
ಚಮೋಲಿ (ಉತ್ತರಾಖಂಡ): ಬೆಂಗಳೂರು ನೋಂದಣಿ ಹೊಂದಿರುವ ಮಾರುತಿ ರಿಟ್ಜ್ ಕಾರು ಉತ್ತರಾಖಂಡದ ಜ್ಯೋತಿರ್ಮಠದ ಸಮೀಪ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅದರ ಒಳಗೆ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಮೃತದೇಹವೂ ಲಭಿಸಿದ್ದು, ಘಟನೆ ಶನಿವಾರ ರಾತ್ರಿ ನಡೆದಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ಇಲ್ಲಿನ ತಪೋವನ್ ಎಂಬ ಗ್ರಾಮದಲ್ಲಿ ಸುಟ್ಟ ಸ್ಥಿತಿಯಲ್ಲಿನ ಕಾರನ್ನು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪೊಲೀಸರು ಸ್ಥಳಕ್ಕಾಗಮಿಸಿ ಕಾರನ್ನು ಪರಿಶೀಲಿಸಿದಾಗ, ಮಹಿಳೆಯ ಮೃತದೇಹ ಪತ್ತೆಯಾಗಿದೆ. ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪರಿಶೀಲನೆ ವೇಳೆ ಕಾರು ಬೆಂಗಳೂರು ನೋಂದಣಿ (KA 01 AG 0590) ಎಂದು ತಿಳಿದುಬಂದಿದೆ. ಕಾರು ಸಂತೋಶ್ ಕುಮಾರ್ ಸೇನಾಪತಿ ಎಂಬುವರ ಹೆಸರಿನಲ್ಲಿ ನೋಂದಣಿಯಾಗಿದ್ದು, ಇವರು ಬೆಂಗಳೂರಿನ ಕಸ್ತೂರಿ ನಗರ ಸಮೀಪ ಕೃಷ್ಣಯ್ಯನಪಾಳ್ಯದ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಕೆಲವರಿಗೆ ಎಷ್ಟೇ ಅನುದಾನ ಹಣ ಕೊಟ್ರೂ ಅಳೋದು ಬಿಡೋಲ್ಲ : ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ಗೆ ಮೋದಿ ಚಾಟಿ
ಮತ್ತೊಂದೆಡೆ ಈ ಕಾರು ಕಳೆದೆರಡು ದಿನಗಳಿಂದ ಜ್ಯೋತಿರ್ಮಠ ಸಮೀಪ ತಿರುಗಾಡುತ್ತಿತ್ತು. ಕಾರಿನಲ್ಲಿ ಯುವಕ ಮತ್ತು ಮಹಿಳೆ ಇದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಆದರೆ ಯುವಕನ ಮಾಹಿತಿ ಇನ್ನು ಪತ್ತೆಯಾಗಬೇಕಿದೆ.
ಹೆಚ್ಚಿನ ತನಿಖೆಗಾಗಿ ಉನ್ನತ ಮಟ್ಟದ ತಂಡ ರಚಿಸಲಾಗಿದ್ದು, ಕಾರನ್ನು ವಿಧಿವಿಜ್ಞಾನ ತಜ್ಞರು ತನಿಖೆ ನಡೆಸುತ್ತಿದ್ದಾರೆ ಎಂದು ಚಮೋಲಿ ಎಸ್ಪಿ ಸರ್ವೇಶ್ ಪನ್ವರ್ ತಿಳಿಸಿದ್ದಾರೆ. ಇದು ಕೊಲೆಯಾಗಿರಬಹುದು ಎಂದು ಶಂಕಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ