ಖಾಲಿ ಕುರ್ಚಿ ಬಹಳಷ್ಟು ಬಯಲು ಮಾಡುತ್ತೆ: ಸಿಎಂ ವಿರುದ್ಧ ರಾಜ್ಯಪಾಲರ ಕಿಡಿ!

Published : Aug 16, 2020, 03:27 PM ISTUpdated : Aug 16, 2020, 03:31 PM IST
ಖಾಲಿ ಕುರ್ಚಿ ಬಹಳಷ್ಟು ಬಯಲು ಮಾಡುತ್ತೆ: ಸಿಎಂ ವಿರುದ್ಧ ರಾಜ್ಯಪಾಲರ ಕಿಡಿ!

ಸಾರಾಂಶ

ಸ್ವಾತಂತ್ರ್ಯ ದಿನದ ಪ್ರಯುಕ್ತ ರಾಜಭವನದಲ್ಲಿ ಏರ್ಪಡಿಸಿದ್ದ ಟೀ ಪಾರ್ಟಿ| ಟೀ ಪಾರ್ಟಿಗೆ ಹಾಜರಾಗದ ಸಿಎಂ| ಪಾರ್ಟಿ ನಡೆದ ಕೆಲವೇ ಕ್ಷಣದಲ್ಲಿ ಫೋಟೋ ಸಮೇತ ಕಿಡಿ ಕಾರಿದ ರಾಜ್ಯಪಾಲರು

ಕೋಲ್ಕತ್ತಾ(ಆ.16): ಪಶ್ಚಿಮ ಬಂಗಾಳದದ ರಾಜ್ಯಪಾಲ ಜಗದೀಪ್‌ ಧನ್‌ಖಡ್ ಸ್ವಾತಂತ್ರ್ಯ ದಿನದ ಪ್ರಯುಕ್ತ ರಾಜಭವನದಲ್ಲಿ ಆಯೋಜಿಸಲಾಗಿದ್ದ ಪಾರಂಪರಿಕ ಚಾಯ್‌ ಪಾರ್ಟಿಗೆ ಸಿಎಂ ಮಮತಾ ಬ್ಯಾನರ್ಜಿ ಗೈರಾಗಿರುವ ಸಂಬಂಧ ಕಿಡಿ ಕಾರಿದ್ದಾರೆ. ರಾಜ್ಯಪಾಲರು ಇದು ಬಹುದೊಡ್ಡ ಅಪರಾಧ ಎಂಬಂತೆ ಪರಿಗಣಿಸಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡುವ ಮೂಲಕ ರಾಜ್ಯಪಾಲರು ಮಮತಾ ಬ್ಯಾನರ್ಜಿ ಹಾಗೂ ಅರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಖಾಲಿ ಕುರ್ಚಿಯೊಂದರ ಫೋಟೋ ಶೇರ್ ಮಾಡುತ್ತಾ ಚಿತ್ರಗಳು ಅನೇಕ ವಿಚಾರ ಬಯಲಲು ಮಾಡುತ್ತೆ ಎಂದಿದ್ದಾರೆ.

ಕೋಲ್ಕತ್ತಾದ ರೆಡ್ ರೋಡ್‌ನಲ್ಲಿ ಶನಿವಾರ ಬೆಳಗ್ಗೆ 25 ನಿಮಿಷಗಳ ಪುಟ್ಟ ಕಾರ್ಯಕ್ರಮದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಬಳಿಕ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತನ್ನ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ 10:40 ಗಂಟೆಗೆ ರಾಜ್ಯಪಾಲ ಜಗದೀಪ್‌ ಧನ್‌ಖಡ್‌ರನ್ನು ಭೇಟಿಯಾಗಿದ್ದರು. ಇದೊಂದು ಅನೌಪಚಾರಿಕ ಭೇಟಿಯಾಗಿತ್ತಾದರೂ ಬರೋಬ್ಬರಿ 90 ನಿಮಿಷ ನಡೆದಿತ್ತು. ಅಲ್ಲದೇ ಇದು ಬಹಳ ಸೌಹಾರ್ದಪೂರ್ಣವಾಗಿತ್ತು.

ಆದರೆ ರಾಜಭವನದಲ್ಲಿ ಸಂಜೆ ನಡೆದ ಎಟ್‌ ಹೋಂ ಟೀ ಪಾರ್ಟಿಯ ಕೆಲ ತಾಸಿನ ಬಳಿಕ ಟ್ವೀಟ್ ಮಾಡಿದ ರಾಜ್ಯಪಾಲ 'ರಾಜ್ಯಭವನದಲ್ಲಿ ಸ್ವಾತಂತ್ರ್ಯ ದಿನದ ಪ್ರಯುಕ್ತ ಮುಖ್ಯಮಂತ್ರಿ ಹಾಗೂ ಅಧಿಕಾರಿಗಳ ಅನುಪಸ್ಥಿತಿ ನನ್ನನ್ನು ಅಚ್ಚರಿಗೀಡು ಮಾಡಿದೆ. ನಮಗೆ ನಮ್ಮ ಸ್ವಾತಂತ್ರ್ಯ ಸೇನಾನಿಗಳ ಪರ ಗೌರವ ಇರಬೇಕು. ಅವರು ನಮ್ಮ ದೇಶದ ಸ್ವಾತಂತ್ರ್ಯ ಹಾಗೂ ಪ್ರಜಾಪ್ರಭುತ್ವಕ್ಕಾಗಿ ತಮ್ಮದೆಲ್ಲವನ್ನೂ ತ್ಯಾಗ ಮಾಡಿದ್ದರು. ನನ್ನ ಬಳಿ ಶಬ್ಧಗಳಿಲ್ಲ' ಎಂದಿದ್ದಾರೆ,.

ಇದಾಧ ಬಳಿಕ ಮತ್ತೊಂದು ಟ್ವೀಟ್ ಮಾಡಿದ ರಾಜ್ಯಪಾಲರು ಮುಖ್ಯಮಂತ್ರಿಯ ಖಾಲಿ ಕುರ್ಚಿಯ ಫೋಟೋ ಫೋಸ್ಟ್‌ ಮಾಡುತ್ತಾ ಈ ಕುರ್ಚಿ ಮುಖ್ಯಮಂತ್ರಿಗಾಗಿ ಮೀಸಲಾಗಿತ್ತು. ಇದರಲ್ಲಿ ರಾಜ್ಯಪಾಲರು ಖಾಲಿ ಕುರ್ಚಿ ಕಡೆ ನೋಡುವ ದೃಶ್ಯವಿದೆ.

ತಮ್ಮ ಈ ಎರಡನೇ ಟ್ವೀಟ್‌ನಲ್ಲಿ ರಾಜ್ಯಪಾಲರು ಸ್ವಾತಂತ್ರ್ಯ ದಿನದ ಅಂಗವಾಗಿ ರಾಜಭವನದಲ್ಲಿ ಸಿಎಂ ಮಮತಾ ಬ್ಯಾನರ್ಜಿಯ ಈ ಖಾಲಿ ಕುರ್ಚಿ ಅನೇಕ ವಿಚಾರವನ್ನು ಬಹಿರಂಗಪಡಿಸುತ್ತದೆ ಎಂದು ಬರೆದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಟೊಯೋಟಾ ಹೈಡ್ರೋಜನ್ ಕಾರು ಮೂಲಕ ಸಂಸತ್‌ಗೆ ಬಂದ ಪ್ರಹ್ಲಾದ್ ಜೋಶಿ, ಇದರ ಲಾಭವೇನು?
ಮದುವೆ ಮಾತುಕತೆಗೆಂದು ಕರೆಸಿ ಎಂಜಿನಿಯರಿಂಗ್ ವಿದ್ಯಾರ್ಥಿಯ ಮಸಣಕ್ಕೆ ಅಟ್ಟಿದ ಗರ್ಲ್‌ಫ್ರೆಂಡ್ ಮನೆಯವರು