ರಾಜ್ಯದಲ್ಲಿ ಏಪ್ರಿಲಿಂದ ಎಸ್‌ಐಆರ್ ಆರಂಭ? ಮತಪಟ್ಟಿ ವಿಶೇಷ ಪರಿಷ್ಕರಣೆಗೆ ಆಯೋಗ ಸಜ್ಜು

Kannadaprabha News   | Kannada Prabha
Published : Feb 20, 2026, 06:51 AM IST
Voter List

ಸಾರಾಂಶ

ಬಿಹಾರ ಮತ್ತು ಪಶ್ಚಿಮ ಬಂಗಾಳದ ನಂತರ, ಕರ್ನಾಟಕದಲ್ಲೂ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಏಪ್ರಿಲ್‌ನಲ್ಲಿ ಆರಂಭವಾಗುವ ಸಾಧ್ಯತೆಯಿದೆ. ಕೇಂದ್ರ ಚುನಾವಣಾ ಆಯೋಗದ ಸೂಚನೆಯಂತೆ, 2025ರ ಮತದಾರರ ಪಟ್ಟಿಯನ್ನು 2002ರ ಪಟ್ಟಿಯೊಂದಿಗೆ ಮ್ಯಾಪಿಂಗ್ ಮಾಡುವ ಕಾರ್ಯಗಳು ಅಂತಿಮ ಹಂತದಲ್ಲಿವೆ.

ಬೆಂಗಳೂರು: ಬಿಹಾರ, ಪಶ್ಚಿಮ ಬಂಗಾಳ ಬಳಿಕ ಇದೀಗ ಕರ್ನಾಟಕದಲ್ಲೂ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಮುಂದಿನ ಏಪ್ರಿಲ್‌ನಲ್ಲಿ ಪ್ರಾರಂಭವಾಗುವ ಸಾಧ್ಯತೆಯಿದೆ.

ಕೇಂದ್ರ ಚುನಾವಣಾ ಆಯೋಗ ಈ ಹಿಂದೆಯೇ ಕರ್ನಾಟಕ ಸೇರಿ ಕೆಲ ರಾಜ್ಯಗಳಿಗೆ ಎಸ್‌ಐಆರ್‌ ಸಂಬಂಧ ಪೂರ್ವ ಸಿದ್ಧತೆಗಳನ್ನು ನಡೆಸುವಂತೆ ಸೂಚಿಸಿತ್ತು. ಇದೀಗ ಆ ಪೂರ್ವ ಸಿದ್ಧತೆಗಳನ್ನು ಆದಷ್ಟು ಬೇಗ ಮುಗಿಸುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ಸೂಚಿಸಿದೆ. ಕೇಂದ್ರ ಚುನಾವಣಾ ಆಯೋಗದ ಸೂಚನೆ ಪ್ರಕಾರ ಮುಂದಿನ ಏಪ್ರಿಲ್‌ನಲ್ಲಿ ಈ ಎಸ್‌ಐಆರ್‌ ಪ್ರಕ್ರಿಯೆ ಆರಂಭವಾಗುವ ಸಾಧ್ಯತೆಯಿದೆ.

ಪೂರ್ವಭಾವಿ ಕೆಲಸ ಬಹುತೇಕ ಪೂರ್ಣ:

ಈಗಾಗಲೇ ರಾಜ್ಯದಲ್ಲಿ ಎಸ್‌ಐಆರ್‌ ಪೂರ್ವಭಾವಿ ಕೆಲಸಗಳು ಚುರುಕುಗೊಂಡಿದ್ದು ಬಹುತೇಕ ಕೊನೆಯ ಹಂತಕ್ಕೆ ತಲುಪಿವೆ. ಆಯೋಗದ ನಿರ್ದೇಶನದಂತೆ 2025ರ ಮತದಾರರ ಪಟ್ಟಿಯಲ್ಲಿರುವ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್‌ ಮಾಡುವ ಪೂರ್ವಭಾವಿ ಕಾರ್ಯ ಪ್ರಗತಿಯಲ್ಲಿದೆ. ಜನವರಿ ಅಂತ್ಯದವರೆಗೆ ಶೇ.62.59ರಷ್ಟು ಮತದಾರರ ಮ್ಯಾಪಿಂಗ್‌ ಆಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ ಕೊನೆಯದಾಗಿ 2002ರಲ್ಲಿ ಎಸ್‌ಐಆರ್ ನಡೆದಿತ್ತು

2002ರಲ್ಲಿ ರಾಜ್ಯದಲ್ಲಿ ಒಟ್ಟು 3.55 ಕೋಟಿ ಮತದಾರರು ಇದ್ದರು. 2025 ಮತದಾರರ ಪಟ್ಟಿಯಲ್ಲಿ 5.57 ಕೋಟಿ ಮತದಾರರು ಇದ್ದಾರೆ. ಈ ಪೈಕಿ ಜನವರಿ ಅಂತ್ಯದವರೆಗೆ 3.48 ಕೋಟಿ ಮತದಾರರ ಮ್ಯಾಪಿಂಗ್‌ ಆಗಿದೆ. ಉಳಿದ ಮತದಾರರ ಮ್ಯಾಪಿಂಗ್‌ ಪೂರ್ಣಗೊಳಿಸುವ ಕಾರ್ಯ ಚುರುಕುಗೊಂಡಿದೆ. ಎಲ್ಲವೂ ಅಂದುಕೊಂಡಂತೆ ನಡೆದೆ ಮುಂದಿನ ಏಪ್ರಿಲ್‌ನಲ್ಲಿ ರಾಜ್ಯದಲ್ಲಿ ಎಸ್‌ಐಆರ್‌ ಪ್ರಾರಂಭವಾಗಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಉಚಿತ ಕೊಡುಗೆ ಅಭಿವೃದ್ದಿಗೆ ಮಾರಕ, ಎಷ್ಟು ದಿನ ಹೀಗೆ ಘೋಷಿಸುತ್ತಾ ಇರ್ತಿರಾ? ಸುಪ್ರೀಂ ಕೋರ್ಟ್ ಚಾಟಿ!
ಬಿಲ್ಲಿಂಗ್‌ ಸಾಫ್ಟ್‌ವೇರ್‌ ಬಳಸಿ ರೆಸ್ಟೋರೆಂಟ್‌ಗಳಲ್ಲಿ₹70,000 ಕೋಟಿ ತೆರಿಗೆ ವಂಚನೆ: ಐಟಿಗೇ ಶಾಕ್‌! ವಂಚನೆಯಲ್ಲಿ ಕರ್ನಾಟಕ ನಂ.1!