ವಿಕ್ರಮ-ಬೇತಾಳ ಖ್ಯಾತಿಯ ಕಾರ್ಟೂನಿಸ್ಟ್‌ ಶಿವಶಂಕರ್‌ ನಿಧನ!

Published : Sep 30, 2020, 08:16 AM ISTUpdated : Sep 30, 2020, 10:57 AM IST
ವಿಕ್ರಮ-ಬೇತಾಳ ಖ್ಯಾತಿಯ ಕಾರ್ಟೂನಿಸ್ಟ್‌ ಶಿವಶಂಕರ್‌ ನಿಧನ!

ಸಾರಾಂಶ

ಮಕ್ಕಳ ಕತೆ ಪುಸ್ತಕಗಳಲ್ಲಿ ಪ್ರಸಿದ್ಧ ಕಥಾ ಪಾತ್ರಗಳಾಗಿದ್ದ ವಿಕ್ರಮ -ಬೇತಾಳ| ವಿಕ್ರಮ-ಬೇತಾಳ ಖ್ಯಾತಿಯ ಕಾರ್ಟೂನಿಸ್ಟ್‌ ಶಿವಶಂಕರ್‌ ನಿಧನ

ಚೆನ್ನೈ(ಸೆ.30): ಮಕ್ಕಳ ಕತೆ ಪುಸ್ತಕಗಳಲ್ಲಿ ಪ್ರಸಿದ್ಧ ಕಥಾ ಪಾತ್ರಗಳಾಗಿದ್ದ ವಿಕ್ರಮ -ಬೇತಾಳರ ವ್ಯಂಗ್ಯಚಿತ್ರ ಸೃಷ್ಠಿಸಿದ್ದ ಖ್ಯಾತ ಕಲಾವಿದ ಕೆ.ಸಿ ಶಿವಶಂಕರ್‌ ಅವರು ಮಂಗಳವಾರ ಚೆನ್ನೈನಲ್ಲಿ ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರಿಗೆ 97 ವರ್ಷ ವಯಸ್ಸಾಗಿತ್ತು. ಶಂಕರ್‌ ಎಂದೇ ಖ್ಯಾತಿ ಪಡೆದಿದ್ದ ಅವರು, 12 ಭಾಷೆಗಳಲ್ಲಿ ಪ್ರಕಟವಾಗುತ್ತಿದ್ದ ಸುಪ್ರಸಿದ್ಧ ಚಂದಮಾಮ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದರು.

ಶ್ರೀರಾಮನನ್ನು ಮನೆ ಮನೆಗೆ ತಲುಪಿಸಿದ ನಟರು ಇವರು!

1960ರ ದಶಕದಲ್ಲಿ ಮಕ್ಕಳಲ್ಲಿ ಭಾರೀ ಹಾಸುಹೊಕ್ಕಾಗಿದ್ದ ವಿಕ್ರಮ ಬೇತಾಳರ ಕತೆಗೆ ವ್ಯಂಗ್ಯ ಚಿತ್ರ ರಚಿಸಿ ಖ್ಯಾತಿ ಪಡೆದಿದ್ದರು. ವಿಕ್ರಮ ಕೈಯಲ್ಲಿ ಖಡ್ಗ ಹಿಡಿದುಕೊಂಡು ಬೇತಾಳನ ಶವವನ್ನು ಹೆಗಲಲ್ಲಿ ಹೊತ್ತುಕೊಂಡು ಹೋಗುವ ಚಿತ್ರ ಮೆಚ್ಚುಗೆ ಪಡೆದಿತ್ತು. ಚಂದಮಾಮ ಪತ್ರಿಕೆಯಲ್ಲಿ 60 ವರ್ಷಗಳ ಕಾಲ ಕೆಲಸ ಮಾಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅಯೋಧ್ಯೆಯ ರಾಮಲಲ್ಲಾ ಪ್ರತ್ಯಕ್ಷನಾಗಿ ಆಶೀರ್ವದಿಸಿದರೆ ಹೇಗಿರತ್ತೆ? ರೋಮಾಂಚಕಾರಿ ವಿಡಿಯೋ ವೈರಲ್​
ಮೆಹೆಂದಿಯಾಗಿತ್ತು, ಆದರೆ ಮದುವೆಯಾಗಲ್ಲ: ಕೊನೆಗೂ Palash Muchhal ಜೊತೆಗಿನ ಸಂಬಂಧಕ್ಕೆ ತೆರೆ ಎಳೆದ Smriti Mandhana