
ವಯನಾಡ್ (ಆ.5): ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಭೂಕುಸಿತ ವೇಳೆ ಮುದ್ದಿನ ಮಗಳು, ಅಳಿಯ, ಮೊಮ್ಮಗ, ಪತ್ನಿ ಎಲ್ಲರೂ ಕಾಣೆಯಾಗಿಬಿಟ್ಟರು. ಅವರಿಗಾಗಿ ತಂದೆ ಹುಡುಕಾಡದ ಸ್ಥಳವಿಲ್ಲ. ಕೊನೆಗೆ ದೂರದ ಚಲಿಯಾರ್ ನದಿಯಲ್ಲಿ ಮಹಿಳೆಯ ಒಂಟಿ ಕೈಯೊಂದು ಸಿಕ್ಕಿತು. ಅದರ ಬೆರಳಲ್ಲಿ ಒಂದು ಉಂಗುರ ಇತ್ತು. ಅದನ್ನು ನೋಡಿದ ತಂದೆ, ಆಕೆ ನನ್ನ ಮಗಳು ಎಂದು ಗಳಗಳನೆ ಅತ್ತುಬಿಟ್ಟ. ಪುತ್ರಿಯ ದೇಹ ಸಿಗದ ಕಾರಣ ಒಂಟಿ ಕೈಯನ್ನೇ ಚಿತೆಯ ಮೇಲೆ ಇಟ್ಟು ರೋದಿಸುತ್ತಾ ಅಂತ್ಯಕ್ರಿಯೆ ಮುಗಿಸಿದ!
ಭೀಕರ ಭೂಕುಸಿತ ದುರಂತಕ್ಕೆ ಸಾಕ್ಷಿಯಾದ ಕೇರಳದ ವಯನಾಡ್ನಲ್ಲಿ ಕಂಡುಬಂದ ಮತ್ತೊಂದು ಮನಕಲುಕುವ ಘಟನೆ ಇದು.
ಕೇರಳದಲ್ಲಿ ಗೋಹತ್ಯೆ ನಡೆಸಿದ್ದರಿಂದಲೇ ವಯನಾಡಿನಲ್ಲಿ ಭೂಕುಸಿತ : ಬಿಜೆಪಿ ನಾಯಕ ವಿವಾದ
ಈ ನತದೃಷ್ಟ ತಂದೆಯ ಹೆಸರು ರಾಮಸ್ವಾಮಿ. ಆತನ ಪುತ್ರಿ ಜೀಶಾ(). ತಂದೆಯ ಕೈ ಹಿಡಿದೇ ಬೆಳೆದವಳು. ರಾಮಸ್ವಾಮಿ ಅವರು ಮುರುಗನ್ಗೆ ಪುತ್ರಿಯನ್ನು ಕೈ ಹಿಡಿದು ಧಾರೆ ಎರೆದುಕೊಟ್ಟಿದ್ದರು. ಆದರೆ ಭೂಕುಸಿತದಿಂದಾಗಿ ಮಗಳು, ಅಳಿಯ, ಮೊಮ್ಮಗ ಅಕ್ಷಯ್ ಹಾಗೂ ರಾಮಸ್ವಾಮಿ ಪತ್ನಿ ತಂಕಮ್ಮ ಎಲ್ಲರೂ ನಾಪತ್ತೆಯಾಗಿಬಿಟ್ಟರು. ಭೂಕುಸಿತ ವೇಳೆ ಅವರೆಲ್ಲಾ ಕೊಚ್ಚಿ ಹೋಗಿದ್ದರು. ರಾಮಸ್ವಾಮಿ ಹೇಗೋ ಬಚಾವಾಗಿದ್ದರು. ಈ ಪೈಕಿ ಅಕ್ಷಯ್ ಶವ ಮಾತ್ರ ಸಿಕ್ಕಿತ್ತು. ಉಳಿದ ಯಾರೂ ಸಿಕ್ಕಿರಲಿಲ್ಲ.
ವಯನಾಡ್ ಸಂತ್ರಸ್ತರಿಗೆ 3 ಕೋಟಿ ಘೋಷಿಸಿದ ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್'
ರಕ್ಷಣಾ ತಂಡಗಳಿಗೆ ಚಲಿಯಾರ್ ನದಿಯಲ್ಲಿ ಮಹಿಳೆಯ ಒಂಟಿ ಕೈ ಸಿಕ್ಕಿತ್ತು. ಅದರ ಬೆರಳಲ್ಲಿ ಉಂಗುರ ಇತ್ತು. ‘ಮುರುಗನ್’ ಎಂಬ ಹೆಸರು ಉಂಗುರದಲ್ಲಿತ್ತು. ಅದನ್ನು ನೋಡಿ ರಾಮಸ್ವಾಮಿ ದುಃಖ ತಡೆಯಲು ಆಗಲಿಲ್ಲ. ‘ನನ್ನ ಮಗಳು, ನನ್ನ ಮಗಳು..’ ಎಂದು ಕಣ್ಣೀರಿಟ್ಟ.
ಪುತ್ರಿಯ ಅಂತ್ಯಕ್ರಿಯೆ ಮಾಡಲು ಸಣ್ಣ ಚಿತೆ ತಯಾರಿಸಿ, ಕಣ್ಣೀರು ಸುರಿಸುತ್ತಾ, ಮುಖ ಚಚ್ಚಿಕೊಳ್ಳುತ್ತಾ ಕೈಯಾರೆ ಬೆಳೆಸಿದ ಮಗಳ ಕೈಗೆ ಬೆಂಕಿ ಇಟ್ಟ. ನೆರೆದಿದ್ದವರು ಕಣ್ಣಾಲಿಗಳಲ್ಲೂ ನೀರು ಹರಿಯಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ