ಪೆಟ್ರೋಲ್ ಬಂಕ್‌ನಿದ ಇಂಧನ ತುಂಬಿಸಿದ ಬಳಿಕ ಕೆಟ್ಟು ನಿಂತ 30ಕ್ಕೂ ಹೆಚ್ಚು ಕಾರು, ದೂರು ದಾಖಲು

Published : Sep 01, 2025, 04:14 PM ISTUpdated : Sep 01, 2025, 04:15 PM IST
petrol price

ಸಾರಾಂಶ

ಈ ಪೆಟ್ರೋಲ್ ಬಂಕ್‌ನಿಂದ ಇಂಧನ ತುಂಬಿಸಿಕೊಂಡವರ ವಾಹನಗಳು ಕೆಟ್ಟು ನಿಂತ ಘಟನೆ ನಡೆದಿದೆ. ಐಷಾರಾಮಿ ಕಾರು, ಬೈಕ್‌ಗಗಳು ಕೆಟ್ಟು ನಿಂತಿದೆ. ಭಾರೀ ಪ್ರತಿಭಟನೆ, ಆಕ್ರೋಶದ ಬೆನ್ನಲ್ಲೇ ಇದೀಗ ಪೆಟ್ರೋಲ್ ಬಂಕ್ ವಿರುದ್ಧ ದೂರು ದಾಖಲಾಗಿದೆ. 

ಘಾಜಿಯಾಬಾದ್ (ಸೆ.01) ಇದೇ ಪೆಟ್ರೋಲ್ ಬಂಕ್, ಇದೇ ಪೆಟ್ರೋಲ್ ಎಂದು ಮುತುವರ್ಜಿ ವಹಿಸುವವರ ಸಂಖ್ಯೆ ಕಡಿಮೆ. ಎಲ್ಲಿ ವಾಹನದ ಇಂಧನ ಖಾಲಿಯಾಗುತ್ತೋ, ಅದರ ಸಮೀಪದ ಪೆಟ್ರೋಲ್ ಬಂಕ್‍ಗಳಲ್ಲಿ ಇಂಧನ ತುಂಬಿಸಿಕೊಳ್ಳುವುದು ಬಹುತೇಕರ ವಾಡಿಕೆ. ಹೀಗೆ ವಾಹನಕ್ಕೆ ಇಂಧನ ತುಂಬಿ ಕೆಲವೇ ಗಂಟೆಗಳಲ್ಲಿ ವಾಹನ ಕೆಟ್ಟು ನಿಂತಿದಿದೆ. ಬರೋಬ್ಬರಿ 30ಕ್ಕೂ ಹೆಚ್ಚು ಕಾರುಗಳ ಮಾಲೀಕರಿಗೆ ಇದೇ ರೀತಿ ಅನುಭವಾಗಿದೆ. ಶೋ ರೂಂ ಸರ್ವೀಸ್ ಕೇಂದ್ರದಲ್ಲಿ ಪರಿಶೀಲಿಸಿದಾಗ ಇಂಧನ ಸಮಸ್ಯೆಯಿಂದ ಆಗಿದೆ ಅನ್ನೋ ಬಯಲಾಗಿದೆ. ಇದರ ಬೆನ್ನಲ್ಲೇ ಪೆಟ್ರೋಲ್ ಬಂಕ್‌ಗೆ ವಾಹನ ಮಾಲೀಕರು ಮುತ್ತಿಗೆ ಹಾಕಿದ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್‌ನಲ್ಲಿ ನಡೆದಿದೆ.

ಡೀಸೆಲ್ ಹಾಕಿದ ಮಾಲೀಕರಿಗೆ ತಲೆನೋವು

ಘಾಜಿಯಾಬಾದ್‌ನ ಬಜಾಜ್ ಹೆಚ್‌ಪಿ ಪೆಟ್ರೋಲ್ ಬಂಕ್‌ನಲ್ಲಿ ಉತ್ತಮ ಇಂಧನ ಮಾರಾಟ ಮಾಡಿಲ್ಲ ಅನ್ನೋ ಗಂಭೀರ ಆರೋಪ ಕೇಳಿಬಂದಿದೆ. ಡೀಸೆಲ್‌ಗೆ ಮಿಶ್ರಣ ಮಾಡಿ ಹಣ ಮಾಡುವ ಉದ್ದೇಶದಿಂದ ಕಳಪೆ ಗುಣಮಟ್ಟದ ಇಂಧನ ವಿತರಣೆ ಮಾಡಲಾಗಿದೆ. ಆಗಸ್ಟ್ 26 ರಿಂದ 29 ರವರೆಗೆ ಹಾಕಿದ ಇಂಧನದಿಂದ ಈ ಸಮಸ್ಯೆಯಾಗಿದೆ ಅನ್ನೋದು ಬಯಲಾಗಿದೆ. ಈ ಅವಧಿಯಲ್ಲಿ ಕಾರಿಗೆ ಡೀಸೆಲ್ ಹಾಕಿದ ಮಾಲೀಕರಿಗೆ ಸಮಸ್ಯೆಯಾಗಿದೆ.

ದುಬಾರಿ ಕಾರುಗಳಿಗೂ ಸಮಸ್ಯೆ

ಕಿಯಾ ಸೋನೆಟ್, ಕಿಯಾ ಸೆಲ್ಟೋಸ್, ಫಾರ್ಚುನರ್, ಸ್ಕಾರ್ಪಿಯೋ ಇನ್ನೋವಾ ಸೇರಿದಂತೆ ಹಲವು ಕಾರುಗಳ ಮಾಲೀಕರು ಇದೀಗ ಪೆಟ್ರೋಲ್ ಬಂಕ್ ವಿರುದ್ದ ಹೋರಾಟ ಮಾಡುತ್ತಿದ್ದಾರೆ. ಪೆಟ್ರೋಲ್ ಬಂಕ್‌ನಲ್ಲಿ ಇಂಧು ತುಂಬಿಸಿಕೊಂಡು 40 ಕಿಲೋಮೀಟರ್ ಪ್ರಯಾಣ ಮಾಡಿದ ಕಿಯೋ ಸೆಲ್ಟೋಸ್ ಮಾಲೀಕನ ಕಾರು ಬಳಿಕ ಸ್ಟಾರ್ಟ್ ಆಗಿಲ್ಲ. ಏನೇ ಮಾಡಿದರೂ ವಾಹನ ಸ್ಟಾರ್ಟ್ ಆಗಿಲ್ಲ. ಹೀಗಾಗಿ ಶೋ ರೂಂಗೆ ಕರೆ ಮಾಡಲಾಗಿದೆ. ಶೋ ರೂಂ ಸಿಬ್ಬಂದಿಗಳು ಕಾರು ಟೋ ಮಾಡಿದ್ದಾರೆ. ಶೋ ರೂಂ ಸರ್ವೀಸ್ ಸೆಂಟರ್‌ನಲ್ಲಿ ಪರಿಶೀಲಿಸಿದಾಗ ಕಳಪೆ ಗುಣಮಟ್ಟದ ಇಂಧನದಿಂದ ಕಾರಿನ ಎಂಜಿನ್‌ಗೆ ಸಮಸ್ಸೆಯಾಗಿದೆ ಅನ್ನೋದು ಬಯಲಾಗಿದೆ.ರಿಪೇರಿಗೆ ಬರೋಬ್ಬರಿ 3.5 ಲಕ್ಷ ರೂಪಾಯಿ ಪಾವತಿ ಮಾಡುವಂತೆ ಶೋ ರೂಂ ಸಿಬ್ಬಂಧಿಗಳು ಸೂಚಿಸಿದ್ದಾರೆ.

 ಪೆಟ್ರೋಲ್ ಬಂಕ್ ಶೌಚಾಲಯ ಸಾರ್ವಜನಿಕವಲ್ಲ, ಸರ್ಕಾರಕ್ಕೆ ಛಾಟಿ ಬೀಸಿದ ಹೈಕೋರ್ಟ್

ಉಡಾಫೆ ಉತ್ತರಕ್ಕೆ ರೊಚ್ಚಿಗೆದ್ದ ಮಾಲೀಕರು

ಇದೇ ರೀತಿ ಹಲವು ಕಾರು ಮಾಲೀಕರಿಗೆ ಸಮಸ್ಯೆಯಾಗಿದೆ. ಪೆಟ್ರೋಲ್ ಬಂಕ್‌ಗೆ ತೆರಳಿ ಮಾಲೀಕರು ವಿಚಾರಿಸಿದಾಗ ಉಡಾಫೆ ಉತ್ತರ ನೀಡಿದ್ದಾರೆ. ಕಾರು ಕೆಟ್ಟು ನಿಂತರೆ ತಾನು ಜವಾಬ್ದಾರನಲ್ಲ ಎಂದು ಪೆಟ್ರೋಲ್ ಬಂಕ್ ಮಾಲೀಕ ಉತ್ತರಿಸಿದ್ದಾರೆ. ರೊಚ್ಚಿಗೆದ್ದ ವಾಹನ ಮಾಲೀಕರು ಪೊಲೀಸರಿಗೆ ದೂರು ನೀಡಿದ್ದಾರೆ. ಇತ್ತ ಗ್ರಾಹಕರ ವೇದಿಕೆ ಮೂಲಕ ಕಾನೂನು ಹೋರಾಟಕ್ಕೆ ಮಂದಾಗಿದ್ದಾರೆ.

ಹೆಚ್ಚಿನ ವಾಹನಗಳಿಗೆ ಆಗಿದೆ ಸಮಸ್ಯೆ

30ಕ್ಕೂ ಹೆಚ್ಚು ಮಂದಿ ಮಾಲೀಕರು ದೂರು ನೀಡಿದ್ದಾರೆ. ಆದರೆ ಕಡಿಮೆ ಪ್ರಮಾಣದಲ್ಲಿ ಇಂಧನ ತುಂಬಿಸಿಕೊಂಡವರಿಗೂ ಸಮಸ್ಯೆಯಾಗಿದೆ. ಹಲವರು ಈ ಕುರಿತು ಪರಿಶೀಲನೆ ಮಾಡಿಲ್ಲ. ಆದರೆ ಸ್ಥಳೀಯರ ಪ್ರಕಾರ, ಹಲವರು ಈ ಪೆಟ್ರೋಲ್ ಬಂಕ್‌ನಿಂದ ಇಂಧನ ತುಂಬಿಸಿಕೊಳ್ಳುತ್ತಾರೆ. ಈ ಪೈಕಿ ಸ್ಥಳೀಯರು ಇದ್ದಾರೆ. ಅವರ ವಾಹನಗಳಿಗೂ ಸಮಸ್ಯೆಯಾಗಿದೆ ಎಂದು ಆರೋಪಿಸಿದ್ದಾರೆ. ಪೆಟ್ರೋಲ್ ಬಂಕ್ ವಿರುದ್ಧ ದೂರು ದಾಖಲಾಗಿದ್ದು. ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ಹಲವರು ಪೆಟ್ರೋಲ್ ಬಂಕ್ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ.  ಕಳಪೆ ಗುಣಮಟ್ಟದ ಇಂಧನ ನೀಡುತ್ತಿದ್ದಾರೆ. ಈ ಮೂಲಕ ಗ್ರಾಹಕರಿಗೆ ಮೋಸ ಮಾಡುತ್ತಿದ್ದಾರೆ ಎಂದು ಹಲವರು ಆರೋಪಿಸಿದ್ದಾರೆ. ಇತ್ತ ಘಾಜಿಯಾಬಾದ್ ಪೆಟ್ರೋಲ್ ಬಂಕ್‌ನಿಂದ ಇಂಧನ ತುಂಬಿಸಿಕೊಂಡ ವಾಹನ ಮಾಲೀಕರು ಕಂಗಾಲಾಗಿದ್ದಾರೆ. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರತನ್ ಟಾಟಾ ಮಲತಾಯಿ, ಲ್ಯಾಕ್‌ಮೆ ಫ್ಯಾಶನ್ ಸಂಸ್ಥಾಪಕಿ ಸೈಮನ್ ಟಾಟಾ ನಿಧನ
ಭಾರತದ 2 ಬಿಲಿಯನ್ ಡಾಲರ್ ಪರಮಾಣು ಜಲಾಂತರ್ಗಾಮಿ ಒಪ್ಪಂದ ಅಂತಿಮಗೊಳಿಸಿದ ಪುಟಿನ್ ಭೇಟಿ