ನಿಮ್ಮೂರಿಗೆ ವಿಕಾಸ ಬಂದಿದೆಯಾ?: ಪ್ರಶ್ನೆ ಕೇಳಿ ಸುಸ್ತಾದ ಪತ್ರಕರ್ತ!

Published : Oct 18, 2020, 08:30 AM IST
ನಿಮ್ಮೂರಿಗೆ ವಿಕಾಸ ಬಂದಿದೆಯಾ?: ಪ್ರಶ್ನೆ ಕೇಳಿ ಸುಸ್ತಾದ ಪತ್ರಕರ್ತ!

ಸಾರಾಂಶ

|ನಿಮ್ಮೂರಿಗೆ ವಿಕಾಸ ಬಂದಿದೆಯಾ?: ಪ್ರಶ್ನೆ ಕೇಳಿ ಸುಸ್ತಾದ ಪತ್ರಕರ್ತ!| ಬಿಹಾರದ ಗ್ರಾಮಸ್ಥರ ಉತ್ತರ ಈಗ ಭಾರೀ ವೈರಲ್‌

ಪಟನಾ(ಅ.18): ಚುನಾವಣೆ ವೇಳೆ ಜನರ ಅಭಿಪ್ರಾಯ ಪಡೆಯಲು ಪತ್ರಕರ್ತರು ಊರು ಊರು ಸುತ್ತುವುದು ಸಾಮಾನ್ಯ. ಬಿಹಾರ ವಿಧಾನಸಭಾ ಚುನಾವಣೆಯಲ್ಲೂ ಇದೇ ನಡೆಯುತ್ತಿದೆ. ಆದರೆ ಹೀಗೆ ಪ್ರಶ್ನೆ ಕೇಳಿದ ಪ್ರರ್ತಕರ್ತರೊಬ್ಬರಿಗೆ, ಮುಗ್ದ ಗ್ರಾಮಸ್ಥರೊಬ್ಬರು ನೀಡಿದ ಉತ್ತರ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗಿದೆ.

ಆಗಿದ್ದೇನು?: ಖಾಸಗಿ ಸುದ್ದಿ ವಾಹಿನಿಯ ವರದಿಗಾರರೊಬ್ಬರು ಲಖಿಸರಾಯ್‌ಗೆ ತೆರಳಿ ಅಲ್ಲಿನ ಗ್ರಾಮಸ್ಥರೊಬ್ಬರಿಗೆ, ನಿಮ್ಮೂರಿಗೆ ವಿಕಾಸ್‌ (ಅಭಿವೃದ್ಧಿ) ತಲುಪಿದೆಯಾ? ಎಂದು ಪ್ರಶ್ನಿಸಿದ್ದಾರೆ. ಪಾಪ ಆ ವೃದ್ಧ ಗ್ರಾಮಸ್ಥ ವಿಕಾಸ್‌ ಎನ್ನುವ ಪದವನ್ನು ಅಭಿವೃದ್ಧಿ ಎಂಬುದರ ಬದಲಾಗಿ ಯಾರದ್ದೋ ಹೆಸರಿರಬೇಕು ಅಂದುಕೊಂಡು ‘ವಿಕಾಸ್‌? ಇಲ್ಲ ನಾನು ಊರಲ್ಲಿ ಇರಲಿಲ್ಲ, ನನಗೆ ಆರೋಗ್ಯ ಸರಿ ಇರಲಿಲ್ಲ, ವೈದ್ಯರ ಬಳಿ ಹೋಗಿದ್ದೆ’ ಎಂದು ಮುಗ್ಧವಾಗಿ ಉತ್ತರಿಸಿದ್ದಾರೆ.

ರೈತನ ಈ ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ಟೀಕಾಕಾರರಿಗೆ ಭರ್ಜರಿ ಆಹಾರದ ವಸ್ತುವಾಗಿದೆ. ಆ ಊರಿಗೆ ವಿಕಾಸ್‌ ಬಲು ಅಪರೂಪಕ್ಕೆ ಬರುತ್ತಿರಬೇಕು. ಹಾಗಾಗಿ ಪಾಪ ಅವರಿಗಾದರೂ ಹೇಗೆ ಗೊತ್ತಾದೀತು! ಎಂದು ಸಿಎಂ ನಿತೀಶ್‌ ಕುಮಾರ್‌ ಸರ್ಕಾರವನ್ನು ವ್ಯಂಗ್ಯವಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಾರ್‌ನಲ್ಲಿ ಜೋಡಿ 'ಸರಸ' ಸೆರೆಹಿಡಿದ ಟೋಲ್‌ ಮ್ಯಾನೇಜರ್‌, ಸಿಸಿಟಿವಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌!
ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್