ರಾಜ್ಯಸಭೆ ಗದ್ದಲ: ಶೀಘ್ರ ಸಂಸದರ ವಿರುದ್ಧ ಕ್ರಮ ?

Published : Aug 14, 2021, 03:47 PM ISTUpdated : Aug 14, 2021, 03:52 PM IST
ರಾಜ್ಯಸಭೆ ಗದ್ದಲ: ಶೀಘ್ರ ಸಂಸದರ ವಿರುದ್ಧ ಕ್ರಮ ?

ಸಾರಾಂಶ

 ಮೇಲ್ಮನೆಯಲ್ಲಿ ಕೋಲಾಹಲ: ‘ಗಲಾಟೆ ಸಂಸದ’ರ ಶೀಘ್ರ ಕ್ರಮ?  ಸಂಸದರ ವಿರುದ್ಧ ಕ್ರಮಕ್ಕೆ ಮುಂದಾದ ರಾಜ್ಯಸಭಾ ಮುಖ್ಯಸ್ಥರು ಮತ್ತು ಲೋಕಸಭಾ ಸಭಾಪತಿ

ನವದೆಹಲಿ(ಆ.14): ಗುರುವಾರ ರಾಜ್ಯಸಭೆಯ ಮುಂಗಾರು ಅಧಿವೇಶನದಲ್ಲಿ ಭದ್ರತಾ ಸಿಬ್ಬಂದಿ ವಿರುದ್ಧ ಸಂಘರ್ಷಕ್ಕಿಳಿದು ದುರ್ವರ್ತನೆ ತೋರಿದ ಸಂಸದರ ವಿರುದ್ಧ ಕ್ರಮಕ್ಕೆ ರಾಜ್ಯಸಭಾ ಮುಖ್ಯಸ್ಥರು ಮತ್ತು ಲೋಕಸಭಾ ಸಭಾಪತಿ ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು ಮತ್ತು ಲೋಕಸಭಾ ಸಭಾಪತಿ ಓಂ ಬಿರ್ಲಾ ಅಶಿಸ್ತು ತೋರಿದ ಸಂಸದರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅಭಿಪ್ರಾಯಪಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಅವು ತಿಳಿಸಿವೆ.

ರಾಜ್ಯಸಭೆಯಲ್ಲಿ ಏನಾಗಿತ್ತು?‘

ಸಂಸತ್ತಿನ ಮುಂಗಾರು ಅಧಿವೇಶನ ಸಂದರ್ಭದಲ್ಲಿ ವಿಮಾ ಖಾಸಗೀಕರಣ ಮಸೂದೆ ಅಂಗೀಕಾರದ ಬಳಿಕ ಪ್ರತಿಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿ ಬಾವಿಗಿಳಿದು ಗದ್ದಲ ಉಂಟುಮಾಡಿದ್ದವು. ಈ ವೇಳೆ ವಿಪಕ್ಷ ಸದಸ್ಯರು ಮತ್ತು ಮಾರ್ಷಲ್‌ಗಳ ನಡುವೆ ಘರ್ಷಣೆ ಉಂಟಾಯಿತು.

ವಿಪಕ್ಷಗಳ ಆಟಾಟೋಪ; ಕಣ್ಣೀರು ಹಾಕಿದ ರಾಜ್ಯಸಭೆ ಸಭಾಪತಿ ವೆಂಕಯ್ಯ ನಾಯ್ಡು

ಆದರೆ ಹೊರಗಿನವರನ್ನು ಕರೆಸಿ ಸ್ತ್ರೀ ಸದಸ್ಯರ ಮೇಲೆ ಹಲ್ಲೆ ಮಾಡಲಾಗಿದೆ ಎಂದು ವಿಪಕ್ಷಗಳು ಆರೋಪಿಸಿದವು. ಕೇಂದ್ರ ಈ ಆರೋಪ ನಿರಾಕರಿಸಿ ವಿಪಕ್ಷಗಳ ವಿರುದ್ಧವೇ ಕಿಡಿಕಾರಿತು. ಆದರೆ ಸಿಸಿಟೀವಿ ದೃಶ್ಯಾವಳಿಯಲ್ಲಿ ವಿಪಕ್ಷಗಳ ಮಹಿಳಾ ಸಂಸದರೇ ಮಾರ್ಷಲ್‌ಗಳ ಮೇಲೆ ಹಲ್ಲೆ ನಡೆಸಿರುವುದು ಮತ್ತು ಕೆಲ ಪುರುಷ ಸದಸ್ಯರು ಮೇಜಿನ ಮೇಲೆ ಹತ್ತಿ ಅಗೌರವ ತಂದಿರುವುದು ಸೆರೆಯಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?