
ದೆಹಲಿ(ಏ.29): ಭಾರತ-ಚೀನಾ ಗಡಿಯುದ್ದಕ್ಕೂ ಎತ್ತರದ ಪ್ರದೇಶದಲ್ಲಿ ಸಂಪರ್ಕವನ್ನು ಒದಗಿಸಲು ರಸ್ತೆ ನಿರ್ಮಾಣ ಕಂಪನಿಗೆ (ಆರ್ಸಿಸಿ) ಆದೇಶಿಸಿ ಮೇಲುಸ್ತುವಾರಿ ನೋಡಿಕೊಳ್ಳಲು ಗಡಿ ರಸ್ತೆಗಳ ಸಂಸ್ಥೆ ಮಹಿಳಾ ಅಧಿಕಾರಿಯನ್ನು ನೇಮಿಸಿದೆ.
ಮಹಾರಾಷ್ಟ್ರದ ವಾರ್ಧಾದ ವೈಶಾಲಿ ಎಸ್ ಹಿವಾಸೆ ಅವರು ತಮ್ಮ ಕರ್ತವ್ಯವನ್ನು ಸವಾಲಿನ ಸ್ಥಳ ಮತ್ತು ಸಂದರ್ಭದಲ್ಲಿ ನಿರ್ವಹಿಸಲಿದ್ದಾರೆ. ಎಂ ಟೆಕ್ ಪದವಿ ಪಡೆದಿರುವ ವೈಶಾಲಿ ಈಗಾಗಲೇ ಕಾರ್ಗಿಲ್ನಲ್ಲಿ ಕರ್ತವ್ಯದ ಅವಧಿಯನ್ನು ಪೂರ್ಣಗೊಳಿಸಿದ್ದಾರೆ ಎಂದು ಹೇಳಲಾಗಿದೆ.
ಕನ್ಯತ್ವ ಪರೀಕ್ಷೆ ಕ್ರೂರ ಪರೀಕ್ಷೆಯಿಂದ ನಲುಗಿದ ಸೋದರಿಯರ ಹೋರಾಟದ ಹಾದಿ
ಇದು ಬಿಆರ್ಒನ ಒಂದು ಸುಂದರ ಆರಂಭವಾಗಿದ್ದು, ಇದು ಮಹಿಳಾ ಸಬಲೀಕರಣದ ಹೊಸ ಯುಗವನ್ನು ಹುಟ್ಟುಹಾಕುತ್ತದೆ. ಈ ಮೂಲಕ ಮಹಿಳಾ ಅಧಿಕಾರಿಗಳು ಅತ್ಯಂತ ಕಠಿಣ ಕಾರ್ಯಗಳನ್ನು ವಹಿಸಿಕೊಳ್ಳುವುದನ್ನು ನೋಡಬಹುದು ಎಂದು ಹೇಳಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ