
ಕೋಲ್ಕತಾ(ಏ.10): ಟಿಎಂಸಿ-ಬಿಜೆಪಿ-ಎಡರಂಗದ ನಡುವೆ ತ್ರಿಕೋನ ಹಣಾಹಣಿ ಏರ್ಪಟ್ಟಿರುವ ಪಶ್ಚಿಮ ಬಂಗಾಳದ 8 ಹಂತಗಳ ವಿಧಾನಸಭೆ ಚುನಾವಣೆ ಪೈಕಿ ಶನಿವಾರ 4ನೇ ಹಂತದ ಮತದಾನ ನಡೆಯಲಿದೆ. ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ, ಬಂಗಾಳದ ಸಚಿವರಾದ ಪಾರ್ಥ ಚಟರ್ಜಿ ಹಾಗೂ ಅರೂಪ್ ವಿಶ್ವಾಸ್ ಅವರು ಈ ಹಂತದಲ್ಲಿ ತಮ್ಮ ಭವಿಷ್ಯ ಪರೀಕ್ಷೆಗೆ ಇಳಿದಿದ್ದಾರೆ.
ದಕ್ಷಿಣ 24 ಪರಗಣ, ಅಲಿಪುರದ್ವಾರ, ಕೂಚ್ ಬೆಹಾರ್ ಜಿಲ್ಲೆ ವ್ಯಾಪ್ತಿಯ 44 ಕ್ಷೇತ್ರಗಳಲ್ಲಿ ನಡೆಯಲಿರುವ ಮತದಾನದಲ್ಲಿ ಒಟ್ಟಾರೆ 1.15 ಕೋಟಿ ಮತದಾರರು ಚುನಾವಣಾ ಅಖಾಡದಲ್ಲಿರುವ 373 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಣಯಿಸಲಿದ್ದಾರೆ.
ಸುಗಮ ಮತದಾನಕ್ಕಾಗಿ 15,940 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಅಲ್ಲದೆ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಸಿಆರ್ಪಿಎಫ್ನ 789 ತುಕಡಿಗಳನ್ನು ನಿಯೋಜಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಪ್ರತಿಯೊಂದು ತುಕಡಿಗಳಲ್ಲಿ ಅಧಿಕಾರಿಗಳು ಸೇರಿದಂತೆ 100 ಸಿಬ್ಬಂದಿ ಇದ್ದಾರೆ.
ಬಿಜೆಪಿ ಅಭ್ಯರ್ಥಿಗಳ ಪರ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟಾ್ರಧ್ಯಕ್ಷ ಜೆ.ಪಿ ನಡ್ಡಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭರ್ಜರಿ ಪ್ರಚಾರ ರಾರಯಲಿಗಳನ್ನು ನಡೆಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ