
ಕೋಲ್ಕತಾ(ಜೂ.14): ಕೊರೋನಾ 2ನೇ ಅಲೆ ನಿಯಂತ್ರಣಕ್ಕೆ ಹೇರಿದ್ದ ಲಾಕ್ಡೌನ್ ಒಂದೊಂದೆ ರಾಜ್ಯಗಳು ಅನ್ಲಾಕ್ ಮಾಡುತ್ತಿದೆ. ಕರ್ನಾಟಕ ಸೇರದಂತೆ ಕೆಲ ರಾಜ್ಯಗಳು ಕೆಲ ವಿನಾಯಿತಿಗಳೊಂದಿಗೆ ಲಾಕ್ಡೌನ್ ಮುಂದುವರಿಸಿದೆ. ಇದೀಗ ಪಶ್ಚಿಮ ಬಂಗಾಳ ಜುಲೈ 1ರ ವರೆಗೆ ಲಾಕ್ಡೌನ್ ವಿಸ್ತರಿಸಿದೆ.
ಅನ್ಲಾಕ್ ಎಫೆಕ್ಟ್, ಬೆಂಗಳೂರಿಗೆ ಜನರ ವಲಸೆ, ರೈಲ್ವೇ ನಿಲ್ದಾಣದಲ್ಲಿ ಜನದಟ್ಟಣೆ.
ಲಾಕ್ಡೌನ್ ವಿಸ್ತರಣೆ ಜೊತೆಗೆ ಕೆಲ ವಿನಾಯಿತಿಗಳನ್ನು ಪಶ್ಚಿಮ ಬಂಗಾಳದಲ್ಲಿ ನೀಡಲಾಗಿದೆ. ಸರ್ಕಾರಿ ಕಚೇರಿಗಳಲ್ಲಿ ಶೇಕಡಾ 25 ರಷ್ಟು ಮಂದಿ ಕೆಲಸ ನಿರ್ವಹಿಸಲು ಅನುಮತಿ ನೀಡಲಾಗಿದೆ. ಸಂಚಾರಕ್ಕೆ ಇ ಪಾಸ್ ಜಾರಿಮಾಡಲಾಗಿದೆ. ಮಂಜಾನೆ ನಡಿಗೆ, ವ್ಯಾಯಾಮಕ್ಕಾಗಿ ಬೆಳಗ್ಗೆ 6 ರಿಂದ 9 ಗಂಟೆವರೆಗೆ ಪಾರ್ಕ್ ತೆರೆಯಲಾಗುತ್ತದೆ. ಆದರೆ ಲಸಿಕೆ ಪಡೆದವರಿಗೆ ಮಾತ್ರ ಪ್ರವೇಶ.
ಮಾರುಕಟ್ಟೆ, ಮಂಡಿ ಸೇರಿದಂತೆ ಎಲ್ಲಾ ವ್ಯಾಪಾರ ವಹಿವಾಟು ಬೆಳಗ್ಗೆ 7 ರಿಂದ 11 ಗಂಟೆ ವರೆಗೆ ಅನುಮತಿ ನೀಡಲಾಗಿದೆ. ಮಾರಾಟ ಮಳಿಗೆ, ಅಂಗಡಿ ಮುಂಗಟ್ಟು ಬೆಳಗ್ಗೆ 11 ಗಂಟೆಯಿಂದ ಸಂಜೆ 6ರ ವರೆಗೆ ತೆರೆಯಲು ಅವಕಾಶ ಮಾಡಿಕೊಡಲಾಗಿದೆ.
ಲಾಕ್ಡೌನ್ ಸಡಿಲಿಕೆ: ಇನ್ನೂ ಇದೆ ಕೊರೋನಾ ಎಚ್ಚರ..!
ರೆಸ್ಟೋರೆಂಟ್ ಹಾಗೂ ಬಾರ್ ಮಧ್ಯಾಹ್ನ 12 ರಿಂದ ರಾತ್ರಿ 8 ಗಂಟೆ ವರೆಗೆ ತೆರೆಯಲು ಅವಕಾಶ ನೀಡಲಾಗಿದೆ. ಆದರೆ ಕೇವಲ 50 ಶೇಕಡಾ ಮಂದಿಗೆ ಮಾತ್ರ ಪ್ರವೇಶ ನೀಡಲು ಸೂಚಿಸಲಾಗಿದೆ.
ಶಾಲಾ ಕಾಲೇಜುಗಳು ಹಿಂದಿನಂತೆ ಮುಚ್ಚಿರುತ್ತದೆ. ಜನರ ಓಡಾಟಕ್ಕೆ ಬೆಳಗ್ಗೆ 9 ರಿಂದ ಸಂಜೆ 5 ಗಂಟೆ ವರೆಗೆ ಅವಕಾಶ ನೀಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ