'ಸಂಜಯ್ ರಾವತ್‌ಗೆ ಕಿಮ್ಮತ್ತಿಲ್ಲ, ಪಾಲುದಾರ ಪಕ್ಷದ ಅಧ್ಯಕ್ಷರಿಂದಲೇ ತಪರಾಕಿ!

Published : May 10, 2021, 04:58 PM ISTUpdated : May 10, 2021, 05:07 PM IST
'ಸಂಜಯ್ ರಾವತ್‌ಗೆ ಕಿಮ್ಮತ್ತಿಲ್ಲ, ಪಾಲುದಾರ ಪಕ್ಷದ ಅಧ್ಯಕ್ಷರಿಂದಲೇ ತಪರಾಕಿ!

ಸಾರಾಂಶ

ಮರಾಠ ಸಮುದಾಯಕ್ಕೆ ಬಿಜೆಪಿಯಿಂದ ಅನ್ಯಾಯ/ ಮೀಸಲಾತಿ ವಿಚಾರದಲ್ಲಿ ಬಿಜೆಪಿಯದ್ದೇ ತಪ್ಪು ಎಂದ ಕಾಂಗ್ರೆಸ್/  ಜತೆಗಾರ ಪಕ್ಷದ ನಾಐಕ ಸಂಜಯ್ ರಾವತ್ ಮೇಲೂ ವಾಗ್ದಾಳಿ/ ಸಂಜಯ್ ರಾವತ್ ಮಾತಿಗೆ ಬೆಲೆ ಕೊಡುವ ಅಗತ್ಯ  ಇಲ್ಲ

ಮುಂಬೈ(ಮೇ 10)  ಮೀಸಲಾತಿಗೆ ಸಂಬಂಧಿಸಿದ ವಿಚಾರದ ಬಗ್ಗೆ ಸಿಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಮೀಸಲು ಪ್ರಮಾಣ ಯಾವ ಕಾರಣಕ್ಕೂ ಶೇ.  50  ನ್ನು ಮೀರಬಾರದು ಎಂದು ತಿಳಿಸಿದೆ.

ಆದರೆ ಈ ವಿಚಾರ ಮಾಹಾರಾಷ್ಟ್ರದಲ್ಲಿ ರಾಜಕೀಯ ವಾಕ್ ಸಮರಕ್ಕೆ ವೇದಿಕೆ ಮಾಡಿಕೊಟ್ಟಿದೆ. ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಾತೋಳೆ ಬಿಜೆಪಿ ಮತ್ತು ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಮೇಲೆ ನೇರ ಆರೋಪ ಮಾಡಿದ್ದಾರೆ. ಮರಾಠ ಸಮುದಾಯಕ್ಕೆ ನ ಬಿಜೆಪಿಯಿಂದ ದೊಡ್ಡ ಅನ್ಯಾಯವಾಗಿದೆ ಎಂದು ಆರೋಪಿಸಿದ್ದಾರೆ.

ಮರಾಠಾ ಸಮುದಾಯಕ್ಕೆ  ಮೀಸಲು ವಿಚಾರದಲ್ಲಿ ರಾಜ್ಯ ಸರ್ಕಾರ ಯಾವ ಪ್ರಯತ್ನ ಮಾಡಬೇಕೋ ಎಲ್ಲವನ್ನು ಮಾಡಿದೆ. ಕಾಂಗ್ರೆಸ್ ಮುಂದೆ  ನಿಂತು ಹೋರಾಟ ಮಾಡಿದೆ. ಕೇಂದ್ರ ಸರ್ಕಾರ ಈ ಬಗ್ಗೆ ಮಾರ್ಗದರ್ಶನ ನೀಡಬೇಕಿದ್ದು ಏನೂ ಕೇಳಿಸದಂತೆ ಕುಳಿತುಕೊಂಡಿದೆ ಎಂದು ಆರೋಪಿಸಿದ್ದಾರೆ.

'ನೆಹರು-ಗಾಂಧಿ ಕುಟುಂಬಗಳು ರೂಪಿಸಿದ ಯೋಜನೆ ಭಾರತವನ್ನು ಕಾಪಾಡುತ್ತಿದೆ'

ಇನ್ನೊಂದು ಕಡೆ ಮೈತ್ರಿ ಪಕ್ಷ ಶಿವಸೇನೆಯ ಸಂಜಯ್ ರಾವತ್ ಮೇಲೆಯೂ ಕಿಡಿಕಾರಿರುವ ನಾನಾ, ಸಂಜಯ್ ರಾವತ್ ಏನು ಹೇಳುತ್ತಾರೆ ಎಂಬುದರ ಬಗ್ಗೆ ನಾವು ಯಾರೂ ಗಮನ ನೀಡಬೇಕಿಲ್ಲ, ನಾವು ಶಿವಸೇನೆ ಮುಖವಾಣಿ ಸಾಮ್ನಾ ಓದಬೇಕಿಲ್ಲ.  ಸಂಜಯ್ ರಾವತ್ ಬೇರೆಯವರನ್ನು ಟೀಕೆ ಮಾಡುವುದನ್ನೇ ಬೆಳವಣಿಗೆ ಎಂದುಕೊಂಡಿದ್ದಾರೆ. ಟೀಖೆ ಮಾಡುವುದರಿಂದ ಪಕ್ಷ ಬೆಳೆಯುತ್ತದೆ ಎಂದರೆ ಅದು ಅವರ ಮೂರ್ಖತನ ಎಂದಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಟಿಹಾರ್ ಜಂಕ್ಷನ್‌ನಲ್ಲಿ ಮಹಿಳೆಯ ಭಯಾನಕ ಅನುಭವ: 30-40 ಪುರುಷರು ನುಗ್ಗಲು ಯತ್ನ, ಶೌಚಾಲಯದಲ್ಲಿ ಸಿಲುಕಿದ ಮಹಿಳೆ!
ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!