ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಮುಂದಾದ ಸಾವರ್ಕರ್ ಮೊಮ್ಮಗ!

By Suvarna NewsFirst Published Dec 15, 2019, 8:23 PM IST
Highlights

ವೀರ್ ಸಾವರ್ಕರ್ ಕುರಿತು ರಾಹುಲ್ ಗಾಂಧಿ ಅವಹೇಳನಕಾರಿ ಹೇಳಿಕೆ| ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಮುಂದಾದ ಸಾವರ್ಕರ್ ಮೊಮ್ಮಗ| ರಾಹುಲ್ ವಿರುದ್ಧ ಗುಡುಗಿದ ಸಾವರ್ಕರ್ ಮೊಮ್ಮಗ ರಂಜಿತ್ ಸಾವರ್ಕರ್| ‘ರಾಹುಲ್ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ಯೋಧರನ್ನು ಗೌರವಿಸುವುದನ್ನು ಕಲಿಯಬೇಕು’| ಶಿವಸೇನೆ ವಿರುದ್ಧ ಗುಡುಗಿದ ಸಾವರ್ಕರ್ ಮೊಮ್ಮಗ ರಂಜಿತ್ ಸಾವರ್ಕರ್| ಸಂಪುಟದಿಂದ ಕಾಂಗ್ರೆಸ್ ಸಚಿವರನ್ನು ಕೈಬಿಡುವಂತೆ ಉದ್ಧವ್ ಠಾಕ್ರೆಗೆ ಒತ್ತಾಯ|

ಮುಂಬೈ(ಡಿ.15): ವೀರ್ ಸಾವರ್ಕರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಸಾವರ್ಕರ್ ಮೊಮ್ಮಗ ರಂಜಿತ್ ಸಾವರ್ಕರ್ ಹೇಳಿದ್ದಾರೆ.

ಸಾವರ್ಕರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ರಾಹುಲ್, ದೇಶದ ಜನರ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ರಂಜಿತ್ ಸಾವರ್ಕರ್ ಗುಡುಗಿದ್ದಾರೆ.

‘ಕ್ಷಮೆ ಕೇಳಲು ನಾನು ರಾಹುಲ್ ಸಾವರ್ಕರ್ ಅಲ್ಲ, ರಾಹುಲ್ ಗಾಂಧಿ’!

ರಾಹುಲ್ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ಯೋಧರನ್ನು ಗೌರವಿಸುವುದನ್ನು ಕಲಿಯಬೇಕು ಎಂದು ರಂಜಿತ್ ಸಾವರ್ಕರ್ ಆಗ್ರಹಿಸಿದ್ದಾರೆ.

Ranjeet Savarkar, grandson of Veer Savarkar on Rahul Gandhi's 'My name is not Rahul Savarkar. I will never apologise for truth' remark: No one should say disrespectful words about him (Veer Savarkar). The government should take criminal action against Rahul Gandhi. pic.twitter.com/NLtGwMhw0y

— ANI (@ANI)

ಇದೇ ವೇಳೆ ಶಿವಸೇನೆ ವಿರುದ್ಧವೂ ಗುಡುಗಿರುವ ರಂಜಿತ್ ಸಾವರ್ಕರ್, ಅಧಿಕಾರಕ್ಕಾಗಿ ಉದ್ಧವ್ ಠಾಕ್ರೆ ಹಿಂದುತ್ವ ಸಿದ್ಧಾಂತಕ್ಕೆ ತೀಲಾಂಜಲಿ ಇಟ್ಟಿದ್ದಾರೆ ಎಂದು ಹರಿಹಾಯ್ದರು.

ವೀರ್ ಸಾವರ್ಕರ್ ಬಗ್ಗೆ ಉದ್ಧವ್ ಠಾಕ್ರೆಗೆ ಎಳ್ಳಷ್ಟೂ ಗೌರವ ಇದ್ದರೆ ಈ ಕೂಡಲೇ ಸಂಪುಟದಿಂದ ಕಾಂಗ್ರೆಸ್ ಸಚಿವರನ್ನು ವಜಾಗೊಳಿಸಬೇಕು ಎಂದು ರಂಜಿತ್ ಸಾವರ್ಕರ್ ಆಗ್ರಹಿಸಿದ್ದಾರೆ.

ಸಾವರ್ಕರ್ ಬಗ್ಗೆ ಮಾತಾಡಿದ್ರೆ ಹುಷಾರ್: ಕಾಂಗ್ರೆಸ್’ಗೆ ಎಚ್ಚರಿಸಿದ ಶಿವಸೇನೆ!

ಈ ಕುರಿತು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಜೊತೆ ಚರ್ಚಿಸಿ, ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ರಂಜಿತ್ ಸಾವರ್ಕರ್ ಹೇಳಿದ್ದಾರೆ.

click me!