
ನವದೆಹಲಿ[ನ.17]: ಸುಪ್ರೀಂಕೋರ್ಟ್ ಆದೇಶದಂತೆ ಮಸೀದಿ ನಿರ್ಮಾಣಕ್ಕೆ ಅಯೋಧ್ಯೆಯಲ್ಲಿ ನೀಡಲಾಗುವ 5 ಎಕರೆ ಜಮೀನು ರಾಮ ಜನ್ಮಭೂಮಿ ಭೂಮಿ ಅಯೋಧ್ಯೆಯಿಂದ 15-20 ಕಿ.ಮೀ ದೂರದಲ್ಲಿರಬೇಕು ಎಂದು ವಿಶ್ವ ಹಿಂದೂ ಪರಿಷತ್ ಒತ್ತಾಯಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಶ್ವ ಹಿಂದೂ ಪರಿಷತ್ ಪ್ರಾಂತೀಯ ವಕ್ತಾರ ಶರದ್ ವರ್ಮಾ, ‘ನಾವು ಈ ಹಿಂದಿನಿಂದಲೂ ಮೊಘಲ್ ದೊರೆ ಬಾಬರ್ ಹೆಸರಿನಲ್ಲಿ ಯಾವುದೇ ಮಸೀದಿ ನಿರ್ಮಾಣ ಮಾಡಬಾರದೆಂದು ಒತ್ತಾಯಿಸುತ್ತಾ ಬಂದಿದ್ದೇವೆ. ಅದೇ ರೀತಿ ಇದೀಗ ಅಯೋಧ್ಯೆಯಲ್ಲಿ ನಿರ್ಮಾಣವಾಗುವ ಮಸೀದಿಯು ಚೌಧಾ ಕೋಶಿ ಪರಿಕ್ರಮ ಪ್ರದೇಶದಿಂದ ಹೊರಗಿರಬೇಕು’ ಎಂದು ಹೇಳಿದ್ದಾರೆ.
ರಾಮ ಜನ್ಮಭೂಮಿ ಅಥವಾ ಕೋಶಿ ಪರಿಕ್ರಮ ಪ್ರದೇಶದಿಂದ 14 ಕಿ. ಮೀ ದೂರದಲ್ಲಿರುವ ಸದಾರ್ ತಾಲೂಕಿನ ಶನವಾ ಗ್ರಾಮದಲ್ಲಿ ಮಸೀದಿ ನಿರ್ಮಾಣಕ್ಕೆ ಸ್ಥಳ ಗುರುತಿಸಬಹುದು. ಅಲ್ಲದೆ, ಈ ಸ್ಥಳವು ಬಾಬರ್ನ ಕಮಾಂಡರ್ ಮೀರ್ ಬಕ್ ಸಮಾಧಿ ಸಹ ಇಲ್ಲೇ ಇದೆ ಎಂಬುದು ವಿಎಚ್ಪಿ ನಾಯಕರ ಪ್ರತಿಪಾದನೆ.
ಅಯೋಧ್ಯೆಯ ರಾಮ ಜನ್ಮಭೂಮಿ ಹಿಂದೂಗಳಿಗೆ ಸೇರಿದ್ದು ಎಂದು ತೀರ್ಪು ಪ್ರಕಟಿಸಿದ್ದ ಸುಪ್ರೀಂ ಕೋರ್ಟ್, ಮಸೀದಿ ಕಟ್ಟಲು ಅಯೋಧ್ಯೆಯಲ್ಲೇ ಮುಸ್ಲಿಮರಿಗೆ ಪ್ರತ್ಯೇಕ 5 ಎಕ್ರೆ ಜಮೀನು ನೀಡಬೇಕು ಎಂದು ಹೇಳಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ