ದುಬೆ ಎನ್‌ಕೌಂಟರ್ ಆಯ್ತು, ಆತನ ರಕ್ಷಿಸಿದವರ ಕಥೆ ಏನು: ಪ್ರಿಯಾಂಕ ಪ್ರಶ್ನೆ

Suvarna News   | Asianet News
Published : Jul 10, 2020, 03:44 PM IST
ದುಬೆ ಎನ್‌ಕೌಂಟರ್ ಆಯ್ತು, ಆತನ ರಕ್ಷಿಸಿದವರ ಕಥೆ ಏನು: ಪ್ರಿಯಾಂಕ ಪ್ರಶ್ನೆ

ಸಾರಾಂಶ

ವಿಕಾಸ್‌ ದುಬೆಯನ್ನು ಎನ್‌ಕೌಂಟರ್ ಮಾಡಲಾಯ್ತು. ಹಾಗಾದರೆ ಆತನನ್ನು ರಕ್ಷಿಸಿದ ಪೊಲೀಸರ ಕಥೆ ಏನು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ಪ್ರಶ್ನಿಸಿದ್ದಾರೆ.

ದೆಹಲಿ(ಜು.10): ವಿಕಾಸ್‌ ದುಬೆಯನ್ನು ಎನ್‌ಕೌಂಟರ್ ಮಾಡಲಾಯ್ತು. ಹಾಗಾದರೆ ಆತನನ್ನು ರಕ್ಷಿಸಿದ ಪೊಲೀಸರ ಕಥೆ ಏನು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ಪ್ರಶ್ನಿಸಿದ್ದಾರೆ.

ಗ್ಯಾಂಗ್‌ಸ್ಟರ್ ರೌಡಿ ವಿಕಾಸ್‌ ದುಬೆ ಎನ್‌ಕೌಂಟರ್ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ವಕ್ತಾರ ರಣ್‌ದೀಪ್ ಸರ್ಜೇವಾಲ ಈ ಬಗ್ಗೆ ಪ್ರಶ್ನಿಸಿ, ಪೊಲೀಸರಿಗೆ ಶರಣಾದ ವಿಕಾಸ್ ದುಬೆ ತಪ್ಪಿಸಿಕೊಳ್ಳಲು ಯತ್ನಿಸಿದ್ದೇಕೆ ಎಂದಿದ್ದಾರೆ.

8 ಪೊಲೀಸರ ಹತ್ಯೆಗೈದಿದ್ದ ವಿಕಾಸ್ ದುಬೆ ಎನ್‌ಕೌಂಟರ್‌ಗೆ ಬಲಿ!

ಕ್ರಿಮಿನಲ್‌ಗಳು ಯಾವ ರಹಸ್ಯ ಕಾಪಾಡುತ್ತಿದ್ದಾರೆ..? ದುಬೆ ಎನ್‌ಕೌಂಟರ್ ಆಗಿರದಿದ್ದರೆ ಸರ್ಕಾರದ ಯಾವ ರಹಸ್ಯ ಬಯಲಾಗುತ್ತಿದ್ದು ಎಂದು ಪ್ರಶ್ನಿಸಿದ್ದಾರೆ. ವಿಕಾಸ್‌ ದುಬೆಯ ಕಳೆದ 10 ದಿನಗಳ ಫೋನ್‌ ಕಾಲ್‌ ಡೀಟೇಲ್ಸ್ ಬಿಡುಗಡೆ ಮಾಡುವಂತೆ ಕಾಂಗ್ರೆಸ್ ವಕ್ತಾರ ಒತ್ತಾಯಿಸಿದ್ದಾರೆ.

ವಿಕಾಸ್ ದುಬೆ ಎನ್‌ಕೌಂಟರ್ ಹಿಂದೆ ರಾಜಕೀಯ ಉದ್ದೇಶ..?

ಸಮಾಜವಾದಿ ಪಕ್ಷ ಮುಖಂಡ ಅಖಿಲೇಶ್ ಯಾದವ್ ಉತ್ತರ ಪ್ರದೇಶ ಸರ್ಕಾರದ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದು ಕಾರು ಉರುಳಿಉದ್ದಲ್ಲ, ಸರ್ಕಾರ ಉರುಳದೆ ಉಳಿಯಿತು ಎಂದು ವ್ಯಂಗ್ಯ ಮಾಡಿದ್ದಾರೆ. ಇಂದು ಬೆಳಗ್ಗೆ ದುಬೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ ಪೊಲೀಸರು ಎನ್‌ಕೌಂಟರ್ ಮಾಡಿದ್ದರು. ನಿನ್ನೆಯಷ್ಟೇ ವಿಕಾಸ್‌ ದುಬೆಯನ್ನು ಬಂಧಿಸಲಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮುಸ್ಲಿಂ ಲೀಗ್‌, ಜಿನ್ನಾಗೆ ಮಣಿದ ನೆಹರು, ವಂದೇ ಮಾತರಂ ಅನ್ನು ಹರಿದು ಹಾಕಿದ್ದು ಕಾಂಗ್ರೆಸ್‌: ಮೋದಿ ವಾಗ್ದಾಳಿ
ಮದುವೆಯಾದ್ರೆ ಸಿಗುತ್ತೆ 2.5 ಲಕ್ಷ ರೂಪಾಯಿ; ಶೇ.99 ಜನರಿಗೆ ಈ ವಿಷಯವೇ ಗೊತ್ತಿಲ್ಲ