ಎಲ್ಲಾ ವಯೋವರ್ಗಕ್ಕೂ ತಕ್ಷಣಕ್ಕೆ ಲಸಿಕೆ ಇಲ್ಲ: ಕೇಂದ್ರದ ಸ್ಪಷ್ಟನೆ

Published : Apr 07, 2021, 11:05 AM ISTUpdated : Apr 07, 2021, 11:29 AM IST
ಎಲ್ಲಾ ವಯೋವರ್ಗಕ್ಕೂ ತಕ್ಷಣಕ್ಕೆ ಲಸಿಕೆ ಇಲ್ಲ: ಕೇಂದ್ರದ ಸ್ಪಷ್ಟನೆ

ಸಾರಾಂಶ

ಎಲ್ಲಾ ವಯೋಮಾನದವರಿಗೂ ಕೊರೋನಾ ಲಸಿಕೆ ವಿತರಿಸಬೇಕೆಂಬ ಮಹಾರಾಷ್ಟ್ರ ಮತ್ತು ದೆಹಲಿ ಮುಖ್ಯಮಂತ್ರಿಗಳ ಬೇಡಿಕೆ| ಎಲ್ಲಾ ವಯೋವರ್ಗಕ್ಕೂ ತಕ್ಷಣಕ್ಕೆ ಲಸಿಕೆ ಇಲ್ಲ: ಕೇಂದ್ರದ ಸ್ಪಷ್ಟನೆ

ನವದೆಹಲಿ(ಏ.07): ಎಲ್ಲಾ ವಯೋಮಾನದವರಿಗೂ ಕೊರೋನಾ ಲಸಿಕೆ ವಿತರಿಸಬೇಕೆಂಬ ಮಹಾರಾಷ್ಟ್ರ ಮತ್ತು ದೆಹಲಿ ಮುಖ್ಯಮಂತ್ರಿಗಳ ಬೇಡಿಕೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ಅಜಯ್‌ ಭೂಷಣ್‌, ‘ಸೋಂಕಿನಿಂದ ಮರಣಹೊಂದುವ ಸಾಧ್ಯತೆ ಹೆಚ್ಚಿರುವ ವ್ಯಕ್ತಿಗಳಿಗೆ ಲಸಿಕೆ ನೀಡುವುದು ನಮ್ಮ ಮೊದಲ ಆದ್ಯತೆ. ಅವರ ರಕ್ಷಣೆ ನಮ್ಮ ಮೊದಲ ಗುರಿ. ಯಾರಿಗೆ ಅಗತ್ಯವಿದೆಯೋ ಅವರಿಗೆ ಲಸಿಕೆ ನೀಡುವುದು ನಮ್ಮ ಗುರಿಯೇ ಹೊರತೂ ಬೇಕಾದವರಿಗೆಲ್ಲಾ ಲಸಿಕೆ ನೀಡುವುದು ಎಂದಿಗೂ ನಮ್ಮ ಗುರಿಯಾಗಿರಲಿಲ್ಲ’ ಎಂದಿದ್ದಾರೆ.

ಇನ್ನು ಸರ್ಕಾರದ ಗುರಿ ಸೋಂಕು ನಿಯಂತ್ರಣ. ಯಾವುದೇ ದೇಶದಲ್ಲಾದರೂ 45 ವರ್ಷಕ್ಕಿಂತ ಕೆಳಗಿನ ವಯಸ್ಸಿನವರಿಗೆ ಲಸಿಕೆ ನೀಡಿದ್ದನ್ನು ಕೇಳಿರುವಿರಾ’ ಎಂದು ನೀತಿ ಅಯೋಗದ ಸದಸ್ಯ ವಿ.ಕೆ.ಪೌಲ್‌ ಪ್ರಶ್ನಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!