ದುರ್ಗಾದೇವಿ ಶೋಭಾಯಾತ್ರೆ ಕಲ್ಲು ತೂರಾಟ, ಗುಂಡಿನ ದಾಳಿ: ಓರ್ವ ಸಾವು

Published : Oct 15, 2024, 10:03 AM ISTUpdated : Oct 15, 2024, 10:07 AM IST
ದುರ್ಗಾದೇವಿ ಶೋಭಾಯಾತ್ರೆ ಕಲ್ಲು ತೂರಾಟ, ಗುಂಡಿನ ದಾಳಿ: ಓರ್ವ ಸಾವು

ಸಾರಾಂಶ

ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ ದುರ್ಗಾಪೂಜಾ ಮೆರವಣಿಗೆ ವೇಳೆ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಹಿಂಸೆಯು ಒಬ್ಬನನ್ನು ಬಲಿಪಡೆದಿದೆ. ಬಳಿಕ ಉದ್ರಿಕ್ತರು ಅಂಗಡಿ ಮುಂಗಟ್ಟುಗಳಿಗೆ ಬೆಂಕಿ ಹಚ್ಚಿದ್ದಾರೆ.

ಬಹ್ರೈಚ್‌ (ಉ.ಪ್ರ.): ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ ದುರ್ಗಾಪೂಜಾ ಮೆರವಣಿಗೆ ವೇಳೆ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಹಿಂಸೆಯು ಒಬ್ಬನನ್ನು ಬಲಿಪಡೆದಿದೆ. ಬಳಿಕ ಉದ್ರಿಕ್ತರು ಅಂಗಡಿ ಮುಂಗಟ್ಟುಗಳಿಗೆ ಬೆಂಕಿ ಹಚ್ಚಿದ್ದಾರೆ. ಭಾನುವಾರ ದುರ್ಗಾ ವಿಗ್ರಹ ಮೆರವಣಿಗೆಯು ಮುಸ್ಲಿಂ ಪ್ರಾಬಲ್ಯದ ಪ್ರದೇಶ ಮಹಾರಾಜ್‌ ಗಂಜ್‌ನಲ್ಲಿ ಸಾಗುತ್ತಿದ್ದಾಗ ಹಿಂಸಾಚಾರ ಭುಗಿಲೆದ್ದಿತು. ವರದಿಯ ಪ್ರಕಾರ, ಎರಡು ಗುಂಪುಗಳ ನಡುವೆ ವಾಗ್ವಾದವು ಉಲ್ಬಣಗೊಂಡಿತು. ನಂತರ ಕಲ್ಲು ತೂರಾಟ ಮತ್ತು ಗುಂಡುಗಳನ್ನು ಹಾರಿಸಲಾಯಿತು. ಈ ವೇಳೆ 22 ವರ್ಷದ ರಾಮ್ ಗೋಪಾಲ್ ಮಿಶ್ರಾ ಎಂಬಾತ ಬಲಿಯಾಗಿದ್ದಾನೆ.

ಇದಕ್ಕೆ ಪ್ರತೀಕಾರವಾಗಿ ಸೋಮವಾರ ಪ್ರತಿಭಟನಾಕಾರರು ಸುತ್ತಮುತ್ತಲಿನ ಹಲವಾರು ಅಂಗಡಿಗಳು ಮತ್ತು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಒಂದು ಆಸ್ಪತ್ರೆಗೂ ಬೆಂಕಿ ಹಚ್ಚಲಾಗಿದೆ. ಉದ್ರಿಕ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮಾಡಿ ಅಶ್ರುವಾಯು ಸಿಡಿಸಿದ್ದಾರೆ. ಘಟನೆ ಸಂಬಂಧ 30 ಜನರನ್ನು ಬಂಧಿಸಲಾಗಿದೆ ಮತ್ತು ಎಫ್‌ಐಆರ್ ದಾಖಲಿಸಲಾಗಿದೆ. ಪ್ರಮುಖ ಆರೋಪಿಯ ಪತ್ತೆಗೆ ಶೋಧ ಕಾರ್ಯ ನಡೆದಿದೆ.

ಇಂಟರ್ನೆಟ್ ಸ್ಥಗಿತ:
ಪ್ರದೇಶದಲ್ಲಿ ಯಾವುದೇ ಅಹಿತಕರ ಘಟನೆಗಳನ್ನು ತಪ್ಪಿಸಲು ತಪ್ಪು ಮಾಹಿತಿಯನ್ನು ನಿಯಂತ್ರಿಸಲು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಹಿಂದೂ ಹಬ್ಬಗಳಲ್ಲಿ ಕಲ್ಲು ತೂರಾಟಕ್ಕೆ ಮಹಾನ್ ನಾಯಕ ರಾಹುಲ್ ಗಾಂಧಿ ಯಾಕೆ ಮೌನ?: ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಕಿಡಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು
ತಿರುಪತಿ ತಿಮ್ಮಪ್ಪನಿಗೆ ಅಂಗವಸ್ತ್ರದ ಮೋಸ, ಪ್ಲಾಸ್ಟಿಕ್‌ ಸಿಲ್ಕ್‌ ಕೊಟ್ಟು 55 ಕೋಟಿ ಯಾಮಾರಿಸಿದ ಕಂಪನಿ!