ವಕ್ಫ್‌ ತಿದ್ದುಪಡಿ ಕಾಯ್ದೆಗೆ ದಾಖಲೆಯ 1.25 ಕೋಟಿ ಪ್ರತಿಕ್ರಿಯೆಗೆ ಬಿಜೆಪಿಯಿಂದ ಅನುಮಾನ

Published : Sep 26, 2024, 09:31 AM IST
ವಕ್ಫ್‌ ತಿದ್ದುಪಡಿ ಕಾಯ್ದೆಗೆ ದಾಖಲೆಯ 1.25 ಕೋಟಿ ಪ್ರತಿಕ್ರಿಯೆಗೆ ಬಿಜೆಪಿಯಿಂದ ಅನುಮಾನ

ಸಾರಾಂಶ

ವಕ್ಫ್‌ ತಿದ್ದುಪಡಿ ಕಾಯ್ದೆಗೆ ದಾಖಲೆಯ 1.25 ಕೋಟಿ ಪ್ರತಿಕ್ರಿಯೆಗಳು ಬಂದಿರುವುದು ಅನುಮಾನಗಳಿಗೆ ಕಾರಣವಾಗಿದ್ದು, ಚೀನಾ, ಪಾಕಿಸ್ತಾನ ಮತ್ತು ಇಸ್ಲಾಮಿಕ್ ಮೂಲಭೂತವಾದಿಗಳ ಕೈವಾಡದ ಶಂಕೆಯನ್ನು ಬಿಜೆಪಿ ಸಂಸದ ನಿಶಿಕಾಂತ್ ದುಬೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಕೇಂದ್ರ ಗೃಹ ಸಚಿವಾಲಯ ತನಿಖೆ ನಡೆಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ನವದೆಹಲಿ: ವಕ್ಫ್‌ ತಿದ್ದುಪಡಿ ಕಾಯ್ದೆಗೆ ದಾಖಲೆಯ 1.25 ಕೋಟಿ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದರ ಹಿಂದೆ ಚೀನಾ, ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಮತ್ತು ಇಸ್ಲಾಮಿಕ್‌ ಮೂಲಭೂತವಾದಿಗಳ ಕೈವಾಡದ ಶಂಕೆ ಇದೆ. ಹೀಗಾಗಿ ಈ ಕುರಿತು ಕೇಂದ್ರ ಗೃಹ ಸಚಿವಾಲಯ ತನಿಖೆ ನಡೆಸಬೇಕು ಎಂದು ವಕ್ಪ್‌ ತಿದ್ದುಪಡಿ ಕಾಯ್ದೆ ಪರಿಶೀಲನೆಗೆ ರಚನೆಯಾಗಿರುವ ಜಂಟಿ ಸಂಸದೀಯ ಸಮಿತಿ ಸದಸ್ಯ, ಬಿಜೆಪಿ ನಿಶಿಕಾಂತ್‌ ದುಬೆ ಒತ್ತಾಯ ಮಾಡಿದ್ದಾರೆ.

ಈ ನಡುವೆ ದುಬೆ ಕಳವಳವನ್ನು ಕಟುವಾಗಿ ಟೀಕಿಸಿರುವ ಕಾಂಗ್ರೆಸ್‌, ಇದು ಆಡಳಿತಾರೂಢ ಪಕ್ಷ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಹೊಂದಿಲ್ಲ ಎಂಬುದನ್ನು ತೋರಿಸುತ್ತದೆ ಎಂದಿದೆ.

ತನಿಖೆಗೆ ಆಗ್ರಹ:

ಜೆಪಿಸಿಗೆ ಸಲ್ಲಿಕೆಯಾಗಿರುವ ದಾಖಲೆ ಪ್ರಮಾಣದ ಅಭಿಪ್ರಾಯಗಳ ಕುರಿತು ಸಮಿತಿ ಅಧ್ಯಕ್ಷ ಜಗದಾಂಬಿಕಾ ಪಾಲ್‌ ಅವರಿಗೆ ಪತ್ರ ಬರೆದಿರುವ ದುಬೆ, ‘ವಕ್ಫ್ ತಿದ್ದುಪಡಿ ಕುರಿತ ಸಮಿತಿಗೆ ಕಂಡುಕೇಳರಿಯದ ರೀತಿಯಲ್ಲಿ ಅಭಿಪ್ರಾಯ, ಸಲಹೆ ಸಲ್ಲಿಕೆಯಾಗಿದೆ. ಇದೊಂದು ಜಾಗತಿಕ ದಾಖಲೆ. ಇದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಇದರ ಉದ್ದೇಶ ಮತ್ತು ಇಂಥ ಸಂವಹನದ ಹಿಂದಿನ ಮೂಲಗಳ ಕುರಿತು ತನಿಖೆ ಸೂಕ್ತ. ಈ ಪ್ರವೃತ್ತಿಯನ್ನು ನಿರ್ಲಕ್ಷಿಸುವಂತಿಲ್ಲ. ದೇಶದ ಸಮಗ್ರತೆ ಮತ್ತು ನಮ್ಮ ಶಾಸನಾತ್ಮಕ ಪ್ರಕ್ರಿಯೆಗಳ ಸ್ವಾತಂತ್ರ್ಯದ ನಿಟ್ಟಿನಲ್ಲಿ ಈ ಕುರಿತು ತನಿಖೆ ನಡೆಸುವುದು ಅತ್ಯಗತ್ಯ’ ಎಂದು ಮನವಿ ಮಾಡಿದ್ದಾರೆ.

ಬಾಬ್ರಿ ಮಸೀದಿಗೆ ಪರ್ಯಾಯವಾಗಿ ಇನ್ನೊಂದು ನಿರ್ಮಾಣಕ್ಕೆ ಹಣದ ಕೊರತೆ : ದೇಣಿಗೆ ಹಣ ಕೇವಲ 1 ಕೋಟಿ ರು. ಮಾತ್ರ!

ಜೊತೆಗೆ, ‘ಇಂಥ ದಾಖಲೆ ಅಭಿಪ್ರಾಯ ಸಲ್ಲಿಕೆ ಹಿಂದೆ ಮೂಲಭೂತವಾದಿ ಸಂಘಟನೆಗಳು, ಝಾಕಿರ್‌ ನಾಯ್ಕ್‌ನಂಥ ಇಸ್ಲಾಮಿಕ್‌ ಬೋಧಕರು, ಚೀನಾ, ಐಎಸ್‌ಐ, ತಾಲಿಬಾನ್‌, ಬಾಂಗ್ಲಾದೇಶದ ಜಮಾತ್‌ ಎ ಇಸ್ಲಾಮಿಯಂಥ ವಿದೇಶಿ ಶಕ್ತಿಗಳ ಕೈವಾಡ ತಳ್ಳಿಹಾಕುವಂತಿಲ್ಲ. ಜೊತೆಗೆ ಅಭಿಪ್ರಾಯಗಳು ಸಲ್ಲಿಕೆಯಾಗಿರುವ ಭೂಪ್ರದೇಶಗಳ ಮೂಲದ ಬಗ್ಗೆಯೂ ತನಿಖೆ ಸೂಕ್ತ. ಏಕೆಂದರೆ ಇಷ್ಟೊಂದು ದೊಡ್ಡ ಪ್ರಮಾಣದ ಅಭಿಪ್ರಾಯ ಕೇವಲ ಭಾರತದ ಭೂಭಾಗವೊಂದರಿಂದಲೇ ಸಲ್ಲಿಕೆ ಸಾಂಖ್ಯಿಕವಾಗಿ ಅಸಾಧ್ಯ’ ಎಂದು ದುಬೆ ವಾದಿಸಿದ್ದಾರೆ.

ಊರಿಗೆ ಊರೇ ನಮ್ದು: ದೇವಸ್ಥಾನ, ಸಾರಿಗೆ ಬಸ್ ಟರ್ಮಿನಲ್ ಎಲ್ಲವೂ ವಕ್ಫ್ ಆಸ್ತಿ ಎಂದು ಘೋಷಣೆ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 6 !
ಇನ್ನೂ 3 ದಿನ ತಗ್ಗುವುದಿಲ್ಲ ಇಂಡಿಗೋಳು! - ನಿನ್ನೆ ಮತ್ತೆ 650 ವಿಮಾನ ರದ್ದು