ಚಿಕಾಗೋ ಭಾಷಣ, ವಿನೋಬಾ ಭಾವೆ ಜನ್ಮದಿನ, ಚೇತನಳಿಗೆ ಮೋದಿ ನಮನ

Published : Sep 11, 2020, 05:28 PM ISTUpdated : Sep 11, 2020, 05:30 PM IST
ಚಿಕಾಗೋ ಭಾಷಣ, ವಿನೋಬಾ ಭಾವೆ ಜನ್ಮದಿನ, ಚೇತನಳಿಗೆ ಮೋದಿ ನಮನ

ಸಾರಾಂಶ

ಮಹಾನ್ ಚೇತನಗಳನ್ನು ನೆನೆದ ಪ್ರಧಾನಿ/ ಸ್ವಾಮಿ ವಿವೇಕಾನಂದರು ಮತ್ತು ಆಚಾರ್ಯ ವಿನೋಬಾ ಭಾವೆ ಸ್ಮರಣೆ/ ಸೆ. 11 ಎರಡು ಕಾರಣಕ್ಕೆ ಮಹತ್ವದ್ದು/ ಐತಿಹಾಸಿಕ ಚಿಕಾಗೋ ಭಾಷಣ

ನವದೆಹಲಿ(ಸೆ.11) ಪ್ರಧಾನಿ ನರೇಂದ್ರ  ಮೋದಿ ಸ್ವಾಮಿ ವಿವೇಕಾನಂದರು ಮತ್ತು ಆಚಾರ್ಯ ವಿನೋಬಾ ಭಾವೆ ಅವರ ಸ್ಮರಣೆ ಮಾಡಿದ್ದಾರೆ.

ಸೆ. 11  ಭಾರತದ ಪಾಲಿಗೆ ಎರಡು ಮಹತ್ವದ ಸಂಗತಿಗಳನ್ನು ಒಳಗೊಂಡಿದೆ. ವಿನೋಬಾ ಭಾವೆ ಅವರ ಜಯಂತಿ, ಸ್ವಾಮಿ ವಿವೇಕಾನಂದರು ಚಿಕಾಗೋದಲ್ಲಿ ಮಾಡಿದ ಐತಿಹಾಸಿಕ ಭಾಷಣದ ದಿನ. ಇಬ್ಬರು ಮಹಾನ್ ಚೇತನಗಳಿಂದ ಮಾನವ ಸಮುದಾಯ ಕಲಿಯಬೇಕಾದದ್ದು ಬಹಳ ಇದೆ ಎಂದು ಹೇಳಿದ್ದಾರೆ.

ವಿವೇಕಾನಂದರು ಯೂತ್ ಐಕಾನ್ ಆಗಿದ್ದು ಹೇಗೆ?

ಭೂದಾನ ಚಳವಳಿ ಮೂಲಕ ಎಲ್ಲರ ಮನಸ್ಸಿನಲ್ಲೂ ನೆಲೆ ನಿಂತ ಭಾವೆ ಒಂದು ಕಡೆಯಾದರೆ 1893ರಲ್ಲಿ ಐತಿಹಾಸಿಕ ಭಾಷಣ ಮಾಡಿದ್ದ ವಿವೇಕಾನಂದರು ಇನ್ನೊಂದು ಕಡೆ. 

ಮಹಾತ್ಮ ಗಾಂಧಿ  ಭಾವೆ ಬಗ್ಗೆ ಒಂದು ಮಾತು ಹೇಳಿದ್ದರು. ಯಾವ ಪದಗಳಿಂದ ನಿಮ್ಮನ್ನು ವರ್ಣನೆ ಮಾಡಬೇಕು ಎಂಬುದು ಗೊತ್ತಾಗುತ್ತಿಲ್ಲ. ನಿಮ್ಮ ಮೌಲ್ಯ ಮತ್ತು ಆದರ್ಶ ತುಲನೆ ಮಾಡುವಷ್ಟು ದೊಡ್ಡ ವ್ಯಕ್ತಿ ನಾನಲ್ಲ ಎಂದು ಮಾಹಾತ್ಮ ಹೇಳಿದ್ದರು ಎಂಬುದನ್ನು ಮೋದಿ ಉಲ್ಲೇಖಿಸಿದ್ದಾರೆ.

ಭಾರತದ ಸಂಸ್ಕೃತಿ, ಪರಂಪರೆ, ನೀತಿ-ತತ್ವಗಳನ್ನು ಜಗತ್ತಿಗೆ ಸಾರಿದ್ದು ಸ್ವಾಮಿ ವಿವೇಕಾನಂದರ ಭಾಷಣ. ಹಾಗಾಗಿ ಈ ದಿನ ಎಲ್ಲರಿಗೂ ಮಹತ್ವದ್ದಾಗಿ ನಿಲ್ಲುತ್ತದೆ ಎಂದು ಬಣ್ಣಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕೇವಲ 2 ನಿಮಿಷ ಮಗಳ ನೋಡಲು 11ಗಂಟೆಗೆ ಸ್ಟೇಶನ್‌ಗೆ ಬಂದ ತಂದೆ, ಭಾವುಕ ಕ್ಷಣದ ವಿಡಿಯೋ
ಬೀದಿಯಲ್ಲಿ ಬಿದ್ದಿದ್ದ ಕಲ್ಲಿಂದ ಹಣ ಮಾಡೋದು ಹೇಗೆ ಎಂದು ತೋರಿಸಿಕೊಟ್ಟ ಹುಡುಗ: ವೀಡಿಯೋ ಭಾರಿ ವೈರಲ್