
ಡೆಹ್ರಾಡೂನ್(ಫೆ.05): ಉತ್ತರಾಖಂಡ್ ಪೊಲೀಸ್ ಮಹಾ ನಿರ್ದೇಶಕ ಅಶೋಕ್ ಕುಮಾರ್ ಗುರುವಾರದಂದು ಮಾತನಾಡುತ್ತಾ ಸಾಮಾಜಿಕ ಜಾಲತಾಣಗಳ ದುರುಪಯೋಗ ತಡೆಯಲು ಪಾಸ್ಪೋರ್ಟ್ಗೆ ಅರ್ಜಿ ಸಲ್ಲಿಸಿದವರ ಸಾಮಾಜಿಕ ಖಾತೆ ಪರಿಶೀಲನೆ ನಡೆಸುವ ಅಗತ್ಯವಿದೆ. ಉತ್ತರಾಖಂಡ್ ಪೊಲೀಸರು ಇತ್ತೀಚೆಗಷ್ಟೇ ಪೊಲೀಸ್ ಮಹಾನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪಾಸ್ಪೋರ್ಟ್ ಅರ್ಜಿದಾರರ ಪೊಲೀಸ್ ವೆರಿಫಿಕೇಷನ್ ಪ್ರಕ್ರಿಯೆ ವೇಳೆ ಅವರ ಸೋಶಿಯಲ್ ಮಿಡಿಯಾ ಖಾತೆಗಳ ಪರಿಶೀಲನೆ ನಡೆಸಲು ನಿರ್ಧರಿಸಲಾಗಿದೆ.
ಸೋಶಿಯಲ್ ಮೀಡಿಯಾ ಖಾತೆಗಳ ದುರುಪಯೋಗ ತಡೆಗಟ್ಟುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ. ಇದು ಯಾವುದೇ ಕಠಿಣ ಅಥವಾ ಹೊಸ ಕ್ರಮ ಅಲ್ಲ ಎಂದಿರುವ ಅವರು ಪಾಸ್ಪೋರ್ಟ್ ಕಾನೂನಿನಲ್ಲಿ ಈ ಕುರಿತು ಈ ಹಿಂದಿನಿಂದಲೇ ಇರುವ ನಿಯಮವನ್ನು ಜಾರಿಗೊಳಿಸಲಾಗುತ್ತಿದೆ ಎಂದು ಪೊಲೀಸ್ ಮಹಾನಿರ್ದೇಶಕರು ಹೇಳಿದ್ದಾರೆ.
ಪಾಸ್ಪೋರ್ಟ್ ಕಾನೂನಿನಲ್ಲಿ ರಾಷ್ಟ್ರ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ವ್ಯಕ್ತಿಗೆ ಪಾಸ್ಪೋರ್ಟ್ ಜಾರಿಗೊಳಿಸುವ ಅವಕಾಶವಿಲ್ಲ. ದೆಹಲಿ ರೈತ ಪ್ರತಿಭಟನೆಯಲ್ಲಿ ಸೋಶಿಯಲ್ ಮಿಡಿಯಾ ಪ್ರಭಾವ ಹೆಚ್ಚಾಗುತ್ತಿರುವ ಬೆನ್ನಲ್ಲೇ ಪೊಲೀಸರು ಇಂತಹುದ್ದೊಂದು ಕ್ರಮ ಜಾರಿಗೊಳಿಸಿದ್ದಾರೆಂಬುವುದು ಉಲ್ಲೇಖನೀಯ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ