
ಕೋಲ್ಕತಾ(ಮಾ.11): ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯತ್ತ ಟಿಎಂಸಿ ಸಚಿವರು ಹಾಗೂ ಶಾಸಕರ ವಲಸೆ ಮುಂದುವರಿದಿದ್ದು, ಟಿಕೆಟ್ ನಿರಾಕರಿಸಿದ ಕಾರಣಕ್ಕೆ ಸಚಿವ ಬಚ್ಚು ಹನ್ಸ್ದಾ ಹಾಗೂ ಶಾಸಕ ಗೌರಿ ಶಂಕರ್ ದತ್ತಾ ಬಿಜೆಪಿಗೆ ಸೇರ್ಪಡೆ ಆಗಿದ್ದಾರೆ.
ಇದೇ ವೇಳೆ ಬಂಗಾಳಿ ನಟ ಬೊನಿ ಸೇನ್ಗುಪ್ತಾ, ಟಿಎಂಸಿ ಸಂಸದೆ ಪ್ರತಿಮಾ ಮಂಡಲ್ ಅವರ ಕಿರಿಯ ಸಹೋದರಿ ಜಯಂತಿ ಬಿಜೆಪಿಗೆ ಸೇರ್ಪಡೆ ಆಗಿದ್ದಾರೆ. ಇತ್ತೀಚೆಗಷ್ಟೇ ಐವರು ಟಿಎಂಸಿ ಶಾಸಕರು ಬಿಜೆಪಿಗೆ ಸೇರ್ಪಡೆ ಆದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. 2019ರ ಲೋಕಸಭೆ ಚುನಾವಣೆಯ ಬಳಿಕ ಇದುವರೆಗೆ 26 ಟಿಎಂಸಿ ಶಾಸಕರು ಹಾಗೂ 2 ಇಬ್ಬರು ಸಂಸದರು ಬಿಜೆಪಿಗೆ ಸೇರ್ಪಡೆ ಆಗಿದ್ದಾರೆ.
ಕ್ಯಾಥೋಲಿಕ್ ಪಾದ್ರಿ ಬಿಜೆಪಿಗೆ:
ಕೋಲ್ಕತಾದ ರೋಮನ್ ಕ್ಯಾಥೋಲಿಕ್ ಚಚ್ರ್ನ ಪಾದ್ರಿ ರೊಡ್ನಿ ಬೊರ್ನಿಯೋ ಅವರು ಫಾದರ್ ಹುದ್ದೆಗೆ ರಾಜೀನಾಮೆ ನೀಡಿದ್ದು, ಬಿಜೆಪಿಗೆ ಮಂಗಳವಾರ ಅಧಿಕೃತವಾಗಿ ಸೇರ್ಪಡೆ ಆಗಿದ್ದಾರೆ. ಬೋರ್ನಿಯೋ ಅವರು 22 ವರ್ಷಗಳ ಕಾಲ ಚಚ್ರ್ನ ಪಾದ್ರಿಯಾಗಿ ಸೇವೆ ಸಲ್ಲಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ