ಹರ್ಯಾಣದಲ್ಲಿ ಕಾಂಗ್ರೆಸ್‌ ಪರ ವಾತಾವರಣ ಸೃಷ್ಟಿಸಿದ್ದೆವು: ರೈತ ನಾಯಕ ಗುರ್ನಾಮ್ ಸಿಂಗ್ ಚರುನಿ

Published : Oct 14, 2024, 07:28 AM IST
ಹರ್ಯಾಣದಲ್ಲಿ ಕಾಂಗ್ರೆಸ್‌ ಪರ ವಾತಾವರಣ ಸೃಷ್ಟಿಸಿದ್ದೆವು: ರೈತ ನಾಯಕ ಗುರ್ನಾಮ್ ಸಿಂಗ್ ಚರುನಿ

ಸಾರಾಂಶ

ಹರ್ಯಾಣದಲ್ಲಿ ರೈತ ಹೋರಾಟದಿಂದ ಕಾಂಗ್ರೆಸ್‌ ಪರ ವಾತಾವರಣ ಸೃಷ್ಟಿಸಿದ್ದೆವು. ಆದರೆ ರಾಜ್ಯ ಕಾಂಗ್ರೆಸ್‌ ನಾಯಕ ಭೂಪಿಂದರ್‌ ಸಿಂಗ್ ಹೂಡಾ ಎಲ್ಲ ಅವಕಾಶ ಹಾಳು ಮಾಡಿದರು.

ಕುರುಕ್ಷೇತ್ರ (ಅ.14): ‘ಹರ್ಯಾಣದಲ್ಲಿ ರೈತ ಹೋರಾಟದಿಂದ ಕಾಂಗ್ರೆಸ್‌ ಪರ ವಾತಾವರಣ ಸೃಷ್ಟಿಸಿದ್ದೆವು. ಆದರೆ ರಾಜ್ಯ ಕಾಂಗ್ರೆಸ್‌ ನಾಯಕ ಭೂಪಿಂದರ್‌ ಸಿಂಗ್ ಹೂಡಾ ಎಲ್ಲ ಅವಕಾಶ ಹಾಳು ಮಾಡಿದರು. ಹರ್ಯಾಣದಲ್ಲಿ ಕಾಂಗ್ರೆಸ್‌ ಸೋಲಿಗೆ ಹೂಡಾ ಕಾರಣ’ ಎಂದು 3 ಕೃಷಿ ಕಾಯ್ದೆ ವಿರುದ್ಧ ಹೋರಾಟದ ಮುಂಚೂಣಿಯಲ್ಲಿದ್ದ ಭಾರತೀಯ ಕಿಸಾನ್ ಯೂನಿಯನ್‌ (ಬಿಕೆಯು) ಮುಖ್ಯಸ್ಥ ಗುರ್ನಾಮ್ ಸಿಂಗ್ ಚರುನಿ ಕಿಡಿಕಾರಿದ್ದಾರೆ.

‘ಮೋದಿ ಸರ್ಕಾರ ಜಾರಿಗೆ ತಂದಿದ್ದ 3 ಕೃಷಿ ಕಾಯ್ದೆಗಳ ವಿರುದ್ಧದ ಹೋರಾಟಕ್ಕೆ ಕಾಂಗ್ರೆಸ್‌ ಕುಮ್ಮಕ್ಕು ಇತ್ತು’ ಎಂದು ಬಿಜೆಪಿ ನಾಯಕರು ಆರೋಪಿಸುತ್ತಲೇ ಇದ್ದರು. ಇದಕ್ಕೆ ಪುಷ್ಟಿ ನೀಡುವಂಥ ಹೇಳಿಕೆಯನ್ನು ಚುರುನಿ ನೀಡಿದ್ದಾರೆ. ಭಾನುವಾರ ಸುದ್ದಿಸಂಸ್ಥೆಯೊಂದರ ಜತೆ ಮಾತನಾಡಿದ ಅವರು, ‘ಹರ್ಯಾಣದಲ್ಲಿ ಕಾಂಗ್ರೆಸ್‌ ಸೋಲಿಗೆ ಹೂಡಾರೇ ಕಾರಣ. ಅವರು ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳುತ್ತಿರಲಿಲ್ಲ. ಎಲ್ಲ ನಿರ್ಧಾರವನ್ನು ಒಬ್ಬರೇ ತೆಗೆದುಕೊಳ್ಳುತ್ತಿದ್ದರು. 

ಭೂಪಿಂದರ್ ಸಿಂಗ್ ಹೂಡಾ ಅಲ್ಲ, ಒಂದು ದಶಕದೀಚೆಗೆ ರೈತ ಸಂಘಟನೆಗಳು ಹರ್ಯಾಣದಲ್ಲಿ ವಿಪಕ್ಷ ಸ್ಥಾನವನ್ನು ತುಂಬಿದ್ದವು. ನಮ್ಮ ಕಾರಣದಿಂದ ಹರ್ಯಾಣದಲ್ಲಿ ಕಾಂಗ್ರೆಸ್‌ ಪರ ವಾತಾವರಣ ಸೃಷ್ಟಿಯಾಗಿತ್ತು. ಆದರೆ ಅದನ್ನು ಕಾಂಗ್ರೆಸ್‌ ಬಳಸಿಕೊಳ್ಳಲಿಲ್ಲ’ ಎಂದು ಅತೃಪ್ತಿ ವ್ಯಕ್ತಪಡಿಸಿದರು.+ ‘ಹೀಗಾಗಿ ಇನ್ನು ಮುಂದೆ ಹೂಡಾಗೆ ವಿಪಕ್ಷ ನಾಯಕ ಸ್ಥಾನವನ್ನಾಗಲಿ ಅಥವಾ ಯಾವುದೇ ಉತ್ತಮ ಸ್ಥಾನವನ್ನಾಗಲಿ ನೀಡಬಾರದು’ ಎಂದು ಕಾಂಗ್ರೆಸ್‌ಗೆ ಅಗ್ರಹಿಸಿದರು.

ತಿರುಪತಿ ಮಾದರಿಯಲ್ಲಿ ಸವದತ್ತಿ ಅಭಿವೃದ್ಧಿ: ಸಿಎಂ ಸಿದ್ದರಾಮಯ್ಯ

ಪ್ರಿಯಾಂಕಾಗೆ ನಾಯಕತ್ವ ನೀಡಿ: ಇದೇ ವೇಳೆ ‘ಕಾಂಗ್ರೆಸ್‌ ನಾಯಕತ್ವವನ್ನು ರಾಹುಲ್ ಗಾಂಧಿ ಬದಲು ಪ್ರಿಯಾಂಕಾ ಗಾಂಧಿ ಅವರಿಗೆ ನೀಡಬೇಕು. ಆಗ ಕಾಂಗ್ರೆಸ್‌ ಉಳಿಯಲು ಸಾಧ್ಯ’ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Indigo Crisis: ಮಗಳಿಗೆ ರಕ್ತ ಸೋರ್ತಿದೆ, ಸ್ಯಾನಿಟರಿ ಪ್ಯಾಡ್​ ಕೊಡಿ: ಬೆಂಗಳೂರು ಏರ್​ಪೋರ್ಟ್​ನಲ್ಲಿ ತಂದೆಯ ಕಣ್ಣೀರು
ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್