ಮಾಲೇಗಾಂವ್‌ ಕೇಸಲ್ಲಿ ಶ್ರೀ ಶ್ರೀ ಹೆಸರು ಹೇಳಲು ಒತ್ತಡವಿತ್ತು: ನಿ. ಮೇಜರ್‌

Sujatha NR   | Kannada Prabha
Published : Aug 04, 2025, 06:13 AM IST
sri sri ravishankar

ಸಾರಾಂಶ

2008ರ ಮಾಲೇಗಾಂವ್‌ ಸ್ಫೋಟದ ಎಲ್ಲ ಆರೋಪಿಗಳನ್ನು ದೋಷಮುಕ್ತಗೊಳಿಸಿ ಮುಂಬೈನ ಎನ್‌ಐಎ ವಿಶೇಷ ಕೋರ್ಟ್‌ ತೀರ್ಪು ನೀಡಿದ ಬೆನ್ನಲ್ಲೇ ಪ್ರಕರಣದ ತನಿಖಾಧಿಕಾರಿಗಳ ಮೇಲೆ ಇದೀಗ ಗಂಭೀರ ಆರೋಪಗಳು ಕೇಳಿಬರುತ್ತಿವೆ.

ಬಲಿಯಾ (ಉತ್ತರಪ್ರದೇಶ) : 2008ರ ಮಾಲೇಗಾಂವ್‌ ಸ್ಫೋಟದ ಎಲ್ಲ ಆರೋಪಿಗಳನ್ನು ದೋಷಮುಕ್ತಗೊಳಿಸಿ ಮುಂಬೈನ ಎನ್‌ಐಎ ವಿಶೇಷ ಕೋರ್ಟ್‌ ತೀರ್ಪು ನೀಡಿದ ಬೆನ್ನಲ್ಲೇ ಪ್ರಕರಣದ ತನಿಖಾಧಿಕಾರಿಗಳ ಮೇಲೆ ಇದೀಗ ಗಂಭೀರ ಆರೋಪಗಳು ಕೇಳಿಬರುತ್ತಿವೆ. 

ಸಾಧ್ವಿ ಪ್ರಜ್ಞಾ ಸಿಂಗ್‌, ಮತ್ತಿತರರ ಜತೆ ದೋಷಮುಕ್ತಗೊಂಡಿರುವ ನಿವೃತ್ತ ಮೇಜರ್‌ ರಮೇಶ್‌ ಉಪಾಧ್ಯಾಯ ಕೂಡ ಇಂಥದ್ದೇ ಆರೋಪ ಮಾಡಿದ್ದು, ‘ಬೆಂಗಳೂರು ಆರ್ಟ್‌ ಆಫ್‌ ಲಿವಿಂಗ್‌ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ ಗುರೂಜಿ ಹೆಸರು ಹೇಳುವಂತೆ ನನ್ನ ಮೇಲೆ ತನಿಖಾಧಿಕಾರಿಗಳು ಒತ್ತಡ ಹೇರಿದ್ದರು. ಚಿತ್ರ ಹಿಂಸೆ ಕೊಟ್ಟಿದ್ದರು’ ಎಂದು ಆರೋಪಿಸಿದ್ದಾರೆ.

ಜತೆಗೆ, ‘ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌, ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಹಾಗೂ ಆರೆಸ್ಸೆಸ್ ನಾಯಕ ಇಂದ್ರೇಶ್‌ ಕುಮಾರ್‌ ಅವರ ಹೆಸರನ್ನೂ ಹೇಳುವಂತೆ ನನಗೆ ಜೈಲಲ್ಲಿ ತೀವ್ರ ಚಿತ್ರಹಿಂಸೆ ನೀಡಲಾಗಿತ್ತು’ ಎಂದು ಕಿಡಿಕಾರಿದ್ದಾರೆ.

ಭಾನುವಾರ ಪಿಟಿಐ ಸುದ್ದಿಸಂಸ್ಥೆ ಜತೆ ಮಾತನಾಡಿದ ಅವರು, ‘ಆ.28, 2008ರಂದು ಎಟಿಎಸ್‌ ನನ್ನನ್ನು ಕಸ್ಟಡಿಗೆ ತೆಗೆದುಕೊಂಡಿತ್ತು. ಈ ವೇಳೆ ನನಗೆ ತೀವ್ರ ದೈಹಿಕ ಮತ್ತು ಮಾನಸಿಕ ಚಿತ್ರಹಿಂಸೆ ನೀಡಲಾಗಿತ್ತು. ಹಲವು ವರ್ಷಗಳ ಕಾಲ ನನ್ನನ್ನು ಏಕಾಂತ ಸೆರೆವಾಸದಲ್ಲಿಡಲಾಗಿತ್ತು. ರಾಜಕೀಯ ಮತ್ತು ಧಾರ್ಮಿಕ ನಾಯಕರು ಕೃತ್ಯದಲ್ಲಿ ಭಾಗಿ ಆಗಿದ್ದಾರೆ ಎಂದು ಅವರ ಹೆಸರು ಹೇಳು. ಹೀಗಾದರಷ್ಟೇ ಶೀಘ್ರ ಬಿಡುಗಡೆ ಮಾಡ್ತೇವೆ ಎಂದು ಒತ್ತಡ ಹೇರಲಾಗಿತ್ತು’ ಎಂದರು.

‘ಆಗಿನ ಯುಪಿಎ ಸರ್ಕಾರ ರಾಜಕೀಯ ಪ್ರೇರಿತವಾಗಿ ಪ್ರಕರಣದ ಕುರಿತು ತನಿಖೆ ನಡೆಸಿದೆ. ಸೋನಿಯಾ ಗಾಂಧಿ, ದಿಗ್ವಿಜಯ ಸಿಂಗ್‌ ಮತ್ತು ಸುಶೀಲ್‌ ಕುಮಾರ್‌ ಶಿಂಧೆಯಂಥ ನಾಯಕರ ಒತ್ತಡಕ್ಕೆ ಮಣಿದು ಅಧಿಕಾರಿಗಳು ಕೆಲಸ ಮಾಡುತ್ತಿದ್ದರು. ನಾನು ವಿನಾ ಕಾರಣ 17 ವರ್ಷ ಜೈಲಲ್ಲಿ ಕಳೆಯಬೇಕಾಯಿತು’ ಎಂದು ಆರೋಪಿಸಿದರು.

‘ನಾನು ನಾರ್ಕೋ ಮತ್ತು ಪಾಲಿಗ್ರಾಫ್‌ ಪರೀಕ್ಷೆ ಮಾಡಿಸಿಕೊಳ್ಳಲು 3 ಬಾರಿ ಸ್ವಯಂಪ್ರೇರಿತನಾಗಿ ಮುಂದೆ ಬಂದಿದ್ದೆ. ಆದರೂ ಎಟಿಎಸ್‌ ಅದರ ವರದಿಯನ್ನು ಕೋರ್ಟ್‌ಗೆ ಸಲ್ಲಿಸಲೇ ಇಲ್ಲ’ ಎಂದು ಉಪಾಧ್ಯಾಯ ಬೇಸರ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..
ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್