ಅಬ್ಬಬ್ಬಾ.. 2 ಡಜನ್‌ ವಾಹನದ ಬೆಂಗಾವಲಿನೊಂದಿಗೆ ಬಂದ ಪಂಜಾಬ್‌ ಸಿಎಂ ಪತ್ನಿ!

Published : Dec 17, 2023, 08:04 PM IST
ಅಬ್ಬಬ್ಬಾ.. 2 ಡಜನ್‌ ವಾಹನದ ಬೆಂಗಾವಲಿನೊಂದಿಗೆ ಬಂದ ಪಂಜಾಬ್‌ ಸಿಎಂ ಪತ್ನಿ!

ಸಾರಾಂಶ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಪತ್ನಿ ಗುರುಪ್ರೀತ್ ಕೌರ್ ಎರಡು ಡಜನ್ ವಾಹನಗಳ ಬೆಂಗಾವಲು ಪಡೆಗಳೊಂದಿಗೆ ಪ್ರಯಾಣ ಮಾಡಿರುವ ವಿಡಿಯೋ ವೈರಲ್‌ ಆಗಿದೆ. 2 ಕೋಟಿ ಮೌಲ್ಯದ ಬುಲೆಟ್ ಪ್ರೂಫ್ ಕಾರನ್ನು ಕೂಡ ಅವರು ಬಳಸುತ್ತಿದ್ದಾರೆ.

ನವದೆಹಲಿ (ಡಿ.17):  ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಭಗವಂತ್‌ ಮಾನ್‌ ಅವರ ವೈಯಕ್ತಿಕ ವಿಚಾರ, ಮೊದಲ ಪತ್ನಿ ಹಾಗೂ ಮಗಳ ಅರೋಪಗಳಿಂದಾಗಿ ಸಾಕಸ್ಟು ಸುದ್ದಿಯಲ್ಲಿದ್ದಾರೆ. ಇತ್ತೀಚೆಗಷ್ಟೇ ಭಗವಂತ್ ಮಾನ್ ಪುತ್ರಿ ಸೀರತ್ ಕೌರ್‌, ತಮ್ಮ ತಾಯಿ ಮತ್ತೊಮ್ಮೆ ಗರ್ಭಿಣಿ ಎಂಬ ವಿಡಿಯೋವನ್ನು ಬಿಡುಗಡೆ ಮಾಡಿದ್ದರು. ಇದರೊಂದಿಗೆ ಭಗವಂತ ಮಾನ್ ಮದ್ಯ ಸೇವಿಸಿ ಗುರುದ್ವಾರಕ್ಕೆ ಹೋಗುತ್ತಾರೆ ಎಂದೂ ಆರೋಪ ಮಾಡಿದ್ದರು. ಇದೀಗ ಭಗವಂತ್ ಮಾನ್ ಅವರ 2ನೇ ಪತ್ನಿ ಗುರುಪ್ರೀತ್ ಕೌರ್ ಬೆಂಗಾವಲು ಪಡೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಗುರ್‌ಪ್ರೀತ್ ಕೌರ್‌ಗೆ ಸೇರಿದ ಬೆಂಗಾವಲು ಪಡೆ ಸುಮಾರು ಎರಡು ಡಜನ್ ವಾಹನಗಳನ್ನು ಹೊಂದಿದೆ ಎಂದು ವೀಡಿಯೊದಲ್ಲಿ ತೋರಿಸಲಾಗಿದೆ. ಆಮ್‌ ಆದ್ಮಿ ಪಾರ್ಟಿ ಅಂದರೆ, ಬಡ ಜನರ ಪಕ್ಷ ಎಂದು ಹೇಳಿಕೊಂಡು ಅಧಿಕಾರಕ್ಕೇರಿರುವ ಪಕ್ಷದ ಸಿಎಂನ ಪತ್ನಿ ಎರಡು ಡಜನ್‌ ವಾಹನಗಳ ಬೆಂಗಾವಲಿನೊಂದಿಗೆ ಪ್ರಯಾಣ ಮಾಡುತ್ತಾಳೆ. ಇದೇನಾ ಕಾಮನ್‌ ಮ್ಯಾನ್‌ ಗವರ್ನಮೆಂಟ್‌ ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಶ್ರೀಸಾಮಾನ್ಯನ ಸರ್ಕಾರ ಅಂದ್ರೆ ಇದೇನಾ ಎಂದು ಜನ ವಿಡಿಯೋಗೆ ಕಾಮೆಂಟ್‌ ಮಾಡಿದ್ದಾರೆ.

ಮಾಣಿಕ್ ಗೋಯಲ್ ಎಂಬ ಬಳಕೆದಾರರು ಎಕ್ಸ್‌ನಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಇದರಲ್ಲಿ ಅವರು ವೀಡಿಯೊವನ್ನು ನೋಡಿದ ನಂತರ, ಬೆಂಗಾವಲು ಪಡೆ ಪ್ರಧಾನಿ, ಮುಖ್ಯಮಂತ್ರಿ ಅಥವಾ ಯಾವುದೇ ಕೇಂದ್ರ ಸಚಿವರಿಗೆ ಸೇರಿದೆ ಎಂದು ನೀವು ಭಾವಿಸಿರಬಹುದು. ಆದರೆ, ನಿಮ್ಮ ಯೋಚನೆ ತಪ್ಪು, ಈ ಬೆಂಗಾವಲು ಪಡೆ  ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಪತ್ನಿ ಗುರುಪ್ರೀತ್ ಕೌರ್ ಅವರದ್ದು. ಗುರುಪ್ರೀತ್ ಕೌರ್ ಅವರು ಚುನಾಯಿತ ಸಾರ್ವಜನಿಕ ಪ್ರತಿನಿಧಿಯೂ ಅಲ್ಲ ಅಥವಾ ಯಾವುದೇ ಸಾಂವಿಧಾನಿಕ ಹುದ್ದೆಯನ್ನೂ ಹೊಂದಿಲ್ಲ ಎಂದು ಅವರು ಬರೆದಿದ್ದಾರೆ.

13 ವರ್ಷದ ಬಾಲಕಿಗೆ ಹಾಟ್‌ ಎಂದಿದ್ದ 50 ವರ್ಷದ ವ್ಯಕ್ತಿಗೆ 3 ವರ್ಷ ಜೈಲು ಶಿಕ್ಷೆ!

ಗುರ್ ಪ್ರೀತ್ ಕೌರ್ 2 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಸರ್ಕಾರಿ ಬುಲೆಟ್ ಪ್ರೂಫ್ ಲ್ಯಾಂಡ್ ಕ್ರೂಸರ್ ಕಾರನ್ನು ಬಳಸುತ್ತಾರೆ. ಅವರ ಭದ್ರತೆಗೆ ನೂರಾರು ಪೊಲೀಸರನ್ನು ನಿಯೋಜಿಸಲಾಗಿದೆ. ಮುಖ್ಯಮಂತ್ರಿಗಳ ತಾಯಿ ಮತ್ತು ಸಹೋದರಿ ಕೂಡ ದೊಡ್ಡ ಬೆಂಗಾವಲು ಪಡೆ ಮತ್ತು ಭದ್ರತೆಯನ್ನು ಬಳಸುತ್ತಾರೆ. ಚುನಾವಣೆ ಗೆಲ್ಲುವ ಮುನ್ನ ಭಗವಂತ್ ಮಾನ್ ನಾಯಕರಿಗೆ ಭಾರೀ ಭದ್ರತೆ ನೀಡಿರುವುದನ್ನು ಟೀಕಿಸುತ್ತಿದ್ದರು. ಈಗ ಅವರ ಕುಟುಂಬದ ಸದಸ್ಯರು ಸರ್ಕಾರದಿಂದ ಹೆಚ್ಚಿನ ರಕ್ಷಣೆ ತೆಗೆದುಕೊಳ್ಳುತ್ತಾರೆ. ಇದು ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷದ ಸರ್ಕಾರದ ವಾಸ್ತವ ಎಂದು ಟೀಕಿಸಿದ್ದಾರೆ.

ನಟಿಯ ರೇಪ್‌ ಮಾಡಿದ್ರಾ ಜೆಎಸ್‌ಡಬ್ಲ್ಯು ಗ್ರೂಪ್‌ ಸಿಎಂಡಿ ಸಜ್ಜನ್‌ ಜಿಂದಾಲ್‌, ಮುಂಬೈನಲ್ಲಿ ಎಫ್‌ಐಆರ್‌

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!