
ನವದೆಹಲಿ(ಮೇ.27): ಮೇ 26 ರಿಂದ 28ರ ವರೆಗೆ ಈಶಾನ್ಯ ರಾಜ್ಯಗಳಾದ ಅಸ್ಸಾಂ ಹಾಗೂ ಮೇಘಾಲಯದಲ್ಲಿ ಭಾರೀ ಮಳೆ ಸುರಿಯುವ ಸಂಭವವಿದ್ದು, ಹಾಗಾಗಿ ಈ ಎರಡೂ ರಾಜ್ಯಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಬಂಗಾಳ ಕೊಲ್ಲಿಯಿಂದ ವಾಯುವ್ಯ ಮಾರುತಗಳು ಭಾರೀ ವೇಗದಲ್ಲಿ ಬೀಸುತ್ತಿದ್ದು, ಇವುಗಳು ಭಾರೀ ಮಳೆಯನ್ನು ಹೊತ್ತು ತರಲಿದೆ ಎಂದು ರಾಷ್ಟ್ರೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇದೇ ವೇಳೆ ಜೂನ್ ತಿಂಗಳಲ್ಲಿ ಈಶಾನ್ಯ ರಾಜ್ಯಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಅಂಫಾನ್ ಪ್ರಚಂಡ ಮಾರುತದಿಂದ ಮಾನ್ಸೂನ್ ಮಾರುತಗಳು ಈ ಬಾರಿ ಏ.5 ಕ್ಕೆ ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ