ಉತ್ತರಾಖಂಡ ಹಿಮಕುಸಿತ ಆಗಿದ್ದು ಹೀಗೆ!

Published : Feb 11, 2021, 08:20 AM ISTUpdated : Feb 11, 2021, 09:43 AM IST
ಉತ್ತರಾಖಂಡ ಹಿಮಕುಸಿತ ಆಗಿದ್ದು ಹೀಗೆ!

ಸಾರಾಂಶ

ಇಡೀ ಘಟನೆಯ ಮೇಲೆ ಬೆಳಕು ಚೆಲ್ಲಿದ ಉಪಗ್ರಹ ಚಿತ್ರಗಳು| ಉತ್ತರಾಖಂಡ ಹಿಮಕುಸಿತ ಆಗಿದ್ದು ಹೀಗೆ| 5600 ಮೀಟರ್‌ ಎತ್ತರದಲ್ಲಿರುವ ತ್ರಿಶಾಲಾ ನೀರ್ಗಲ್ಲು ಪ್ರದೇಶದಲ್ಲಿ ಹಿಮ ಮತ್ತು ಮಂಜುಗಡ್ಡೆಯ ಬೆಳವಣಿಗೆ

ನವದೆಹಲಿ(ಫೆ.11): ಉತ್ತರಾಖಂಡದ ಚಮೋಲಿ ಜಿಲ್ಲೆಯ ಹಿಮಕುಸಿತಕ್ಕೆ ಕಾರಣವೇನು ಎಂಬುದರ ಬಗ್ಗೆ ಸ್ಪಷ್ಟವಾಗಿ ಬೆಳಕು ಚೆಲ್ಲಬಹುದಾದ ಉಪಗ್ರಹ ಚಿತ್ರಗಳು ಬಿಡುಗಡೆಯಾಗಿವೆ. ಈ ಚಿತ್ರಗಳು ಹಿಮಕುಸಿತವಾದ ಪ್ರದೇಶ ಯಾವುದು? ಆ ಪ್ರದೇಶದ ದುರ್ಘಟನೆಗೂ ಮೊದಲು ಹೇಗಿತ್ತು? ಬಳಿಕ ಹೇಗೆ ಕಾಣುತ್ತಿದೆ ಎಂಬುದರ ಸ್ಪಷ್ಟಚಿತ್ರಣ ನೀಡಿದೆ.

"

ಫೆ.6ರಂದು ತೆಗೆದ ಉಪಗ್ರಹ ಚಿತ್ರಗಳ ಅನ್ವಯ, ಸಮುದ್ರ ಮಟ್ಟದಿಂದ 5600 ಮೀಟರ್‌ ಎತ್ತರದಲ್ಲಿರುವ ತ್ರಿಶಾಲಾ ನೀರ್ಗಲ್ಲು ಪ್ರದೇಶದಲ್ಲಿ ಹಿಮ ಮತ್ತು ಮಂಜುಗಡ್ಡೆಯ ಬೆಳವಣಿಗೆ ಕಾಣಬಹುದಾಗಿದೆ. ಆದರೆ ಫೆ.7ರಂದು ಹಿಮಕುಸಿತದ ಬಳಿಕ ತೆಗೆದ ಚಿತ್ರದಲ್ಲಿ ಆ ಪ್ರದೇಶದಲ್ಲಿನ ಮಂಜುಗಡ್ಡೆ ಮತ್ತು ಹಿಮ ಸಂಪೂರ್ಣವಾಗಿ ಮಾಯವಾಗಿರುವುದನ್ನು ಗುರುತಿಸಬಹುದಾಗಿದೆ.

ಈ ಚಿತ್ರವನ್ನು ಆಧರಿಸಿ ಹೇಳುವುದಾದರೆ 5600 ಮೀಟರ್‌ ಎತ್ತರದ ಪ್ರದೇಶದಲ್ಲಿನ ತ್ರಿಶಾಲಾ ನೀರ್ಗಲ್ಲು ಪ್ರದೇಶದಲ್ಲಿನ 200 ಚದರ ಮೀ. ವ್ಯಾಪ್ತಿಯ ದೊಡ್ಡ ಹಿಮಬಂಡೆಯೊಂದು ಕುಸಿದು 3800 ಮೀ. ಆಳಕ್ಕೆ (2 ಕಿ.ಮೀ ಆಳಕ್ಕೆ) ಕುಸಿದಿದೆ. ಬಳಿಕ ತನ್ನೊಂದಿಗೆ ಭಾರೀ ವೇಗದಲ್ಲಿ ಹಾದಿಯಲ್ಲಿ ಸಿಕ್ಕ ಕಲ್ಲು, ಮಣ್ಣು, ಬಂಡೆಗಳೊಂದಿಗೆ ಧೌಲಿಗಂಗಾ ಮತ್ತು ಅಲಕನಂದಾ ನದಿ ಸೇರಿದೆ. ಈ ಮೂಲಕ ಎರಡೂ ನದಿಗಳಲ್ಲಿ ಏಕಾಏಕಿ ದಿಢೀರ್‌ ಪ್ರವಾಹ ಕಾಣಿಸಿಕೊಂಡು, ಎರಡು ಜಲವಿದ್ಯುತ್‌ ಘಟಕಗಳನ್ನು ನಾಮಾವಶೇಷ ಮಾಡಿದೆ ಎಂದು ತಜ್ಞರು ವಿಶ್ಲೇಷಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇಂಡಿಗೋ ಸಿಇಒ ವಜಾಕ್ಕೆ ಕೇಂದ್ರ ಸೂಚನೆ ಸಾಧ್ಯತೆ
ಗುಲಾಮಿ ಮನಃಸ್ಥಿತಿ ಬಿಡಲು 2035ರ ಗಡುವು : ಮೋದಿ