ದೀದಿ ವಿರುದ್ಧ ಸುವೆಂಧು ಸ್ಪರ್ಧೆ ; ಪ.ಬ ಚುನಾವಣೆಗೆ 57 ಅಭ್ಯರ್ಥಿ ಪಟ್ಟಿ ಪ್ರಕಟಿಸಿದ ಬಿಜೆಪಿ!

Published : Mar 06, 2021, 07:04 PM IST
ದೀದಿ ವಿರುದ್ಧ ಸುವೆಂಧು ಸ್ಪರ್ಧೆ ;  ಪ.ಬ ಚುನಾವಣೆಗೆ 57 ಅಭ್ಯರ್ಥಿ ಪಟ್ಟಿ ಪ್ರಕಟಿಸಿದ ಬಿಜೆಪಿ!

ಸಾರಾಂಶ

ಪಶ್ಚಿಮ ಬಂಗಾಳ ಚುನಾವಣಗೆ ಆಡಳಿತರೂಢ ತೃಣಮೂಲ ಕಾಂಗ್ರೆಸ್ ಈಗಾಗಲೇ ಅಭ್ಯರ್ಥಿಗಳ ಪಟ್ಟಿ ಘೋಷಿಸಿದೆ. ಇದೀಗ ಬಿಜೆಪಿ ಮೊದಲೆರೆಡು ಹಂತದ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿದೆ. ವಿಶೇಷ ಅಂದರೆ ನಂದೀಗ್ರಾಮದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ  ಸುವೆಂದು ಅಧಿಕಾರಿ ಸ್ಪರ್ಧಿಸುತ್ತಿದ್ದಾರೆ. ಬಿಜೆಪಿ ಬಿಡುಗಡೆ ಮಾಡಿದ ಪಟ್ಟಿ ವಿವರ ಇಲ್ಲಿದೆ.

ಕೋಲ್ಕತಾ(ಮಾ.06): ಪಶ್ಚಿಮ ಬಂಗಾಳ ಚುನಾವಣೆ ಕಾವು ಏರುತ್ತಿದೆ. ಮಾರ್ಚ್ 27 ರಂದು ಬಂಗಾಳ ಚುನಾವಣೆ ಹಂತ ಹಂತಗಳಲ್ಲಿ ಆರಂಭಗೊಳ್ಳಲಿದೆ. ಬಂಗಾಳದಲ್ಲಿ ಮೊದಲ ಬಾರಿಗೆ ಕಮಲ ಅರಳಿಸುವ ವಿಶ್ವಾಸದಲ್ಲಿರುವ ಬಿಜೆಪಿ ಅಳೆದು ತೂಗಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.

ಪಶ್ಚಿಮ ಬಂಗಾಳ ಚುನಾವಣೆ: 291 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಿದ ಮಮತಾ ಬ್ಯಾನರ್ಜಿ!.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ 294 ಸ್ಥಾನಗಳ ಪೈಕಿ ಮೊದಲೆರೆಡು ಹಂತದ ಚುನಾವಣೆಗೆ ಬಿಜೆಪಿ 57 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಟಿಎಂಸಿ ತೊರೆದು ಬಿಜೆಪಿ ಸೇರಿದ ಸುವೆಂದು ಅಧಿಕಾರಿ ಇದೀಗ ನಂದೀಗ್ರಾಮದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಕಣಕ್ಕಿಳಿಯಲಿದ್ದಾರೆ. 

ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಬಂಗಾಳ ಚುನಾವಣೆ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗಿದೆ. ಈ ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಾರಿಗೆ ಸಚಿವ ನಿತಿನ್ ಗಡ್ಕರಿ ಕೂಡ ಪಾಲ್ಗೊಂಡಿದ್ದರು.

ಆಟವಾಡ್ತಾ ಆದರ್ಶ ಮರೆತ ದೀದಿ: ಬಿಜೆಪಿಗೆ ಸೇರಿದ ಮಾಜಿ ಟಿಎಂಸಿ ನಾಯಕ ತ್ರಿವೇದಿ!.

ಪಶ್ಚಿಮ ಬಂಗಾಳದ ಚುನಾವಣೆ ಮಾರ್ಚ್ 27 ರಂದು ಆರಂಭಗೊಳ್ಳಲಿದೆ. 8 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಒಟ್ಟು 66 ದಿನಗಳ ಕಾಲ ನಡೆಯಲಿದೆ. ಮೇ 2 ರಂದು ಫಲಿತಾಂಶ ಹೊರಬೀಳಲಿದೆ.
8 ಹಂತದ ಚುನಾವಣೆ:
1ನೇ ಹಂತದ ಚುನಾವಣೆ: ಮಾರ್ಚ್ 27
2ನೇ ಹಂತದ ಚುನಾವಣೆ: ಎಪ್ರಿಲ್ 1
3ನೇ ಹಂತದ ಚುನಾವಣೆ: ಎಪ್ರಿಲ್ 6
4ನೇ ಹಂತದ ಚುನಾವಣೆ: ಎಪ್ರಿಲ್ 10
5ನೇ ಹಂತದ ಚುನಾವಣೆ: ಎಪ್ರಿಲ್ 17
6ನೇ ಹಂತದ ಚುನಾವಣೆ: ಎಪ್ರಿಲ್ 22
7ನೇ ಹಂತದ ಚುನಾವಣೆ: ಎಪ್ರಿಲ್ 26
8ನೇ ಹಂತದ ಚುನಾವಣೆ: ಎಪ್ರಿಲ್ 29

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದೇಗುಲ ಪ್ರವೇಶಿಸುವುದಿಲ್ಲ ಎಂದ ಕ್ರಿಶ್ಚಿಯನ್ ಮಿಲಿಟರಿ ಅಧಿಕಾರಿಯ ಅಮಾನತು ಎತ್ತಿ ಹಿಡಿದ ಸುಪ್ರೀಂಕೋರ್ಟ್‌ ಹೇಳಿದ್ದೇನು?
ಇಂಡಿಗೋದ ಭಾರೀ ಕುಸಿತ: ಒಂದೇ ವಿಮಾನಯಾನ ಸಂಸ್ಥೆಯ ಏಕಸ್ವಾಮ್ಯವಾದಾಗ