ಮಂಗಳೂರಿಗೆ ತೆರಳುತ್ತಿದ್ದ ವಂದೇ ಭಾರತ್‌ ರೈಲಿನ ಮೇಲೆ ಕಲ್ಲು ತೂರಿದ್ದ ಕೇರಳ ಯುವಕನ ಬಂಧನ!

Published : Mar 19, 2026, 03:23 PM IST
vande-bharat-stone-pelting

ಸಾರಾಂಶ

ಪ್ರೇಮ ವೈಫಲ್ಯದಿಂದ ಮನನೊಂದು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕಲ್ಲೆಸೆದ 19 ವರ್ಷದ ಯುವಕನನ್ನು ಆಲುವಾ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ತನ್ನ ಪ್ರೇಯಸಿ ಬಿಟ್ಟು ಹೋದ ಕೋಪದಲ್ಲಿ, ಆಕೆಯ ಮನೆಯ ಸಮೀಪ ಹಾದುಹೋಗುವ ರೈಲನ್ನು ಗುರಿಯಾಗಿಸಿಕೊಂಡು ಈ ಕೃತ್ಯ ಎಸಗಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ.

ಆಲುವಾ (ಮಾ.19): ಪ್ರೇಮ ವೈಫಲ್ಯದಿಂದ ಮನನೊಂದು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲೆಸೆದಿದ್ದ 19 ವರ್ಷದ ಯುವಕನನ್ನು ಆಲುವಾ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಅಂಕಮಾಲಿ ಪಾರಕ್ಕಡವು ನಿವಾಸಿ ಸುಜಿತ್ ಸುರೇಶ್ ಬಂಧಿತ ಆರೋಪಿ. ರೈಲಿನ ಹೊರಭಾಗದಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾದ ದೃಶ್ಯಗಳನ್ನು ಆಧರಿಸಿ ಪೊಲೀಸರು ಈತನನ್ನು ಪತ್ತೆಹಚ್ಚಿದ್ದಾರೆ.

ಈ ತಿಂಗಳ 7ರಂದು ಬೆಳಿಗ್ಗೆ 7:15ರ ಸುಮಾರಿಗೆ ನೆಡುಂಬಾಶೇರಿ ವಿಮಾನ ನಿಲ್ದಾಣದ ಸಮೀಪವಿರುವ ಅಕಪರಂಬು ರೈಲ್ವೆ ಗೇಟ್ ಬಳಿ ಈ ಘಟನೆ ನಡೆದಿತ್ತು. ತಿರುವನಂತಪುರದಿಂದ ಮಂಗಳೂರಿಗೆ ತೆರಳುತ್ತಿದ್ದ ವಂದೇ ಭಾರತ್ ರೈಲಿನ ಮೇಲೆ ಮೂರು ಬಾರಿ ಕಲ್ಲು ತೂರಲಾಗಿತ್ತು. ಕಲ್ಲೇಟಿನಿಂದಾಗಿ ರೈಲಿನ ಕಿಟಕಿಯ ಗಾಜುಗಳು ಪುಡಿಯಾಗಿದ್ದವು.

ಲವರ್‌ ಬಿಟ್ಟು ಹೋದ ನೋವಿಗೆ ರೈಲೇ ಟಾರ್ಗೆಟ್!

ಪೊಲೀಸ್ ವಿಚಾರಣೆಯ ವೇಳೆ ಸುಜಿತ್ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ. ತನ್ನ ಪ್ರೇಯಸಿಯ ಮನೆಯು ರೈಲ್ವೆ ಹಳಿಗಳ ಸಮೀಪದಲ್ಲೇ ಇದ್ದು, ಆಕೆ ತನ್ನನ್ನು ಬಿಟ್ಟು ಹೋಗಿದ್ದಾಳೆಂಬ ಕೋಪ ಮತ್ತು ಪ್ರೇಮ ವೈಫಲ್ಯದ ಬೇಸರದಿಂದ ರೈಲಿನ ಮೇಲೆ ಕಲ್ಲೆಸೆದಿರುವುದಾಗಿ ತಿಳಿಸಿದ್ದಾನೆ. ಹಳಿಗಳ ಸಮೀಪ ಪದೇ ಪದೇ ಸುಳಿದಾಡುತ್ತಿದ್ದ ಈತನನ್ನು ಸಿಸಿಟಿವಿ ದೃಶ್ಯಾವಳಿಗಳ ಮೂಲಕ ರೈಲ್ವೆ ಪೊಲೀಸರು ಗುರುತಿಸಿದ್ದಾರೆ.

ಜೈಲು ಪಾಲು ಗ್ಯಾರಂಟಿ

ರೈಲ್ವೆ ಪೊಲೀಸರು ಈತನ ವಿರುದ್ಧ ಭಾರತೀಯ ರೈಲ್ವೆ ಕಾಯ್ದೆ 153ರ ಅಡಿಯಲ್ಲಿ (ಜಾಮಿನು ರಹಿತ ಸೆಕ್ಷನ್) ಪ್ರಕರಣ ದಾಖಲಿಸಿದ್ದಾರೆ. ವಂದೇ ಭಾರತ್ ರೈಲಿನ ಸುತ್ತಲೂ ಆರು ಸಿಸಿಟಿವಿ ಕ್ಯಾಮೆರಾಗಳಿದ್ದು, ಅವು ದಿನದ 24 ಗಂಟೆಯೂ ದೃಶ್ಯಗಳನ್ನು ಚಿತ್ರೀಕರಿಸುತ್ತಿರುತ್ತವೆ. ಹೀಗಾಗಿ ರೈಲ್ವೆ ಆಸ್ತಿಗೆ ಹಾನಿ ಮಾಡುವವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ರೈಲ್ವೆ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ತಲೆಮೇಲೆ ಸೌದೆ ಹೊರೆ ಹೊತ್ತರೂ, ಬ್ರಿಟೀಷರು ನಾಚುವಂತಹ ಇಂಗ್ಲೀಷ್ ಮಾತು! ಮಹಿಳೆ ಆತ್ಮವಿಶ್ವಾಸಕ್ಕೆ ನೆಟ್ಟಿಗರು ಫಿದಾ!
ಎಲ್ಲಾ ತ್ಯಾಗ ಮಾಡಿ ಮಕ್ಕಳಿಗಾಗಿ ಮನೆ ಕಟ್ಟಿ ಜೀವನ ಹಾಳು ಮಾಡಬೇಡಿ, ಪೋಷಕರಿಗೆ ಉದ್ಯಮಿ ಸಲಹೆ