ಮಹಾರಾಷ್ಟ್ರದಲ್ಲಿ ಶೀಘ್ರ ಕೊರೋನಾ 3ನೇ ಅಲೆ: ಸಚಿವ ಆದಿತ್ಯ ಠಾಕ್ರೆ!

Published : Apr 19, 2021, 10:05 AM IST
ಮಹಾರಾಷ್ಟ್ರದಲ್ಲಿ ಶೀಘ್ರ ಕೊರೋನಾ 3ನೇ ಅಲೆ: ಸಚಿವ ಆದಿತ್ಯ ಠಾಕ್ರೆ!

ಸಾರಾಂಶ

ಈಗಾಗಲೇ ನಿತ್ಯ 60000ಕ್ಕೂ ಹೆಚ್ಚು ಕೇಸುಗಳಿಂದಾಗಿ ತತ್ತರಿಸಿ ಹೋಗಿರುವ ಮಹಾರಾಷ್ಟ್ರ| ಮಹಾರಾಷ್ಟ್ರದಲ್ಲಿ ಶೀಘ್ರ ಕೊರೋನಾ 3ನೇ ಅಲೆ: ಸಚಿವ ಆದಿತ್ಯ ಠಾಕ್ರೆ

ಮುಂಬೈ(ಏ.19): ಈಗಾಗಲೇ ನಿತ್ಯ 60000ಕ್ಕೂ ಹೆಚ್ಚು ಕೇಸುಗಳಿಂದಾಗಿ ತತ್ತರಿಸಿ ಹೋಗಿರುವ ಮಹಾರಾಷ್ಟ್ರದಲ್ಲಿ ಶೀಘ್ರವೇ ಕೊರೋನಾ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಸಿಎಂ ಉದ್ಧವ್‌ ಠಾಕ್ರೆ ಅವರ ಪುತ್ರ, ಸಚಿವ ಆದಿತ್ಯ ಠಾಕ್ರೆ ಹೇಳಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ‘ಕೊರೋನಾ 3ನೇ ಅಲೆ ಯಾವಾಗ ಬೇಕಾದರೂ ಎದುರಾಗಬಹುದು. ಅದು 2ನೇ ಅಲೆಗಿಂತ ಪ್ರಬಲವಾಗಿ ಇರಲಿದೆಯೇ ಅಥವಾ ದುರ್ಬಲವಾಗಿ ಇರಲಿದೆಯೇ ಎಂದು ಈಗಲೇ ಹೇಳುವುದು ಕಷ್ಟ. ಹೀಗಾಗಿ ಅರೆ-ಬರೆ ತಯಾರಿಯಿಂದ ಯಾವುದೇ ಪ್ರಯೋಜನ ಇಲ್ಲ.

ಕಳೆದ ವರ್ಷ ರಚಿಸಿದ್ದ ಕಾರ್ಯಪಡೆ ನೀಡುವ ಸಲಹೆ, ವಿಜ್ಞಾನ ಮತ್ತು ವೈದ್ಯಕೀಯ ಸಾಕ್ಷ್ಯಗಳ ಆಧಾರದ ಮೇಲೆ ನಾವು ಪ್ರತಿಯೊಂದು ನಿರ್ಧಾರಗಳನ್ನು ಕೈಗೊಂಡಿದ್ದೇವೆಯೇ ಹೊರತು, ರಾಜಕೀಯವಾಗಿ ಅಲ್ಲ. 3ನೇ ಅಲೆ ತಡೆಗೆ ಈಗಿನಿಂದಲೇ ಸಿದ್ಧವಾಗಬೇಕಿದೆ. ಸದ್ಯ ನಾವು ಆಮ್ಲಜನಕ ಸೌಲಭ್ಯ ಇರುವ 5 ಲಕ್ಷ ಹಾಸಿಗೆಯನ್ನು ಹೊಂದಿದ್ದೇವೆ ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಾರ್‌ನಲ್ಲಿ ಜೋಡಿ 'ಸರಸ' ಸೆರೆಹಿಡಿದ ಟೋಲ್‌ ಮ್ಯಾನೇಜರ್‌, ಸಿಸಿಟಿವಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌!
ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್