
ಉತ್ತರಕಾಶಿ (ನ.28): ಇನ್ನೇನು ಬದುಕುವ ಯಾವ ಮಾರ್ಗವೂ ಇಲ್ಲದೇ ಸಾವೇ ದಿಕ್ಕು ಎಂದು ಕಣ್ಣೀರಿಟ್ಟಿದ್ದ 41 ಕಾರ್ಮಿಕರನ್ನು ರಕ್ಷಿಸುವಲ್ಲಿ ಕೊನೆಗೂ ಸರ್ಕಾರ ಯಶಸ್ವಿಯಾಗಿದೆ. 17 ದಿನಗಳ ನಿರಂತರ ಪ್ರಯತ್ನದಿಂದಾಗಿ 41 ಕಾರ್ಮಿಕರು ಈಗ ಸಾವನ್ನೇ ಗೆದ್ದು ಬಂದಿದ್ದಾರೆ. ಮಂಗಳವಾರ ಮಧ್ಯಾಹ್ನದ ವೇಳೆಗೆ ಕಾರ್ಮಿಕರನ್ನು ರಕ್ಷಿಸುವ ನಿಟ್ಟಿನಲ್ಲಿ ಕೊರೆಯುತ್ತಿದ್ದ ಸುರಂಗ ಕೊನೇ ಹಂತಕ್ಕೆ ಬಂದಿತು. ಅದಾದ ಕೆಲವೇ ಹೊತ್ತಿನಲ್ಲಿ ಕಾರ್ಮಿಕರು ಒಬ್ಬೊಬ್ಬರಾಗಿ ಸುರಂಗದಿಂದ ಹೊರಬಂದರು. ಸುರಂಗದ ಒಳಗಡೆಯೇ ಕಾರ್ಮಿಕರನ್ನು ವೈದ್ಯಕೀಯ ತಪಾಸಣೆ ಮಾಡಿ ಬಳಿಕ ಅವರನ್ನು ಹೊರತರಲಾಗಿದೆ. ರಕ್ಷಣಾ ಕಾರ್ಯಾಚರಣೆಯ ಕಾರಣದಿಂದಾ ಸುರಂಗದೊಳಗೆ ತಾತ್ಕಾಲಿಕ ವೈದ್ಯಕೀಯ ಸೌಲಭ್ಯವನ್ನು ಮಾಡಲಾಗಿತ್ತು. ಸಿಕ್ಕಿಬಿದ್ದ ಕಾರ್ಮಿಕರನ್ನು ಹೊರತಂದ ಬಳಿಕ, ಈ ಸ್ಥಳದಲ್ಲಿ ಆರೋಗ್ಯ ತರಬೇತಿ ನೀಡಲು ವ್ಯವಸ್ಥೆ ಮಾಡಲಾಗಿತ್ತು. ಯಾವುದೇ ಸಮಸ್ಯೆ ಕಂಡುಬಂದಲ್ಲಿ ಆರೋಗ್ಯ ಇಲಾಖೆಯಿಂದ 8 ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದ್ದು, ವೈದ್ಯರು ಹಾಗೂ ತಜ್ಞರ ತಂಡವನ್ನು ನಿಯೋಜಿಸಲಾಗಿದೆ.ಒಟ್ಟು ಈ ಕಾರ್ಯಾಚರಣೆ 395 ಗಂಟೆಗಳ ಕಾಲ ನಡೆದಿದೆ. ಮೊದಲ ಹಂತದಲ್ಲಿ ಐವರು ಕಾರ್ಮಿಕರು ಹೊರ ತರಲಾಯಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ