
ನವದೆಹಲಿ(ಅ. 23) ರಿಪಬ್ಲಿಕ್ ಟಿವಿ ಅರ್ನಾಬ್ ಗೋಸ್ವಾಮಿಗೆ ಮಹತ್ವದ ಜಯ ನ್ಯಾಯಾಲಯದಲ್ಲಿ ಸಿಕ್ಕಿದೆ. ಟೈಮ್ಸ್ ನೌ ತೊರೆದು ರಿಪಬ್ಲಿಕ್ ಟಿವಿ ಆರಂಭಿಸಿರುವ ಪತ್ರಕರ್ತ ಅರ್ನಬ್ ಗೋಸ್ವಾಮಿ 'ನೇಷನ್ ವಾಂಟ್ಸ್ ಟು ನೌ' ಟ್ಯಾಗ್ ಲೈನ್ ಬಳಕೆ ಮಾಡಬಹುದು ಎಂದು ದೆಹಲಿ ಹೈಕೋರ್ಟ್ ತೀರ್ಪು ನೀಡಿದೆ.
ಟೈಮ್ಸ್ ನೌ ಸಂಸ್ಥೆಯ ಬೆನೆಟ್ ಕೋಲ್ಮನ್ ಮತ್ತು ಕಂಪನಿ ಸಲ್ಲಿಕೆ ಮಾಡಿದ್ದ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಜಯಂತ್ ನಾಥ್ ನೇತೃತ್ವದ ಪೀಠ, ಅರ್ನಬ್ ಗೋಸ್ವಾಮಿ ಅವರು ನೇಷನ್ ವಾಂಟ್ಸ್ ಟು ನೋ' ಟ್ಯಾಗ್ ಲೈನ್ ನಿರೂಪಣೆ ವೇಳೆ ಬಳಕೆ ಮಾಡಿಕೊಳ್ಳಬಹುದು ದಂದಿದೆ.
ಟಿಆರ್ಪಿ ವಾರ್; ಮುಂಬೈ ಪೊಲೀಸರ ವಿರುದ್ಧ ಅರ್ನಾಬ್ ಕೆಂಡ
ಅರ್ನಬ್ ಗೋಸ್ವಾಮಿ ಅವರು ‘ಟೈಮ್ಸ್ ನೌ' ಸುದ್ದಿವಾಹಿನಿಯ ಮುಖ್ಯ ಸಂಪಾದಕರಾಗಿದ್ದಾಗ ‘ನೇಶನ್ ವಾಂಟ್ಸ್ ಟು ನೋ' (ದೇಶ ಕೇಳಬಯಸುತ್ತದೆ..) ಎಂದು ಚರ್ಚೆಯ ಸಂದರ್ಭಗಳಲ್ಲಿ ಹೇಳುವುದು ಜನಪ್ರಿಯವಾಗಿತ್ತು. ‘ಆದರೆ ಈಗ ಕೃತಿಸ್ವಾಮ್ಯ ಕಾನೂನಿನಡಿ ಈ ವಾಕ್ಯ ಬಳಸದಂತೆ ಮಾಧ್ಯಮ ಸಂಸ್ಥೆಯೊಂದು ತಮಗೆ ಲೀಗಲ್ ನೋಟಿಸ್ ಜಾರಿ ಮಾಡಿದೆ' ಎಂದು ಖುದ್ದು ಅರ್ನಬ್ ಹೇಳಿದ್ದರು.
ಸೋಶಿಯಲ್ ಮೀಡಿಯಾದಲ್ಲಿಯೂ ಸಹ 'ನೇಷನ್ ವಾಂಟ್ಸ್ ಟು ನೋ' ಪದ ಸಾಕಷ್ಟು ಜನಪ್ರಿಯತೆ ಉಳಿಸಿಕೊಂಡಿದೆ. ಅರ್ನಾಬ್ ತಮ್ಮ ನಿರೂಪಣೆ ವೇಳೆ ಇದನ್ನು ಬಳಸಿಕೊಳ್ಳುತ್ತಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ