ದೇವಭೂಮಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 60ಕ್ಕೆ ಏರಿಕೆ

Published : Aug 16, 2023, 07:28 AM IST
ದೇವಭೂಮಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 60ಕ್ಕೆ ಏರಿಕೆ

ಸಾರಾಂಶ

ಮಳೆ ಅಬ್ಬರದಿಂದ ತತ್ತರಿಸಿರುವ ಹಿಮಾಚಲ ಪ್ರದೇಶದಲ್ಲಿ ಸಾವಿನ ಸಂಖ್ಯೆ 55ಕ್ಕೆ ಏರಿಕೆಯಾಗಿದೆ. ಇನ್ನು ಉತ್ತರಾಖಂಡದಲ್ಲೂ ಧಾರಾಕಾರ ಮಳೆಗೆ ಈಗಾಗಲೇ ನಾಲ್ವರು ಸಾವನ್ನಪ್ಪಿದ್ದು, ಸುಮಾರು 9 ಜನರು ನಾಪತ್ತೆಯಾಗಿದ್ದಾರೆ.

ಶಿಮ್ಲಾ/ಡೆಹ್ರಾಡೂನ್‌: ಮಳೆ ಅಬ್ಬರದಿಂದ ತತ್ತರಿಸಿರುವ ಹಿಮಾಚಲ ಪ್ರದೇಶದಲ್ಲಿ ಸಾವಿನ ಸಂಖ್ಯೆ 55ಕ್ಕೆ ಏರಿಕೆಯಾಗಿದೆ. ಇನ್ನು ಉತ್ತರಾಖಂಡದಲ್ಲೂ ಧಾರಾಕಾರ ಮಳೆಗೆ ಈಗಾಗಲೇ ನಾಲ್ವರು ಸಾವನ್ನಪ್ಪಿದ್ದು, ಸುಮಾರು 9 ಜನರು ನಾಪತ್ತೆಯಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಮೇಘಸ್ಫೋಟಕ್ಕೆ ತತ್ತರಿಸುತ್ತಿರುವ ಎರಡೂ ರಾಜ್ಯಗಳ ಹಲವು ಪ್ರದೇಶಗಳಿಗೆ ಭಾರತೀಯ ಹವಾಮಾನ ಇಲಾಖೆಯು 'ರೆಡ್‌ ಅಲರ್ಟ್‌' ಘೋಷಿಸಿದೆ. ಅಲ್ಲದೇ ಮುಂದಿನ 24 ಗಂಟೆಗಳವರೆಗೂ ತೀವ್ರ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ.

ಎರಡೂ ರಾಜ್ಯಗಳಲ್ಲಿ ನಿರಂತರ ಮಳೆಯಿಂದ ಭೂಕುಸಿತ, ಪ್ರವಾಹ ಸಂವಿಸುತ್ತಿದ್ದು, ಆಸ್ತಿಪಾಸ್ತಿ ನಾಶವಾಗಿವೆ. ಉತ್ತರಾಖಂಡದಲ್ಲಿ ಮಳೆಯಿಂದಾಗಿ ಸೋಮವಾರ ವಿವಿಧೆಡೆ ಭೂಕುಸಿತಗಳು ಸಂಭವಿಸಿದ್ದು, ನಾಪತ್ತೆಯಾಗಿರುವ 9 ಜನರನ್ನು ಹುಡುಕುವ ಕಾರ್ಯಾಚರಣೆ ನಡೆಸಲಾಗುತ್ತಿದೆ. ಭೂಕುಸಿತದಿಂದ ಹುದುಗಿರುವ ರಸ್ತೆಗಳನ್ನು ಸಂಚಾರಕ್ಕೆ ಮುಕ್ತಗೊಳಿಸುವ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ. ಉತ್ತರಾಖಂಡದ ಮೋಹನ್‌ಚಟ್ಟಿಯಲ್ಲಿ ರೆಸಾರ್ಟ್‌ನ ಮೇಲೆ ಭೂಕುಸಿತ ಸಂಭವಿಸಿದ್ದು ಆರು ಜನರು ಸೇರಿ ವಿವಿಧೆಡೆ 9 ಜನರು ನಾಪತ್ತೆಯಾಗಿದ್ದಾರೆ.

ದೇವಭೂಮಿಯಲ್ಲಿ ವರುಣಾರ್ಭಟ: ಶಿವ ದೇಗುಲ ಕುಸಿದು 9 ಭಕ್ತರ ಸಾವು

ಹಿಮಾಚಲದಲ್ಲಿ ಸರಳ ಸ್ವಾತಂತ್ರೋತ್ಸವ:

ರಾಜ್ಯದಲ್ಲಿ ಮಳೆಯಿಂದಾಗಿ ಭಾರೀ ವಿಪತ್ತು ಸಂಭವಿಸಿದ್ದರಿಂದ ಸ್ವಾತಂತ್ರೋತ್ಸವವನ್ನು ಸರಳವಾಗಿ ಆಯೋಜಿಸಲಾಗಿದೆ ಎಂದು ಮುಖ್ಯಮಂತ್ರಿ ಸುಖವಿಂದರ್‌ ಸಿಂಗ್‌ ಸುಖು ತಿಳಿಸಿದ್ದಾರೆ. ‘ರಾಜ್ಯದಲ್ಲಿ ದುರಂತ ಸಂಭವಿಸಿದ್ದರಿಂದ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿಲ್ಲ ಈಗಾಗಲೇ ಅವಘಡದಲ್ಲಿ 55 ಮಂದಿ ಸಾವನ್ನಪ್ಪಿದ್ದಾರೆ. ಜೀರ್ಣೋದ್ಧಾರ ಕಾರ್ಯಾಚರಣೆಯನ್ನು ಯುದ್ಧೋಪಾದಿಯಲ್ಲಿ ನಡೆಸಲಾಗುವುದು’ ಎಂದು ತಿಳಿಸಿದ್ದಾರೆ.

ಕೊಡಗಿನಲ್ಲಿ ಮಳೆಗೆ ಮುರಿದು ಬಿದ್ದ 1638 ವಿದ್ಯುತ್ ಕಂಬಗಳು: 2 ಕೋಟಿ ನಷ್ಟ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಲ್ಲಿಕಾರ್ಜುನ ಖರ್ಗೆ ಹಠಾವೋ ಪ್ರಿಯಾಂಕಾ ಗಾಂಧಿ ಲಾವೋ, ಕಾಂಗ್ರೆಸ್ ಅಧ್ಯಕ್ಷ ಬದಲಾವಣೆಗೆ ಹೋರಾಟ
ಅನಾರೋಗ್ಯ ಏನಿದ್ದರೂ ವೀಕ್ ಆಫ್‌ನಲ್ಲೇ ಬರಬೇಕು ಸಿಕ್ ಲೀವ್ ಇಲ್ಲ, ನೋವು ತೋಡಿಕೊಂಡ ಉದ್ಯೋಗಿ