Breaking: ಸಿಪಿಐಎಂ ನಾಯಕ ಸೀತಾರಾಮ್‌ ಯೆಚೂರಿ ನಿಧನ!

Published : Sep 12, 2024, 04:10 PM ISTUpdated : Sep 12, 2024, 04:24 PM IST
Breaking: ಸಿಪಿಐಎಂ ನಾಯಕ ಸೀತಾರಾಮ್‌ ಯೆಚೂರಿ ನಿಧನ!

ಸಾರಾಂಶ

ಹಿರಿಯ ಸಿಪಿಐ-ಮಾರ್ಕ್ಸಿಸ್ಟ್‌ ಪಕ್ಷದ ನಾಯಕ ಹಾಗೂ ಪ್ರಧಾನ ಕಾರ್ಯದರ್ಶಿ ಸೀತಾರಾಮ್‌ ಯೆಚೂರಿ (72) ಗುರುವಾರ ನಿಧನರಾಗಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಏಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಇತ್ತೀಚೆಗೆ ಆಕ್ಸಿಜನ್‌ ಸಪೋರ್ಟ್‌ನಲ್ಲಿ ಇರಿಸಲಾಗಿತ್ತು.

ನವದೆಹಲಿ (ಸೆ.12): ಹಿರಿಯ ಸಿಪಿಐ-ಮಾರ್ಕ್ಸಿಸ್ಟ್‌ ಪಕ್ಷದ ನಾಯಕ  ಹಾಗೂ ಪ್ರಧಾನ ಕಾರ್ಯದರ್ಶಿ ಸೀತಾರಾಮ್‌ ಯೆಚೂರಿ ಗುರುವಾರ ನಿಧನರಾಗಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು. ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಏಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಇತ್ತೀಚೆಗೆ ಆಕ್ಸಿಜನ್‌ ಸಪೋರ್ಟ್‌ನಲ್ಲಿ ಇರಿಸಲಾಗಿತ್ತು. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರಿಗೆ ಇತ್ತೀಚೆಗೆ ಆಕ್ಸಿಜನ್‌ ಸಪೋರ್ಟ್‌ ನೀಡಲಾಗಿತ್ತು ಎಂದು ಸಿಪಿಐ-ಎಂ ಪಕ್ಷ ತನ್ನ ಪ್ರಕಟಣೆಯಲ್ಲಿ ತಿಳಿಸಿತ್ತು.'ಅವರು ಆಕ್ಸಿಜನ್‌ ಸಪೋರ್ಟ್‌ನಲ್ಲಿದ್ದಾರೆ. ವೈದ್ಯರ ತಂಡವು ಅವರ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ, ಇದು ಈ ಸಮಯದಲ್ಲಿ ಗಂಭೀರವಾಗಿದೆ" ಎಂದು ಎರಡು ದಿನಗಳ ಹಿಂದೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿತ್ತು.  ತೀವ್ರ ಜ್ವರದಿಂದ ಬಳಲುತ್ತಿದ್ದ ಯೆಚೂರಿ ಅವರನ್ನು ಆಗಸ್ಟ್ 19 ರಂದು ಏಮ್ಸ್‌ನ ತುರ್ತು ವಿಭಾಗಕ್ಕೆ ದಾಖಲಿಸಲಾಗಿತ್ತು. ನ್ಯುಮೋನಿಯಾದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಿಪಿಐ(ಎಂ) ನಾಯಕ ಇತ್ತೀಚೆಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಎನ್ನಲಾಗಿದೆ.

1974ರಲ್ಲಿ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಸೇರಿದಾಗ ಯೆಚೂರಿಯವರ ರಾಜಕೀಯ ಪಯಣ ಆರಂಭವಾಯಿತು. ಆ ಬಳಿಕ ರಾಜಕೀಯದ ಮೆಟ್ಟಿಲುಗಳನ್ನು ಅತ್ಯಂತ ಶೀಘ್ರವಾಗಿ ಏರಿದ್ದರು. ಮೂರು ಬಾರಿ ಜೆಎನ್‌ಯು ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷರಾಗಿದ್ದ ಸೀತಾರಾಮ್‌ ಯೆಚೂರಿ ಬಳಿಕ, ಎಸ್‌ಎಫ್‌ಐನ ಅಖಿಲ ಭಾರತ ಅಧ್ಯಕ್ಷರಾಗಿದ್ದರು. 1984 ರಲ್ಲಿ, ಅವರು ಸಿಪಿಐ(ಎಂ) ಕೇಂದ್ರ ಸಮಿತಿಗೆ ಆಯ್ಕೆಯಾದ ಅವರು ಬಳಿಕ ಶಾಶ್ವತ ಆಹ್ವಾನಿತರೆನಿಸಿಕೊಂಡಿದ್ದರು. 1992 ರ ಹೊತ್ತಿಗೆ, ಅವರು ಪಾಲಿಟ್‌ಬ್ಯೂರೊದ ಸದಸ್ಯರಾಗಿದ್ದರು, ಅವರು ಮೂರು ದಶಕಗಳ ಕಾಲ ಈ ಸ್ಥಾನವನ್ನು ಹೊಂದಿದ್ದರು.

ಸಿಪಿಐ-ಎಂ ನಾಯಕ ಸೀತಾರಾಮ್‌ ಯಚೂರಿ ಸ್ಥಿತಿ ಗಂಭೀರ!

ಯೆಚೂರಿ ಅವರು 2005 ರಿಂದ 2017 ರವರೆಗೆ ಪಶ್ಚಿಮ ಬಂಗಾಳದಿಂದ ಸಂಸತ್ತಿನ ಸದಸ್ಯರಾಗಿ, ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದರು. ಅವರು ಪ್ರಕಾಶ್ ಕಾರಟ್ ಅವರ ನಂತರ 2015 ರಲ್ಲಿ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿಯಾದರು ಮತ್ತು 2018 ಮತ್ತು 2022 ರಲ್ಲಿ ಎರಡು ಬಾರಿ ಸ್ಥಾನಕ್ಕೆ ಮರು ಆಯ್ಕೆಯಾದರು.

BREAKING NEWS: ಸಿಪಿಐ(ಎಂ) ನಾಯಕ ಸೀತರಾಮ್ ಯೆಚೂರಿ ಏಮ್ಸ್ ಆಸ್ಪತ್ರೆಗೆ ದಾಖಲು!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮನೆ ಮುಂದೆ ದನ ಸೆಗಣಿ ಹಾಕಿದ್ದಕ್ಕೆ ಯುವಕನ ಕೊಲೆ
ಗಂಡ ಉಳಿಯಲಿಲ್ಲ, ಎಗ್ಸಾಂ ಬರೆಯಲಿಲ್ಲ, ಕ್ಯಾನ್ಸಲ್ ಆಗಿದ್ದು ಬರೀ ಫ್ಲೈಟ್ ಅಲ್ಲ ನೂರಾರು ಮಂದಿ ಕನಸು