ಕೋಲ್ಕತಾ: ಟಿಎಂಸಿ ಮುಖಂಡನ ಮನೆಯಲ್ಲಿ ಬಾಂಬ್ ಸ್ಪೋಟ ಸಂಭವಿಸಿ 3 ಮಂದಿ ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರ ಜಿಲ್ಲೆಯಲ್ಲಿ ನಡೆದಿದೆ. ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ರಾಲಿ ನಿಗದಿಯಾಗಿದ್ದ ಪೂರ್ವ ಮಿಡ್ನಾಪುರದಿಂದ 1.5 ಕಿ.ಮೀ ದೂರದಲ್ಲಿರುವ ನಾರ್ಯಂಬಿಲ ಗ್ರಾಮದ ಟಿಎಂಸಿ ಬೂತ್ ಅಧ್ಯಕ್ಷನ ಮನೆಯಲ್ಲಿ ಘಟನೆ ಸಂಭವಿಸಿದೆ. ಶುಕ್ರವಾರ ರಾತ್ರಿ 11.15ರ ಹೊತ್ತಿಗೆ ನಡೆದ ಬಾಂಬ್ ಸ್ಫೋಟದಿಂದಾಗಿ ಮನೆ ಸಂಪೂರ್ಣವಾಗಿ ಹಾನಿಗೊಂಡಿದೆ. ಘಟನೆ ಬಗ್ಗೆ ತನಿಖೆ ನಡೆಯುತ್ತಿದ್ದು, ಸ್ಫೋಟದ ಹಿಂದಿನ ಉದ್ಧೇಶ ತಿಳಿದು ಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಬಿಜೆಪಿ ಆರೋಪ:
ಟಿಎಂಸಿ ನಾಯಕನ (TMC Leader) ಮನೆಯಲ್ಲಿ ಬಾಂಬ್ (Bomb) ತಯಾರಿಸಲಾಗುತ್ತಿತ್ತು. ಪಶ್ಚಿಮ ಬಂಗಾಳದಲ್ಲಿ (West Bengal) ಬಾಂಬ್ ತಯಾರಿಕೆ ಉದ್ಯಮ ಮಾತ್ರ ಅಭಿವೃದ್ಧಿಯಾಗುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ದಿಲೀಪ್ ಘೋಷ್ (Dilip Ghosh) ಆರೋಪಿಸಿದ್ದಾರೆ. ಈ ಘಟನೆಯ ಕುರಿತಂತೆ ಸಿಎಂ ಮಮತಾ ಬ್ಯಾನರ್ಜಿ ಯಾಕೆ ಮೌನವಹಿಸಿದ್ದಾರೆ ಎಂದು ಟಿಎಂಸಿ ಹಿರಿಯ ನಾಯಕ ಸುಜನ್ ಚಕ್ರವರ್ತಿ ಪ್ರಶ್ನಿಸಿದ್ದಾರೆ. ಆದರೆ, ಆರೋಪಗಳಿಗೆ ಪ್ರತಿಕ್ರಿಯಿಸಿದ ಟಿಎಂಸಿ ರಾಜ್ಯ ಕಾರ್ಯದರ್ಶಿ ಕುನಾಲ್ ಘೋಷ್ (Kunal Ghosh)‘ಯಾವುದೇ ಪುರಾವೆಗಳಿಲ್ಲದೇ ಆಡಳಿತ ಪಕ್ಷವನ್ನು ದೂರುವುದು ವಿರೋಧ ಪಕ್ಷಗಳಿಗೆ ಚಾಳಿಯಾಗಿಬಿಟ್ಟಿದೆ’ ಎಂದು ತಿರುಗೇಟು ನೀಡಿದ್ದಾರೆ.
ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್, ಝಲ್ದಾ ವಿಶ್ವಾಸಮತ ಕಳೆದುಕೊಂಡ ಟಿಎಂಸಿ!
'ಆತ್ಮಾಹುತಿ ಬಾಂಬ್' ಬಗ್ಗೆ ಝಾಕೀರ್ ನಾಯ್ಕ್ ಟ್ವೀಟ್: ಶಾರೀಕ್ ಜೊತೆ ಲಿಂಕ್?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ