Uttarakhand Election: ಉತ್ತರಾಖಂಡ ಸಿಎಂರಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ

Kannadaprabha News   | Asianet News
Published : Feb 15, 2022, 02:40 AM IST
Uttarakhand Election: ಉತ್ತರಾಖಂಡ ಸಿಎಂರಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ

ಸಾರಾಂಶ

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ ಮತ್ತು ಅವರ ಪತ್ನಿ ಗೀತಾ ಬಿಜೆಪಿ ಚಿಹ್ನೆಯ ಶಾಲುಗಳನ್ನು ಧರಿಸಿ ಖತಿಮಾ ಕ್ಷೇತ್ರದ ಬೂತ್‌ಗಳಿಗೆ ಸೋಮವಾರ ಭೇಟಿ ನೀಡಿದ್ದಾರೆ. 

ಡೆಹ್ರಾಡೂನ್‌ (ಫೆ.15): ಉತ್ತರಾಖಂಡ (Uttarakhand) ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ (CM Pushkar Singh Dhami) ಮತ್ತು ಅವರ ಪತ್ನಿ ಗೀತಾ (Geeta) ಬಿಜೆಪಿ ಚಿಹ್ನೆಯ ಶಾಲುಗಳನ್ನು (Scarves with BJP symbol) ಧರಿಸಿ ಖತಿಮಾ ಕ್ಷೇತ್ರದ ಬೂತ್‌ಗಳಿಗೆ ಸೋಮವಾರ ಭೇಟಿ ನೀಡಿದ್ದಾರೆ. ಉತ್ತರಾಖಂಡ ಬಿಜೆಪಿ ಘಟಕ ಮತ್ತು ಧಾಮಿ ಅವರು ಟ್ವೀಟರ್‌ನಲ್ಲಿ (Twitter) ಹಂಚಿಕೊಂಡ ಫೋಟೋಗಳಲ್ಲಿ ಅವರು ಶಾಲು ಧರಿಸುವುದು ಕಂಡುಬಂದಿದ್ದು ನೀತಿ ಸಂಹಿತೆ ಉಲ್ಲಂಘನೆ (Violating Election Code) ಆರೋಪ ಕೇಳಿಬಂದಿದೆ.

ಚುನಾವಣಾ ಆಯೋಗದ ನೀತಿಸಂಹಿತೆಯ ಪ್ರಕಾರ ಮತಗಟ್ಟೆಗಳ ಬಳಿ ಪಕ್ಷಗಳ ಚಿಹ್ನೆ ಪ್ರದರ್ಶಿಸುವಂತಿಲ್ಲ. ಆದರೆ ಧಾಮಿ ದಂಪತಿಯೊಂದಿಗೆ ಹಲವಾರು ಬಿಜೆಪಿ ಕಾರ್ಯಕರ್ತರು ಸಹ ಬಿಜೆಪಿಯ ಶಾಲುಗಳನ್ನು ಧರಿಸಿ ಮತಗಟ್ಟೆಗಳ ಬಳಿ ಪ್ರಚಾರ ನಡೆಸುತ್ತಿದ್ದರೂ ಚುನಾವಣಾ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವಿಪಕ್ಷಗಳು ಕಿಡಿಕಾರಿವೆ. ಈ ಕುರಿತು ಸುದ್ದಿವಾಹಿನಿಯೊಂದಿಗೆ ಮಾತನಾಡಿದ ಧಾಮಿ, ‘ಇದು ಪ್ರಚಾರವಲ್ಲ, ಎಷ್ಟುಪ್ರಮಾಣದ ಮತದಾನ ನಡೆದಿದೆ ಎಂದು ಮತಗಟ್ಟೆಗಳಿಗೆ ಭೇಟಿ ನೀಡುತ್ತಿದ್ದೆವು. 

ಇದನ್ನು ಪ್ರಚಾರ ಎಂದು ಯಾರು ಹೇಳಿದರು’ ಎಂದು ಪ್ರಶ್ನಿಸಿದ್ದಾರೆ. ‘ಇಲ್ಲಿ ಎಲ್ಲರೂ ಬಿಜೆಪಿ ಶಾಲುಗಳನ್ನು ಧರಿಸಿದ್ದಾರೆ. ಇದು ಯಾವುದರ ಮೇಲೂ ಪ್ರಭಾವ ಬೀರುವುದಿಲ್ಲ. ಜನ ಈಗಾಗಲೇ ನಿರ್ಧರಿಸಿದ್ದಾರೆ. ಬಿಜೆಪಿ ಗೆಲ್ಲುತ್ತದೆ’ ಎಂದು ಅವರ ಪತ್ನಿ ಹೇಳಿದ್ದಾರೆ. ಇದಕ್ಕೂ ಮೊದಲು ಧಾಮಿ ಅವರು ಅವರ ಕ್ಷೇತ್ರದಲ್ಲಿ ಮತದಾರರಿಗೆ ಹಣ ಹಂಚುತ್ತಿದ್ದಾರೆ ಎಂದು ಆಮ್‌ ಆದ್ಮಿ ಪಕ್ಷ (AAP) ಆರೋಪಿಸಿತ್ತು. ಇದಕ್ಕೆ ಸಂಬಂಧಿಸಿದ ವಿಡಿಯೋವನ್ನು ಪೋಸ್ಟ್‌ ಮಾಡಿ ಮುಖ್ಯಮಂತ್ರಿ ದಾಖಲೆ ಸಮೇತ ಸಿಕ್ಕಿಹಾಕಿಕೊಂಡಿದ್ದಾರೆ ಎಂದು ಹೇಳಿತ್ತು.

Uttarakhand Election ಬಿಜೆಪಿ ಕಾಂಗ್ರೆಸ್ ನಡುವೆ ನೇರಾನೇರ ಸ್ಪರ್ಧೆ, ಕೇಸರಿ ಪಡೆಗೆ ಅಧಿಕಾರ ಗದ್ದುಗೆ, ಸಮೀಕ್ಷಾ ವರದಿ ಸಂಚಲನ!

ಮತ್ತೆ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ: ಫೆಬ್ರವರಿ 14 ರಂದು ಉತ್ತರಾಖಂಡ (Uttarakhand) ವಿಧಾನಸಭೆ ಚುನಾವಣೆ ನಡೆಯಲಿದ್ದು, ಮತದಾನಕ್ಕೆ ಕೇವಲ 2 ದಿನ ಬಾಕಿ ಇದೆ. ಈ ಮಧ್ಯೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ( CM Pushkar Singh Dhami) ಏಕರೂಪ ನಾಗರಿಕ ಸಂಹಿತೆ ಕರಡು ತಯಾರಿಸಲು ಸಮಿತಿ ರಚನೆಯ ಬಗ್ಗೆ ಶನಿವಾರ ಮಾಹಿತಿ ನೀಡಿದ್ದಾರೆ. "ಹೊಸ ಬಿಜೆಪಿ ಸರ್ಕಾರವು ರಾಜ್ಯದಲ್ಲಿ  ಪ್ರಮಾಣ ವಚನದ ನಂತರ ಏಕರೂಪ ನಾಗರಿಕ ಸಂಹಿತೆಯ ಕರಡು ತಯಾರಿಸಲು ಸಮಿತಿಯನ್ನು ರಚಿಸುತ್ತದೆ. 

ಈ ಯುಸಿಸಿ (Uniform Civil Code) ಎಲ್ಲಾ ಜನರಿಗೆ ಅವರ ವೈಯಕ್ತಿಕ ನಂಬಿಕೆ ಹೊರತಾಗಿಯೂ  ಮದುವೆಗಳು, ವಿಚ್ಛೇದನ, ಭೂಮಿ-ಆಸ್ತಿ ಮತ್ತು ಉತ್ತರಾಧಿಕಾರದ ಬಗ್ಗೆ ಒಂದೇ ರೀತಿಯ ಕಾನೂನುಗಳನ್ನು ಒದಗಿಸುತ್ತದೆ. "ಎಂದು ಉತ್ತರಾಖಂಡ ಸಿಎಂ ಹೇಳಿದ್ದಾರೆ. ಉತ್ತರಾಖಂಡದ ಎಲ್ಲಾ 70 ವಿಧಾನಸಭಾ ಸ್ಥಾನಗಳಿಗೆ  ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಬಿಜೆಪಿ-ಕಾಂಗ್ರೆಸ್ ಜತೆಗೆ ಆಮ್ ಆದ್ಮಿ ಮತ್ತಿತರ ಪಕ್ಷಗಳೂ ಚುನಾವಣಾ ಪ್ರಚಾರದಲ್ಲಿ ನಿರತವಾಗಿವೆ. ಸಾರ್ವಜನಿಕರನ್ನು ಓಲೈಸಲು ಭರವಸೆ ನೀಡಲಾಗುತ್ತಿದೆ. ಅಭಿವೃದ್ಧಿಯ ಮಾತು ಕೇಳಿ ಬರುತ್ತಿದೆ. ಈ ಮಧ್ಯೆ ಬಿಜೆಪಿ ಅಧಿಕಾರಕ್ಕೆ ಬಂದರೆ  ಏಕರೂಪ ನಾಗರಿಕ ಸಂಹಿತೆ ಜಾರಿ ಬಗ್ಗೆ ಉತ್ತರಾಖಂಡ್‌ ಸಿಎಂ ಮಾತನಾಡಿದ್ದಾರೆ. 

"ಫುಷ್ಕರ್ ಅಂದ್ರೆ ಫ್ಲವರ್ ಅಂದುಕೊಂಡ್ರಾ, ಅದು ಫೈರ್" ರಕ್ಷಣಾ ಸಚಿವರ ಪುಷ್ಪಾ ಡೈಲಾಗ್!

ಸಂವಿಧಾನದ ಭಾವನೆಗಳಿಗೆ ಸರಿಯಾದ ರೂಪ: ಏಕರೂಪ ನಾಗರಿಕ ಸಂಹಿತೆಯು ಸಂವಿಧಾನ ರಚಿಸಿದವರ ಕನಸ್ಸನ್ನು ನನಸು ಮಾಡುವತ್ತ ಪ್ರಮುಖ ಹೆಜ್ಜೆಯಾಗಲಿದೆ ಎಂದು ಹೇಳಿರುವ ಧಾಮಿ " ಇದು ಸಂವಿಧಾನದ ಭಾವನೆಗಳಿಗೆ ಸರಿಯಾದ ರೂಪ ನೀಡಲಿದೆ. ಇದು ಭಾರತದ ಸಂವಿಧಾನದ ಆರ್ಟಿಕಲ್‌ 44ರ  ಅನ್ವಯ ಒಂದು ಪ್ರಮುಖ ಹೆಜ್ಜೆಯಾಗಲಿದೆ ಎಂದು ಹೇಳಿದ್ದಾರೆ.  "ಸರ್ವೊಚ್ಛ ನ್ಯಾಯಾಲಯುವೂ ಕಾಲದಿಂದ ಕಾಲಕ್ಕೆ ಏಕರೂಪ ನಾಗರಿಕ ಸಂಹಿತೆ ಜಾರಿ ಬಗ್ಗೆ ತಿಳಿ ಹೇಳಿದೆ. ಅಲ್ಲದೇ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳದಿರುವುದಕ್ಕೂ ಹಲವು ಬಾರಿ ಅಸಮಾಧಾನ ವ್ಯಕ್ತಪಡಿಸಿದೆ" ಎಂದು ಸಿಎಂ ಪುಷ್ಕರ್ ಹೇಳಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?