ಮಾಂಸದೂಟಕ್ಕೆ ಬೇಡಿಕೆ ಇಟ್ಟಿದ್ದಾನೆ. ಆದರೆ ಇದಕ್ಕೆ ಗಾಯತ್ರಿ ಒಲ್ಲೆ ಎಂದಾಗ ಆತನಿಗೂ ಕೋಪ ಬಂದಿದ್ದು, ಇಬ್ಬರ ಮಧ್ಯೆ ಬಾರಿ ವಾಕ್ಸಮರ ನಡೆದಿದೆ. 

ಜಗಳದ ಮಧ್ಯೆಯೇ ಗಾಯತ್ರಿ ಇಟ್ಟಿಗೆಯೊಂದನ್ನು ಎತ್ತಿಕೊಂಡು ಬಂದು ಗಂಡನಿಗೆ ಹೊಡೆದಿದ್ದಾಳೆ. ಸತ್ಯಪಾಲ್ ಹೊರಗೆ ಓಡುವ ಮೂಲಕ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಆದರೆ ಆತನನ್ನು ಬೆನ್ನಟ್ಟಿಕೊಂಡು ಹೋದ ಗಾಯತ್ರಿ ಆತ ಕೆಳಗೆ ಬೀಳುವಂತೆ ಮಾಡಿದ್ದಾಳೆ. ಕೆಳಗೆ ಬಿದ್ದ ಆತನ ಎದೆ ಮೇಲೆ ಕುಳಿತುಕೊಂಡು ಆತನನ್ನು ಕರುಣೆ ಇಲ್ಲದೇ ಒಂದೇ ಸಮನೇ ಇಟ್ಟಿಗೆಯಿಂದ ತಲೆಗೆ ಹೊಡೆಯಲು ಶುರು ಮಾಡಿದ್ದಾಳೆ. ಆಕೆಯ ಕೋಪ ಎಷ್ಟು ತೀವ್ರವಾಗಿತೆಂದರೆ ,ಆತನ ತಲೆ ಒಡೆದು  ಎಲ್ಲೆಡೆ ರಕ್ತ ಸೋರಿ ಮಿದುಳು ಹೊರಬರುವವರೆಗೆ ಆಕೆ ತನ್ನ ಕೃತ್ಯವನ್ನು ನಿಲ್ಲಿಸಿಲ್ಲ, ಘಟನೆಗೆ ಸಾಕ್ಷಿಯಾದವರು ಕೂಡ ಆಕೆಯನ್ನು ತಡೆಯಲು ಭಯಪಟ್ಟಿದ್ದಾರೆ. 

ಈ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಆಕೆಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಆಕೆ ತನ್ನ ಗಂಡ ತನಗೆ ನಿರಂತರವಾಗು ಹೊಡೆಯುತ್ತಿದ್ದ ಹಾಗೂ ಮಾಂಸದೂಟಕ್ಕೆ ಒತ್ತಾಯಿಸುತ್ತಿದ್ದ. ಘಟನೆ ನಡೆದಂದೂ ಕೂಡ ಮಾಂಸದಡುಗೆ ಮಾಡುವಂತೆ ಕೇಳಿದ್ದ. ಆದರೆ ಹಣವಿಲ್ಲದ ಕಾರಣ ನಾನು ಅದಕ್ಕೆ ನಿರಾಕರಿಸಿದೆ. ಇದೇ ವಿಚಾರ ಜಗಳಕ್ಕೆ ಕಾರಣವಾಯ್ತು. ತಾಳ್ಮೆ ಕಳೆದುಕೊಂಡು ಆತನನ್ನು ಕೊಂದು ಬಿಟ್ಟೆ ಎಂದು ಆಕೆ ಹೇಳಿದ್ದಾಳೆ. ಈ ರೀತಿ ಬೀಭತ್ಸವಾಗಿ ಕೊಲೆ ಮಾಡಿದ ಗಾಯತ್ರಿ ಈ ಹಿಂದೆ ಮಾನಸಿಕ ಅಸ್ವಸ್ಥತೆಗೆ ಒಳಗಾಗಿದ್ದಳು. ಬಳಿಕ ಗುಣಮುಖಳಾಗಿದ್ದಳು ಎಂದು ಆಕೆಯ ಫೋಷಕರು ಪೊಲೀಸರಿಗೆ ತಿಳಿಸಿದ್ದಾರೆ. 

ईंट से फोड़ा पति का सिर, फिर छाती पर बैठ खोपड़ी में हाथ डाल फेंके मांस के लोथड़े.. पुलिस के सामने भी नहीं मानी वहशी बनी धर्म पत्नि
....

UP के शाहजहांपुर में दिल दहलाने वाली वारदात हुई है। विवाद के बाद घर के दरवाजे पर पत्नी ने पति का सिर ईंट से कुचल दिया। सीने पर बैठकर हाथों से… pic.twitter.com/lJtFTwJ3UV

— TRUE STORY (@TrueStoryUP)


 

click me!