
ನವದೆಹಲಿ (ಸೆ.17): ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದ್ದ ಚಾರ್ಧಾಮ್ ಯಾತ್ರೆಗೆ ಷರತ್ತುಬದ್ಧ ಅನುಮತಿ ನೀಡಿ ಉತ್ತರಾಖಂಡ ಹೈಕೋರ್ಟ್ ಗುರುವಾರ ಆದೇಶ ಹೊರಡಿಸಿದೆ.
ಯಾತ್ರಾರ್ಥಿಗಳು ಕೋವಿಡ್ ಮಾರ್ಗಸೂಚಿ ಪಾಲಿಸಬೇಕು. ಯಾತ್ರಾರ್ಥಿಗಳ ಸಂಖ್ಯೆಗೆ ಮಿತಿ ಇರಬೇಕು, ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ಪ್ರಮಾಣ ಪತ್ರ ಹೊಂದಿರಬೇಕು.
ಪುಣ್ಯಕ್ಷೇತ್ರ ಯಾತ್ರೆ ಅಂದ್ರೆ ಕಾಶಿ, ರಾಮೇಶ್ವರ ಜೊತೆಗೆ ಚಾರ್ ಧಾಮ್; ಇಲ್ಲಿಗೂ ಭೇಟಿ ಕೊಡಿ!
ಲಸಿಕೆ ಪ್ರಮಾಣಪತ್ರ ಕಡ್ಡಾಯ. ಕೇದಾರನಾಥಕ್ಕೆ ನಿತ್ಯ ಗರಿಷ್ಠ 800 ಮಂದಿ, ಬದರೀನಾಥಕ್ಕೆ ಗರಿಷ್ಠ 1200, ಗಂಗೋತ್ರಿಗೆ 600, ಯಮುನೋತ್ರಿಗೆ 400 ಮಂದಿ ಮಾತ್ರ ಭೇಟಿ ನೀಡಬಹುದು ಎಂದು ನಿಬಂಧನೆ ವಿಧಿಸಿದೆ. ಚಾರ್ಧಾಮ್ ಯಾತ್ರೆಗೆ ಅವಕಾಶ ನೀಡಿದ್ದ ರಾಜ್ಯ ಸಚಿವ ಸಂಪುಟ ತೀರ್ಮಾನಕ್ಕೆ ಜು.28ರಂದು ಹೈಕೋರ್ಟ್ ತಡೆ ನೀಡಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ