
ವಯನಾಡು(ಆ.15) ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತ, ಪ್ರವಾಹದಲ್ಲಿ ಮಡಿದವರ ಸಂಖ್ಯೆ 400 ದಾಟಿದೆ. ಮುಂಡಕೈ, ಚೂರಲ್ಮಲ ಸೇರಿದಂತೆ ಹಲವು ಪ್ರದೇಶಗಳ ನಿರ್ನಾಮಗೊಂಡಿದೆ. ಇಲ್ಲಿನ ನಿವಾಸಿಗಳ ಜೀವ ಮಾತ್ರವಲ್ಲ, ಬದುಕು ಕೊಚ್ಚಿಹೋಗಿದೆ. ಈ ರೀತಿಯ ದುರಂತ ತಪ್ಪಿಸಲು ವಯನಾಡು ಜಿಲ್ಲಾಡಳಿತ ಕಟ್ಟು ನಿಟ್ಟಿನ ಆದೇಶ ಹೊರಡಿಸಿದೆ. ಆದರೆ ಈ ಆದೇಶದಿಂದ ವಯನಾಡಿನ ಹಿರಿಯ ದಂಪತಿ ಬೀದಿ ಬಿದ್ದಿದ್ದಾರೆ. ಪರಿಣಾಮ ಇಬ್ಬರು ಹಿರಿಯ ಜೀವಗಳು ಬದುಕನ್ನೇ ಅಂತ್ಯಗೊಳಿಸಿದ ಘಟನೆ ನಡೆದಿದೆ.
ವಯನಾಡಿನ ಅಂಬಲವಾಯಂ ಆಯಿರಂಕೊಲ್ಲಿಯ 82 ವರ್ಷದ ನಿವಾಸಿ ಜೊಸೆಫ್ ಹಾಗೂ ಅವರ ಪತ್ನಿ ಮೇರಿ ದುರಂತ ಅಂತ್ಯಕಂಡಿದ್ದಾರೆ. ಆಯಿರಂಕೊಲ್ಲಿ ಬಳಿ ಜೊಸೆಫ್ 1986ರಿಂದ ಕ್ವಾರಿ ಗ್ರಾನೈಟ್ ಉದ್ಯಮ ನಡೆಸುತ್ತಿದ್ದಾರೆ. ಕೆಲ ವರ್ಷಗಳ ಹಿಂದೆ ಹೊಸ ತಂತ್ರಜ್ಞಾನ, ಮಶಿನ್ ಖರೀದಿಸಲು ಭಾರಿ ಸಾಲ ಮಾಡಿದ್ದಾರೆ. ಉದ್ಯಮ ತಕ್ಕಮಟ್ಟಿಗೆ ಮುನ್ನಡೆಯುತ್ತಿದ್ದ ಕಾರಣ ಹೊಸ ಮಶಿನ್ ಖರೀದಿಸಿದ್ದರು. ಆದರೆ ಇತ್ತೀಚೆಗೆ ವಯನಾಡಿನಲ್ಲಿನ ಪರಿಸರಕ್ಕೆ ಆಗುತ್ತಿರವ ಹಾನಿ ತಪ್ಪಿಸಲು ಜಿಲ್ಲಾಡಳಿತ ಜಿಲ್ಲೆಯ ಎಲ್ಲಾ ಕ್ವಾರಿಗಳಿಗೆ ನಿರ್ಬಂಧ ಹೇರಿದೆ.
ವಯನಾಡಿನಲ್ಲಿ 6 ದಿನಗಳ ಬಳಿಕ ಮಾಲೀಕನ ಪತ್ತೆ ಹಚ್ಚಿದ ನಾಯಿ, ಹೃದಯಸ್ಪರ್ಶಿ ವಿಡಿಯೋ!
ಕ್ವಾರಿಗಳಿಂದ ಪರಿಸರಕ್ಕೆ ಅತೀ ಹೆಚ್ಚಿನ ಹಾನಿಯಾಗುತ್ತಿದೆ ಅನ್ನೋ ವೈಜ್ಞಾನಿಕ ವರದಿ ಆಧರಿಸಿ ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿತ್ತು. ವಯಾನಾಡು ದುರಂತಕ್ಕೂ ಕೆಲ ತಿಂಗಳ ಮೊದಲೇ ಈ ನಿರ್ಧಾರ ಘೋಷಣೆಯಾಗಿತ್ತು. ಉದ್ಯಮ ಸ್ಥಗಿತಗೊಂಡ ಕಾರಣ ಮತ್ತಷ್ಟು ಸಾಲದ ಸುಳಿದ ಸಿಲುಕಿದ ಜೊಸೆಫ್ ಹಾಗೂ ಮೇರಿ ತಮ್ಮ ಮೂರು ಏಕರೆ ಜಮೀನು ಹಾಗೂ ಮನೆಯನ್ನು ಮಾರಾಟ ಮಾಡಿದ್ದಾರೆ. ಬಳಿಕ ಕೆಲ ದಿನಗಳ ಕಾಲ ಇಬ್ಬರು ಪುತ್ರಿಯರ ಪೈಕಿ ಓರ್ವ ಮಗಳ ಜೊತೆ ತಂಗಿದ್ದ ಇವರು ಬಳಿಕ ಬಾಡಿಗೆ ಮನೆಗೆ ಸ್ಥಳಾಂತರಗೊಂಡಿದ್ದರು.
ಕಾರ್ಮಿಕರ ವೇತನ, ಮಶಿನ್ ಖರೀದಿಸಲು ಮಾಡಿದ ಸಾಲದ ಹೊರೆ ಹೆಚ್ಚಾಗಿದೆ. ಅಂಬಲವಾಯಲ್ ಬಸ್ ನಿಲ್ದಾಣದ ಪಕ್ಕದಲ್ಲೇ ಇಬ್ಬರು ಅಸ್ವಸ್ಥರಾಗಿ ಬಿದ್ದಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ತಕ್ಷಣವೇ ಆಸ್ಪತ್ರೆಗೆ ದಾಖಿಸಿದ್ದಾರೆ. ಆದರೆ ಆಸ್ಪತ್ರೆ ದಾಖಲಿಸುವ ಮೊದಲೇ ಹಿರಿಯ ಜೀವಗಳ ಪ್ರಾಣ ಪಕ್ಷಿ ಹಾರಿದೆ ಹೋಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಾರ್ಯಚರಣೆ ವೇಳೆ ಅಸ್ವಸ್ಥರಾಗಿ ಬಿದ್ದಿದ್ದ ಸ್ಥಳದಲ್ಲಿ ವಿಷದ ಬಾಟಲಿ ಪತ್ತೆಯಾಗಿದೆ. ಇತ್ತ ಮರಣೋತ್ತರ ಪರೀಕ್ಷೆಯಲ್ಲೂ ವಿಷ ಸೇವಿಸಿಸುವುದು ದೃಢಪಟ್ಟಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ