
ಪುಣೆ(ಜೂ.29): ಪುಣೆಯ ಶಿವ ಛತ್ರಪತಿ ಕ್ರೀಡಾ ಸಂಕೀರ್ಣಕ್ಕೆ ಭೇಟಿ ನೀಡಿದ್ದ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ಇತರ ಅಧಿಕಾರಿಗಳು ರೇಸ್ ಟ್ರ್ಯಾಕ್ ಮೇಲೆಯೇ ಕಾರನ್ನು ಪಾರ್ಕ್ ಮಾಡಿದ್ದು ವಿವಾದಕ್ಕೆ ಕಾರಣವಾಗಿದೆ.
ಶನಿವಾರ ಶರದ್ ಪವಾರ್ ಮಹಾರಾಷ್ಟ್ರದ ಕ್ರೀಡಾ ಸಚಿವ ಸುನಿಲ ಕೇದಾರ್ ಅವರ ಜೊತೆಗೂಡಿ ಶಿವ ಛತ್ರಪತಿ ಕ್ರೀಡಾಂಗಣದ ಕಾಮಗಾರಿಗಳ ಪರಿಶೀಲನೆಗೆ ಆಗಮಿಸಿದ್ದರು. ಆದರೆ, ಕಾರನ್ನು ಹೊರಗೆ ನಿಲ್ಲಿಸುವ ಬದಲು ನೇರವಾಗಿ ಕ್ರೀಡಾಗಣದ ಒಳಗೆ ಒಯ್ಯಲಾಗಿತ್ತು. ಇದರಿಂದ ರೇಸ್ ಟ್ರ್ಯಾಕ್ಗೆ ಹಾನಿ ಆಗಿದೆ ಎಂದು ಆರೋಪಿಸಲಾಗಿದೆ.
ಪವಾರ್ ನಡೆಗೆ ಆಕ್ಷೇಪ ವ್ಯಕ್ತಪಡಿಸಿರುವ ಕೇಂದ್ರ ಕ್ರಿಡಾ ಸಚಿವ ಕಿರಣ್ ರಿಜಿಜು, ದೇಶದಲ್ಲಿ ಕ್ರೀಡೆ ಮತ್ತು ಕ್ರೀಡೆಗೆ ಅಗೌರವ ತೋರುತ್ತಿರುವುದು ವೈಯಕ್ತಿಕವಾಗಿ ತಮಗೆ ನೋವುಂಟು ಮಾಡಿದೆ ಎಂದಿದ್ದಾರೆ. ಘಟನೆ ಬಗ್ಗೆ ಕ್ಷಮೆ ಯಾಚಿಸಿರುವ ಕ್ರೀಡಾಂಗಣದ ಅಧಿಕಾರಿಗಳು, ಪವಾರ್ ಅವರು ನಡೆದುಕೊಂಡು ಬರಲು ಸಾಧ್ಯವಾದ ಕಾರಣ ಕಾರನ್ನು ಒಳಗೆ ತರಲು ಅನುಮತಿ ಕೋರಿದ್ದರು ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ