ಒಂದೇ ದಿನದಲ್ಲಿ ವಂದೇ ಭಾರತ್‌ ರಿಪೇರಿ, ಎಮ್ಮೆಗಳ ಮಾಲೀಕರ ಮೇಲೆ ಎಫ್‌ಐಆರ್‌!

By Santosh NaikFirst Published Oct 7, 2022, 3:24 PM IST
Highlights

ದನಗಳ ಹಿಂಡಿಗೆ ಬಡಿದು ನುಜ್ಜುಗುಜ್ಜಾಗಿದ್ದ ವಂದೇ ಭಾರತ್‌ ಎಕ್ಸ್‌ಪ್ರೆಸ್‌ನ ಮುಂಭಾಗವನ್ನು ರಿಪೇರಿ ಮಾಡಲಾಗಿದೆ. ಇದರ ನಡುವೆ ಗುಜರಾತ್‌ನ ದನಗಳ ಮಾಲೀಕರ ವಿರುದ್ಧ ಆರ್‌ಪಿಎಫ್‌ ಎಫ್‌ಐಆರ್‌ ದಾಖಲು ಮಾಡಿದೆ. ಡಿಕ್ಕಿಯ ರಭಸಕ್ಕೆ ನಾಲ್ಕು ಜಾನುವಾರುಗಳು ಸಾವು ಕಂಡಿವೆ.

ಅಹಮದಾಬಾದ್‌(ಅ.7): ಎಮ್ಮೆಗಳ ಹಿಂಡಿಗೆ ಡಿಕ್ಕಿಯಾಗಿ ನುಜ್ಜುಗುಜ್ಜಾಗಿದ್ದ ಮುಂಬೈ-ಗಾಂಧಿನಗರ ವಂದೇ ಭಾರತ್‌ ಎಕ್ಸ್‌ಪ್ರೆಸ್‌ಅನ್ನು ರೈಲ್ವೆ ಇಲಾಖೆ ಒಂದೇ ದಿನದಲ್ಲಿ ರಿಪೇರಿ ಮಾಡಿದೆ. ಇದರ ನಡುವೆ ಡಿಕ್ಕಿ ಹೊಡೆದು ರೈಲಿನ ಮುಂಭಾಗಕ್ಕೆ ಹಾನಿಯಾದ ಎಮ್ಮೆಗಳ ಮಾಲೀಕರ ವಿರುದ್ಧ ಗುಜರಾತ್‌ನ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್‌) ಪ್ರಕರಣ ದಾಖಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಮ್ಮೆಗಳಿಗೆ ಡಿಕ್ಕಿ ಹೊಡೆದ ನಂತರ ಹಾನಿಗೊಳಗಾದ ಸೆಮಿ-ಹೈ ಸ್ಪೀಡ್ ರೈಲಿನ ಡ್ರೈವರ್ ಕೋಚ್‌ನ ನೋಸ್‌ ಕೋನ್ ಕವರ್ ಅನ್ನು ಮುಂಬೈನಲ್ಲಿ ಸಂಪೂರ್ಣವಾಗಿ ಬದಲಾವಣೆ ಮಾಡಲಾಗಿದೆ ಎಂದು ಪಶ್ಚಿಮ ರೈಲ್ವೆ (ಡಬ್ಲ್ಯುಆರ್) ಹೇಳಿಕೆಯಲ್ಲಿ ತಿಳಿಸಿದೆ. ಹೊಸದಾಗಿ ಪ್ರಾರಂಭಿಸಲಾದ ಮುಂಬೈ ಸೆಂಟ್ರಲ್-ಗಾಂಧಿನಗರ ವಂದೇ ಭಾರತ್ ರೈಲು ಗಾಂಧಿನಗರಕ್ಕೆ ತೆರಳುತ್ತಿದ್ದಾಗ ಅಹಮದಾಬಾದ್ ಬಳಿ ಗುರುವಾರ ಬೆಳಿಗ್ಗೆ 11.15 ರ ಸುಮಾರಿಗೆ ಎಮ್ಮೆಗಳ ಹಿಂಡಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ನಾಲ್ಕು ಎಮ್ಮೆಗಳು ಸಾವನ್ನಪ್ಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಹಮದಾಬಾದ್‌ನ ವತ್ವಾ ಮತ್ತು ಮಣಿನಗರ (Maninagr) ರೈಲು ನಿಲ್ದಾಣಗಳ ನಡುವೆ ವಂದೇ ಭಾರತ್ ರೈಲು ಮಾರ್ಗದಲ್ಲಿ ಬಂದ ಎಮ್ಮೆಗಳ ಅಪರಿಚಿತ ಮಾಲೀಕರ ವಿರುದ್ಧ ಆರ್‌ಪಿಎಫ್ ಎಫ್‌ಐಆರ್ ದಾಖಲಿಸಿದೆ ಎಂದು ಡಬ್ಲ್ಯುಆರ್‌ನ ಹಿರಿಯ ವಕ್ತಾರ (ಅಹಮದಾಬಾದ್ ವಿಭಾಗ) ಜಿತೇಂದ್ರ ಕುಮಾರ್ ಜಯಂತ್ ಹೇಳಿದ್ದಾರೆ. ರೈಲ್ವೆ ಕಾಯಿದೆ, 1989 ರ ಸೆಕ್ಷನ್ 147 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ, ಇದು ರೈಲ್ವೆಯ ಯಾವುದೇ ಭಾಗಕ್ಕೆ ಅನಧಿಕೃತ ಪ್ರವೇಶ ಮತ್ತು ಅದರ ಆಸ್ತಿಯನ್ನು ದುರುಪಯೋಗಪಡಿಸಿಕೊಳ್ಳುವ ಬಗ್ಗೆ ವ್ಯವಹರಿಸುತ್ತದೆ ಎಂದು ವತ್ವಾ ರೈಲ್ವೆ ನಿಲ್ದಾಣದ ಆರ್‌ಪಿಎಫ್ (RPF) ಇನ್ಸ್‌ಪೆಕ್ಟರ್  ಪ್ರದೀಪ್ ಶರ್ಮಾ ಹೇಳಿದ್ದಾರೆ.

'ನಾಲ್ಕು ಎಮ್ಮೆಗಳು ಬಲಿಯಾದ ಘಟನೆಗೆ ಸಂಬಂಧಿಸಿದಂತೆ ಗುರುವಾರ ಸಂಜೆ ಎಫ್‌ಐಆರ್ ದಾಖಲಾಗಿದೆ. ಇದುವರೆಗೆ ಎಮ್ಮೆಗಳ ಮಾಲೀಕರನ್ನು ಗುರುತಿಸಲು ರೈಲ್ವೆ ಪೊಲೀಸರಿಗೆ ಸಾಧ್ಯವಾಗಿಲ್ಲ ಮತ್ತು ಆ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿವೆ' ಎಂದು ಹೇಳಿದ್ದಾರೆ. ಅಹಮದಾಬಾದ್ (Ahmedabad) ನಗರದ ಹೊರವಲಯದಲ್ಲಿರುವ ವತ್ವಾ ರೈಲು ನಿಲ್ದಾಣದ ಬಳಿಯ ಪುನಿತ್‌ನಗರ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಶರ್ಮಾ ತಿಳಿಸಿದ್ದಾರೆ.

ಹಸುವಿಗೆ ಡಿಕ್ಕಿ ಹೊಡೆದು ನುಜ್ಜುಗುಜ್ಜಾದ ವಂದೇಭಾರತ್‌ ಎಕ್ಸ್‌ಪ್ರೆಸ್‌!

ರೈಲಿನ ಹಾನಿಗೊಳಗಾದ ಮೂಗಿನ ಕೋನ್ ಕವರ್( Nose Cone Cover) ಅನ್ನು ಎಫ್‌ಆರ್‌ಪಿ (ಫೈಬರ್-ರೀನ್‌ಫೋರ್ಸ್ಡ್ ಪ್ಲ್ಯಾಸ್ಟಿಕ್) ನಿಂದ ಮುಂಬೈನಲ್ಲಿ ಹೊಸದರೊಂದಿಗೆ ಬದಲಾಯಿಸಲಾಗಿದೆ ಎಂದು ಡಬ್ಲ್ಯುಆರ್ ಹೇಳಿಕೆಯಲ್ಲಿ ತಿಳಿಸಿದೆ. "ಜಾನುವಾರು ಡಿಕ್ಕಿ ಹೊಡೆದ ಘಟನೆಯಲ್ಲಿ ರೈಲಿನ ಡ್ರೈವರ್ ಕೋಚ್‌ನ  ನೋಸ್‌ ಕೋನ್ ಕವರ್ ಮತ್ತು ಅದರ ಮೌಂಟಿಂಗ್ ಬ್ರಾಕೆಟ್‌ಗಳು ಹಾನಿಗೊಳಗಾಯಿತು. ಆದಾಗ್ಯೂ, ರೈಲಿನ ಪ್ರಮುಖ ಭಾಗಗಳಿಗೆ ಯಾವುದೇ ಹಾನಿಯಾಗಿಲ್ಲ.  ಹಾನಿಗೊಳಗಾದ ನೋಸ್‌ ಕೋನ್ ಅನ್ನು ಮುಂಬೈ ಸೆಂಟ್ರಲ್‌ನಲ್ಲಿರುವ ಕೋಚ್ ಕೇರ್ ಸೆಂಟರ್‌ನಲ್ಲಿ(Coach Care Centre) ಬದಲಾಯಿಸಲಾಯಿತು' ಪಶ್ಚಿಮ ರೈಲ್ವೆಯ  ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಸುಮಿತ್ ಠಾಕೂರ್ ಹೇಳಿದರು.

 

Vande Bharat Express: ದೇಶದ ಮೂರನೇ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಗುರುವಾರದ ಘಟನೆಯ ನಂತರ, ರೈಲಿನ ಪ್ರಮುಖ ಭಾಗಗಳಿಗೆ ಯಾವುದೇ ಹಾನಿಯಾಗದ ಕಾರಣ ರೈಲು ನೋಸ್‌ ಮುಚ್ಚುವ ಫಲಕವಿಲ್ಲದೆ ಗಾಂಧಿನಗರ ಕ್ಯಾಪಿಟಲ್ ಸ್ಟೇಷನ್ ಮತ್ತು ಮುಂಬೈ ಸೆಂಟ್ರಲ್‌ಗೆ ದೂರವನ್ನು ಕ್ರಮಿಸಿತು ಎಂದು ಅವರು ಹೇಳಿದರು. "ನೋಸ್‌ ಕವರ್‌ಅನ್ನು ರೈಲಿನ ಕ್ರಿಯಾತ್ಮಕ ಭಾಗಗಳಿಗೆ ರವಾನಿಸದೆ ಪ್ರಭಾವವನ್ನು ಹೀರಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ಆದ್ದರಿಂದ ಇದನ್ನು ಸುಲಭವಾಗಿ ಬದಲಾವಣೆ ಮಾಡಬಹುದು ಎಂದು ಹೇಳಿದ್ದಾರೆ.
 

click me!