ಪೆಗಾಸಸ್‌ ಕೇಸ್‌: ವಿಸ್ತೃತ ಪ್ರಮಾಣ ಪತ್ರ ಸಲ್ಲಿಕೆಗೆ ಕೇಂದ್ರ ಸರ್ಕಾರ ನಕಾರ!

Published : Sep 14, 2021, 08:34 AM IST
ಪೆಗಾಸಸ್‌ ಕೇಸ್‌: ವಿಸ್ತೃತ ಪ್ರಮಾಣ ಪತ್ರ ಸಲ್ಲಿಕೆಗೆ ಕೇಂದ್ರ ಸರ್ಕಾರ ನಕಾರ!

ಸಾರಾಂಶ

* ಪೆಗಾಸಸ್‌ ಮೂಲಕ ಬೇಹುಗಾರಿಕೆ, ಸುಪ್ರೀಂ ವಿಚಾರಣೆ * ವಿಸ್ತೃತ ಪ್ರಮಾಣ ಪತ್ರ ಸಲ್ಲಿಕೆಗೆ ಕೇಂದ್ರ ಸರ್ಕಾರ ನಕಾರ

ನವದೆಹಲಿ(ಸೆ.14): ಪೆಗಾಸಸ್‌ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ದೇಶದ ಹಿತಾಸಕ್ತಿಯ ದೃಷ್ಟಿಯಿಂದ ವಿಸ್ತೃತ ಪ್ರಮಾಣಪತ್ರವನ್ನು ಸಲ್ಲಿಸಲು ತಾನು ಬಯಸಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರಿಂಕೋರ್ಟ್‌ಗೆ ಸೊಮವಾರ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಕೋರ್ಟ್‌, ತನಿಖೆ ಕೋರಿದ್ದ ಅರ್ಜಿಯ ತೀರ್ಪನ್ನು ಕಾದಿರಿಸಿರುವುದಾಗಿ ತಿಳಿಸಿದೆ. ಇಸ್ರೇಲ್‌ ಮೂಲದ ಸ್ಪೈವೇರ್‌ ಬಳಸಿ ರಾಜಕಾರಣಿಗಳು, ಗಣ್ಯರು ಮತ್ತು ಸೆಲೆಬ್ರಿಟಿಗಳ ಫೋನ್‌ಗಳನ್ನು ಕದ್ದಾಲಿಕೆ ಮಾಡಿದ ಆರೋಪ ದೇಶದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವತಂತ್ರ ತನಿಖೆ ನಡೆಸಬೇಕು ಎಂದು ಕೋರಿ ಸಲ್ಲಿಕೆಯಾದ ಅರ್ಜಿಗಳ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್‌, ಅಫಿಡವಿಟ್‌ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿತ್ತು.

ಆದರೆ, ಇದು ದೇಶದ ಭದ್ರತೆಗೆ ಸಂಬಂಧಿಸಿದ ವಿಷಯವಾಗಿದ್ದರಿಂದ ಸಾರ್ವಜನಿಕವಾಗಿ ಅವುಗಳ ಮಾಹಿತಿಯನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ದೇಶದ ಭದ್ರತೆಯ ದೃಷ್ಟಿಯಿಂದ ಅಫಿಡವಿಟ್‌ನಲ್ಲಿ ವಿಸ್ತೃತ ಮಾಹಿತಿ ನೀಡುವ ಅಥವಾ ಬಹಿರಂಗವಾಗಿ ಚರ್ಚಿಸುವುದಕ್ಕೆ ಸಾಧ್ಯವಿಲ್ಲ. ಈ ಸಂಬಂಧ ವಿಷಯ ತಜ್ಞರ ಸಮಿತಿಯೊಂದನ್ನು ರಚನೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗುಲಾಮಿ ಮನಃಸ್ಥಿತಿ ಬಿಡಲು 2035ರ ಗಡುವು : ಮೋದಿ
ಇಂಡಿಗೋ ವಿಮಾನ ರದ್ದತಿ ಕೊಂಚ ಸರಿ ದಾರಿಗೆ